ಹಾವೇರಿ: ಮೂರು ಮಕ್ಕಳ ಗೃಹಿಣಿಯೊಬ್ಬರು ನಿರಂತರವಾಗಿ ಮಂಗಳಮುಖಿಯ ಸಹವಾಸ ಮಾಡಿ ತಾಳಿ ಕಟ್ಟಿದ ಗಂಡನನ್ನೆ ತ್ಯಜಿಸಲು ಮುಂದಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಘಟನೆ ಎರಡು ತಿಂಗಳ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ತನ್ನ ಪತ್ನಿ ಮಂಗಳಮುಖಿಯೊಂದಿಗೆ ತೆರಳಿದ್ದಾಳೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ಲಿಂಗ ಪರಿವರ್ತನೆ ಮಾಡಿಕೊಳ್ಳಲು ಒಪ್ಪದ ಪತಿ ವಿರುದ್ಧ ಪತ್ನಿ ಸಿಡಿದೆದ್ದಾರೆ. ದಂಪತಿ ಮೂಲತಃ ವಿಜಯಪುರ ಜಿಲ್ಲೆಯ ನಿವಾಸಿಗಳಾಗಿದ್ದು, ರಾಣೇಬೆನ್ನೂರಲ್ಲಿ ವಾಸವಾಗಿದ್ದಾರೆ ಎಂದು ತಿಳಿದುಬಂದಿದೆ.
ಸಂತ್ರಸ್ತೆಯ ಮನಸ್ಸು ಮಂಗಳಮುಖಿಯರು ಬದಲಿಸಿದ್ದಾರೆ ಎಂದು ಪತಿ ಯಮನಪ್ಪ ದೂರು ನೀಡಿದ್ದಾರೆ. ಗೃಹಿಣಿಯು ತನ್ನ ಪತಿ ಜೊತೆ ಹೋಗಲು ಒಪ್ಪದ ಕಾರಣ, ಸದ್ಯ ಸಾಂತ್ವಾನ ಕೇಂದ್ರದಲ್ಲಿ ಸಂಧಾನ ಕಾರ್ಯ ನಡೆಸಲಾಗುತ್ತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಲೈಂಗಿಕ ಅಲ್ಪಸಂಖ್ಯಾತ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರತಿಕ್ರಿಯಿಸಿ, ಇದು ಅವರ ಅವರ ಖಾಸಗಿ ವಿಚಾರ, ಅವರಿಬ್ಬರ ಪ್ರೀತಿಯನ್ನು ನಾನು ಒಪ್ಪಿಕೊಳ್ತೇನೆ ಜೊತೆಗೆ ಗೌರವಿಸ್ತೇನೆ. ಆದರೆ ಎಲ್ಲಾ ಮಂಗಳಮುಖಿಯರು ಬಲವಂತವಾಗಿ ಯಾರನ್ನು ಪರಿವರ್ತನೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹೆಣ್ಣು ಹೆಣ್ಣನ್ನ ಪ್ರೀತ್ಸೋದು, ಗಂಡು ಗಂಡನ್ನ ಪ್ರೀತ್ಸೋದು ಸಾಂವಿಧಾನಿಕವಾಗಿ ಸರಿ ಇದೆ. ಹೀಗಾಗಿ ನಮಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ. ನಾವು ಸಂಧಾನ ಮಾಡಿದಾಗಲೂ ಅವರು ತನ್ನ ನಿರ್ಧಾರ ತೆಗೆದುಕೊಂಡಿದ್ದಾರೆ.
ಲಿಂಗ ಬದಲಾವಣೆ, ಒತ್ತಾಯದ ಮನಃಪರಿವರ್ತನೆ ನಾವು ಮಾಡುವುದಿಲ್ಲ, ಆದರೆ ಅವರಿಬ್ಬರು ಪ್ರೀತಿ ಮಾಡುತ್ತಾ ಇರೋದು ಸತ್ಯ ಇದೆ ಎಂದಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…