Categories: ರಾಜ್ಯ

ಮಂಗಳಮುಖಿಗೆ ಮನಸೋತ ವಿವಾಹಿತ ಮಹಿಳೆ: ತಾಳಿ ಕಟ್ಟಿದ ಗಂಡನನ್ನೆ ತ್ಯಜಿಸಲು ಸಿದ್ಧವಾದ ಗೃಹಣಿ: ತನ್ನ ಪತ್ನಿ ಬೇಕು ಎಂದು ಪಟ್ಟುಹಿಡಿದ ಪತಿ

ಹಾವೇರಿ: ಮೂರು ಮಕ್ಕಳ ಗೃಹಿಣಿಯೊಬ್ಬರು ನಿರಂತರವಾಗಿ ಮಂಗಳಮುಖಿಯ ಸಹವಾಸ ಮಾಡಿ ತಾಳಿ ಕಟ್ಟಿದ ಗಂಡನನ್ನೆ ತ್ಯಜಿಸಲು ಮುಂದಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಘಟನೆ ಎರಡು ತಿಂಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ತನ್ನ ಪತ್ನಿ ಮಂಗಳಮುಖಿಯೊಂದಿಗೆ ತೆರಳಿದ್ದಾಳೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ಲಿಂಗ ಪರಿವರ್ತನೆ ಮಾಡಿಕೊಳ್ಳಲು ಒಪ್ಪದ ಪತಿ ವಿರುದ್ಧ ಪತ್ನಿ  ಸಿಡಿದೆದ್ದಾರೆ. ದಂಪತಿ ಮೂಲತಃ ವಿಜಯಪುರ ಜಿಲ್ಲೆಯ ನಿವಾಸಿಗಳಾಗಿದ್ದು, ರಾಣೇಬೆನ್ನೂರಲ್ಲಿ ವಾಸವಾಗಿದ್ದಾರೆ ಎಂದು ತಿಳಿದುಬಂದಿದೆ.

ಸಂತ್ರಸ್ತೆಯ ಮನಸ್ಸು ಮಂಗಳಮುಖಿಯರು ಬದಲಿಸಿದ್ದಾರೆ ಎಂದು ಪತಿ ಯಮನಪ್ಪ ದೂರು ನೀಡಿದ್ದಾರೆ. ಗೃಹಿಣಿಯು ತನ್ನ ಪತಿ ಜೊತೆ ಹೋಗಲು ಒಪ್ಪದ ಕಾರಣ, ಸದ್ಯ ಸಾಂತ್ವಾನ ಕೇಂದ್ರದಲ್ಲಿ ಸಂಧಾನ ಕಾರ್ಯ ನಡೆಸಲಾಗುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಲೈಂಗಿಕ ಅಲ್ಪಸಂಖ್ಯಾತ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರತಿಕ್ರಿಯಿಸಿ, ಇದು ಅವರ ಅವರ ಖಾಸಗಿ ವಿಚಾರ, ಅವರಿಬ್ಬರ ಪ್ರೀತಿಯನ್ನು ನಾನು ಒಪ್ಪಿಕೊಳ್ತೇನೆ ಜೊತೆಗೆ ಗೌರವಿಸ್ತೇನೆ. ಆದರೆ ಎಲ್ಲಾ ಮಂಗಳಮುಖಿಯರು ಬಲವಂತವಾಗಿ ಯಾರನ್ನು ಪರಿವರ್ತನೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೆಣ್ಣು ಹೆಣ್ಣನ್ನ ಪ್ರೀತ್ಸೋದು, ಗಂಡು ಗಂಡನ್ನ ಪ್ರೀತ್ಸೋದು ಸಾಂವಿಧಾನಿಕವಾಗಿ ಸರಿ ಇದೆ. ಹೀಗಾಗಿ ನಮಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ. ನಾವು ಸಂಧಾನ ಮಾಡಿದಾಗಲೂ ಅವರು ತನ್ನ ನಿರ್ಧಾರ ತೆಗೆದುಕೊಂಡಿದ್ದಾರೆ.

ಲಿಂಗ ಬದಲಾವಣೆ, ಒತ್ತಾಯದ ಮನಃಪರಿವರ್ತನೆ ನಾವು ಮಾಡುವುದಿಲ್ಲ, ಆದರೆ ಅವರಿಬ್ಬರು ಪ್ರೀತಿ ಮಾಡುತ್ತಾ ಇರೋದು ಸತ್ಯ ಇದೆ ಎಂದಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

10 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

21 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

22 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

22 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago