ಫೆ.24 ರಿಂದ 28ರವರೆಗೆ ನಡೆದ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ಐ. ಎ. ಐ. ಎಮ್ ಸಹಯೋಗದಲ್ಲಿ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ರಕ್ತ ಹೀನತೆ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಸ್ತ್ರೀರೋಗ ತಜ್ಞರಾದ ಡಾ. ಇಂದಿರಾ ರವರು ಮಾತನಾಡಿ “ರಕ್ತ ಹೀನತೆ ಸಮಸ್ಯೆ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿದ್ದು ಇದು ಆತಂಕಕಾರಿಯಾಗಿದೆ. ತಾಯಂದಿರ ಸಾವಿಗೆ ಮುಖ್ಯ ಕಾರಣ ರಕ್ತ ಹೀನತೆ. ಹಾಗಾಗಿ ನಾವು ನಮ್ಮ ಆಹಾರ ಶೈಲಿಯ ಮೇಲೆ ಗಮನಹರಿಸಬೇಕಿದೆ. ಫೈಬರ್, ಪ್ರೋಟೀನ್, ವಿಟಮಿನ್ ನೀಡುವ ಆಹಾರಗಳನ್ನು ಪ್ರಜ್ಞಾಪೂರ್ವಕವಾಗಿ ಸೇವಿಸುವುದನ್ನು ಅಳವಡಿಸಿಕೊಳ್ಳಬೇಕು ಹಾಗೂ ಅವುಗಳು ಜೀರ್ಣವಾಗುವಷ್ಟು ದೈಹಿಕ ಚಟುವಟಿಕೆ ಇರಬೇಕು. ಹೆಣ್ಣಿಗೆ 12 ವರ್ಷಗಳು ತುಂಬಿದ ನಂತರದಿಂದ ತನ್ನ ಜೀವನಾವದಿ ಮುಗಿಯುವವರೆಗು 12 ಗ್ರಾಂ ಎಚ್. ಬಿ ಇದ್ದರೆ ಯಾವುದೇ ರೋಗ ಬರುವುದಿಲ್ಲ ಜೊತೆಗೆ ದೇಹದ ಆರೋಗ್ಯಕ್ಕೆ ಬೇಕಾದ ಚಟುವಟಿಕೆಗಳನ್ನು ಮಾಡಬೇಕು. ಈ ರೀತಿ ಮಾಡುವುದರಿಂದ ಯಾವ ರೋಗ ಬಂದರು ಜಯಿಸಿಕೊಳ್ಳಬಹುದು” ಎಂದು ಹೇಳಿದರು.
ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ನ ಅಧ್ಯಕ್ಷ ಚದಾಂದಮೂರ್ತಿ ಮಾತನಾಡಿ, ಇಂದಿನ ಮಕ್ಕಳು ಅಮ್ಮನ ಕೈ ತುತ್ತಿಗಿಂತಲು ರಸ್ತೆ ಬದಿಯಲ್ಲಿನ ಪಾನಿಪೂರಿಯವರ ಕೈ ತುತ್ತುಗಳನ್ನೇ ಹೆಚ್ಚಾಗಿ ತಿನ್ನುವಂತಾಗಿದೆ. ಇದರಿಂದ ಆರೋಗ್ಯ ಹಾಳಾಗುವುದಲ್ಲದೆ ದೈಹಿಕ ಬೆಳೆವಣಿಗೆ ಮೇಲೂ ಪರಿಣಾಮ ಬೀರಲಿದೆ. ಅದರಲ್ಲೂ ಹೆಣ್ಣು ಮಕ್ಕಳು ರಕ್ತ ಹೀನರಾದರೆ ಇಡೀ ಸಮಾಜವೇ ಆನಾರೋಗ್ಯಕ್ಕೆ ಒಳಗಾಗುವಂತಾಗಲಿದೆ ಎಂದರು.
ಶಿಬಿರದ ಉದ್ಘಾಟನ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಸುದರ್ಶನ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಐ. ಎ. ಐ. ಎಮ್ ನ ಶುಕ್ಲಾ ಆರ್ , ಸ್ನೇಹ ಸಿಂಗ್, ಸ್ವಾತಿ, ಚೈತ್ರ ಮತ್ತು ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ದಿವ್ಯಶ್ರೀ, ವರುಣ್ ರಾಜ್, ನಂಜಪ್ಪ, ಸುಷ್ಮಾ, ಭಾರತಿ ಹಾಗೂ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ನ ಮುರುಳಿ, ನವೀನ್ ಕುಮಾರ್,ಸರಸ್ವತಿ, ಲಾವಣ್ಯ, ಮತ್ತು ಸಂಧ್ಯಾ ಉಪಸ್ಥಿತರಿದ್ದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…