3 ಮದುವೆಯಾದ ಐನಾತಿ..? ಪ್ರೀತಿಸಿ ಮದುವೆ ಆಗಿ ಯುವಕರಿಂದ ಹಣ ದೋಚಿರುವ ಆರೋಪ: ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಗಂಡಂದಿರು.!

ಆಕೆ ನೋಡಲು ಸುರ ಸುಂದರಿ. ತನ್ನ ಅಂದವನ್ನೇ ಬಂಡವಾಳ ಮಾಡಿಕೊಂಡು ಯುವಕರಿಗೆ ಬಲೆ ಬೀಸುತ್ತಿದ್ದಳು. ಇವಳ ಮಾಯಾ ಜಾಲಕ್ಕೆ ಬಲಿಯಾಗಿದ್ದು ಮಾತ್ರ ಡಿಲಿವರಿ ಬಾಯ್. ಊರೂರು ಅಲೆದು ಜೀವನ ಸಾಗಿಸುತ್ತಿದ್ದ ಯುವನ ಬಳಿ ಮದುವೆಯ ಆಟ ಆಡಿ ಲಕ್ಷ ಲಕ್ಷ ಹಣ ದೋಚಿರುವ ಆರೋಪ ಕೇಳಿ ಬಂದಿದೆ.

ಹೌದು ಹೀಗೆ ಪೋಲೀಸ್ ಠಾಣೆಯ ಮುಂದೆ ಹೆಂಡತಿ ಜೊತೆಗೆ ಇರುವ ಫೋಟೋ ತೋರಿಸುತ್ತಿರುವ ಗಂಡ, ತನ್ನ ಬಳಿ ಹಣ ಹಾಕಿಸಿಕೊಂಡಿರುವ ಲಿಸ್ಟ್ ತೋರಿಸುತ್ತಿರುವ ಮತ್ತೊಬ್ಬ ಯುವಕ, ನ್ಯಾಯ ಬೇಕು ಎಂದು ಇಬ್ಬರು ಅಳಲು ತೋಡಿಕೊಳ್ಳುತ್ತಿರುವ ಇಬ್ಬರು ಗಂಡಂದಿರು, ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ  ದೊಡ್ಡಬೆಳವಂಗಲ ಪೋಲೀಸ್ ಠಾಣೆ ಬಳಿ.

ಹೌದು ದೊಡ್ಡಬಳ್ಳಾಪುರದ‌ ಹಣಬೆ ಗ್ರಾಮದ ಸುಧಾರಾಣಿ(31) ಇಬ್ಬರು ಗಂಡಂದಿರಿಗೆ ಮೋಸ ಮಾಡಿರುವ ಆರೋಪ ಹೊತ್ತ ಮಹಿಳೆ.

ಈಕೆ ಕಳೆದ ಏಳೆಂಟು ವರ್ಷಗಳ ಹಿಂದೆ ಹಿರೇಗೌಡ ಎಂಬ ವ್ಯಕ್ತಿಯೊಂದಿಗೆ ಮದುವೆ ಆಗಿದ್ದಳಂತೆ. ಇಬ್ಬರೂ ಪ್ರಾರಂಭದಲ್ಲಿ ಅನ್ಯೋನ್ಯವಾಗಿಯೇ ಇದ್ದರು. ಇವರಿಬ್ಬರ ಪ್ರೀತಿಗೆ ಒಂದು ಗಂಡು ಮತ್ತೊಂದು ಹೆಣ್ಣು ಮಗಿವಿದೆ. ಆದರೆ ಇವರ ಸಂಸಾರದಲ್ಲಿ ಬಿರುಕು ಬಂದ ಹಿನ್ನಲೆ ಕಳೆದ ಮೂರು ವರ್ಷದಿಂದ ಇಬ್ಬರು ದೂರವಿದ್ದರಂತೆ. ಇದನ್ನೆ ಬಂಡವಾಳ ಮಾಡಿಕೊಂಡ ಮಹಿಳೆ ಬೇರೆ ಬೇರೆ ಯುವಕರಿಗೆ ಬಲೆ ಬೀಸಿದ್ದಾಳೆ.

ಇನ್ನೂ ಡಿಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅನಂತಮೂರ್ತಿ ಎಂಬ ಯುವಕನಿಗೆ ಸುಧಾರಾಣಿ ಬಲೆ ಬೀಸಿದ್ದಾಳೆ. ಆನ್ ಲೈನ್ ನಲ್ಲಿ ವಸ್ತುಗಳನ್ನು ಬುಕ್ ಮಾಡಿಕೊಂಡಿದ್ದ ವೇಳೆ ಡಿಲಿವರಿಗೆ ಬಂದಾಗ ನಂಬರ್ ತೆಗೆದುಕೊಂಡು ಮೊದಲು ಸ್ನೇಹ ಬೆಳೆಸಿದ್ದಾಳೆ. ಸ್ನೇಹ ನಂತರ ಪ್ರೀತಿಯಾಗಿ, ನನ್ನ ಗಂಡ ತೀರಿಹೋಗಿದ್ದಾನೆ ಎಂದು ಸುಳ್ಳು ಹೇಳಿ ಮದುವೆ ಆಗಿದ್ದಳಂತೆ. ಪಾಪ ಒಂಟಿ ಮಹಿಳೆ ಜೀವನ ಕಟ್ಟಿಕೊಡೋಣಾ ಅಂತ ಹೇಳಿ, ಒಳ್ಳೆಯ ಮನಸ್ಸಿನಿಂದ ಮದುವೆ ಆಗಿದ್ದಾನೆ. ಇಬ್ಬರೂ ಸೇರಿ ಒಂದು ವರ್ಷಕ್ಕೂ ಹೆಚ್ಚು ದಿನ ಸಂಸಾರ ಮಾಡಿದ್ದರಂತೆ. ಈ ವೇಳೆ ಆರೋಗ್ಯ ಸರಿ ಇಲ್ಲ, ಸಂಬಂಧಿಕರಿಗೆ ಸಮಸ್ಯೆ ಆಗಿದೆ ಎಂದು ಕುಂಟು ನೆಪ ಹೇಳಿಕೊಂಡು 15 ರಿಂದ 20 ಲಕ್ಷ ಹಣ ದೋಚಿದ್ದಾಳೆ ಎಂದು ಎರಡನೇ ಗಂಡ ಅನಂತಮೂರ್ತಿ ಆರೋಪ ಮಾಡಿದ್ದಾನೆ. ಆದರೆ ಈಗ ಇವರಿಬ್ಬರನ್ನೂ ಬಿಟ್ಟು ಮೂರನೇ ಮದುವೆ ಆಗಿದ್ದಾಳೆ ಎಂದು ಇಬ್ಬರು ಗಂಡಂದಿರು ಆರೋಪ ಮಾಡುತ್ತಿದ್ದಾರೆ. ಇನ್ನೂ ಎರಡನೇ ಗಂಡ ನಾನು ಕೊಟ್ಟ ಹಣ ವಾಪಸ್ ಕೊಡಿ ಎಂದು ಕೇಳಿಕೊಂಡರೆ, ಮೊದಲನೇ ಗಂಡ ನನ್ನ ಮಕ್ಕಳನ್ನು ನನ್ನ ಬಳಿಗೆ ಕಳಿಸಿಕೊಡಿ ಎಂದು ಆಗ್ರಹಿಸುತ್ತಿದ್ದಾನೆ. ಇನ್ನೂ ಘಟನೆ ಕುರಿತು ಮಹಿಳೆ ಮತ್ತು  ಎರಡನೇ ಗಂಡ ದೂರು ಮತ್ತು ಪ್ರತಿ ದೂರು ನೀಡಿದ್ದಾರೆ.

ಒಟ್ಟಾರೆ ತನ್ನ ಅಂದವನ್ನೇ ಬಂಡವಾಳ ಮಾಡಿಕೊಂಡ ಮಹಿಳೆ ಗಂಡಂದಿರಿಗೆ ಮೋಸ ಮಾಡಿ ಪೋಲೀಸ್ ಠಾಣೆ ಮೆಟ್ಟಿಲು ತುಳಿದ್ದಾಳೆ‌. ಪೋಲೀಸರು ಯುವಕರಿಗೆ ಯಾವ ರೀತಿ ನ್ಯಾಯ ಒದಗಿಸುತ್ತಾರೆ ಕಾದು ನೋಡಬೇಕಿದೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago