Categories: ರಾಜ್ಯ

ಮಂಗಳಮುಖಿಗೆ ಮನಸೋತ ವಿವಾಹಿತ ಮಹಿಳೆ: ತಾಳಿ ಕಟ್ಟಿದ ಗಂಡನನ್ನೆ ತ್ಯಜಿಸಲು ಸಿದ್ಧವಾದ ಗೃಹಣಿ: ತನ್ನ ಪತ್ನಿ ಬೇಕು ಎಂದು ಪಟ್ಟುಹಿಡಿದ ಪತಿ

ಹಾವೇರಿ: ಮೂರು ಮಕ್ಕಳ ಗೃಹಿಣಿಯೊಬ್ಬರು ನಿರಂತರವಾಗಿ ಮಂಗಳಮುಖಿಯ ಸಹವಾಸ ಮಾಡಿ ತಾಳಿ ಕಟ್ಟಿದ ಗಂಡನನ್ನೆ ತ್ಯಜಿಸಲು ಮುಂದಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಘಟನೆ ಎರಡು ತಿಂಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ತನ್ನ ಪತ್ನಿ ಮಂಗಳಮುಖಿಯೊಂದಿಗೆ ತೆರಳಿದ್ದಾಳೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ಲಿಂಗ ಪರಿವರ್ತನೆ ಮಾಡಿಕೊಳ್ಳಲು ಒಪ್ಪದ ಪತಿ ವಿರುದ್ಧ ಪತ್ನಿ  ಸಿಡಿದೆದ್ದಾರೆ. ದಂಪತಿ ಮೂಲತಃ ವಿಜಯಪುರ ಜಿಲ್ಲೆಯ ನಿವಾಸಿಗಳಾಗಿದ್ದು, ರಾಣೇಬೆನ್ನೂರಲ್ಲಿ ವಾಸವಾಗಿದ್ದಾರೆ ಎಂದು ತಿಳಿದುಬಂದಿದೆ.

ಸಂತ್ರಸ್ತೆಯ ಮನಸ್ಸು ಮಂಗಳಮುಖಿಯರು ಬದಲಿಸಿದ್ದಾರೆ ಎಂದು ಪತಿ ಯಮನಪ್ಪ ದೂರು ನೀಡಿದ್ದಾರೆ. ಗೃಹಿಣಿಯು ತನ್ನ ಪತಿ ಜೊತೆ ಹೋಗಲು ಒಪ್ಪದ ಕಾರಣ, ಸದ್ಯ ಸಾಂತ್ವಾನ ಕೇಂದ್ರದಲ್ಲಿ ಸಂಧಾನ ಕಾರ್ಯ ನಡೆಸಲಾಗುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಲೈಂಗಿಕ ಅಲ್ಪಸಂಖ್ಯಾತ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರತಿಕ್ರಿಯಿಸಿ, ಇದು ಅವರ ಅವರ ಖಾಸಗಿ ವಿಚಾರ, ಅವರಿಬ್ಬರ ಪ್ರೀತಿಯನ್ನು ನಾನು ಒಪ್ಪಿಕೊಳ್ತೇನೆ ಜೊತೆಗೆ ಗೌರವಿಸ್ತೇನೆ. ಆದರೆ ಎಲ್ಲಾ ಮಂಗಳಮುಖಿಯರು ಬಲವಂತವಾಗಿ ಯಾರನ್ನು ಪರಿವರ್ತನೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೆಣ್ಣು ಹೆಣ್ಣನ್ನ ಪ್ರೀತ್ಸೋದು, ಗಂಡು ಗಂಡನ್ನ ಪ್ರೀತ್ಸೋದು ಸಾಂವಿಧಾನಿಕವಾಗಿ ಸರಿ ಇದೆ. ಹೀಗಾಗಿ ನಮಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ. ನಾವು ಸಂಧಾನ ಮಾಡಿದಾಗಲೂ ಅವರು ತನ್ನ ನಿರ್ಧಾರ ತೆಗೆದುಕೊಂಡಿದ್ದಾರೆ.

ಲಿಂಗ ಬದಲಾವಣೆ, ಒತ್ತಾಯದ ಮನಃಪರಿವರ್ತನೆ ನಾವು ಮಾಡುವುದಿಲ್ಲ, ಆದರೆ ಅವರಿಬ್ಬರು ಪ್ರೀತಿ ಮಾಡುತ್ತಾ ಇರೋದು ಸತ್ಯ ಇದೆ ಎಂದಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago