3 ಮದುವೆಯಾದ ಐನಾತಿ..? ಪ್ರೀತಿಸಿ ಮದುವೆ ಆಗಿ ಯುವಕರಿಂದ ಹಣ ದೋಚಿರುವ ಆರೋಪ: ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಗಂಡಂದಿರು.!

ಆಕೆ ನೋಡಲು ಸುರ ಸುಂದರಿ. ತನ್ನ ಅಂದವನ್ನೇ ಬಂಡವಾಳ ಮಾಡಿಕೊಂಡು ಯುವಕರಿಗೆ ಬಲೆ ಬೀಸುತ್ತಿದ್ದಳು. ಇವಳ ಮಾಯಾ ಜಾಲಕ್ಕೆ ಬಲಿಯಾಗಿದ್ದು ಮಾತ್ರ ಡಿಲಿವರಿ ಬಾಯ್. ಊರೂರು ಅಲೆದು ಜೀವನ ಸಾಗಿಸುತ್ತಿದ್ದ ಯುವನ ಬಳಿ ಮದುವೆಯ ಆಟ ಆಡಿ ಲಕ್ಷ ಲಕ್ಷ ಹಣ ದೋಚಿರುವ ಆರೋಪ ಕೇಳಿ ಬಂದಿದೆ.

ಹೌದು ಹೀಗೆ ಪೋಲೀಸ್ ಠಾಣೆಯ ಮುಂದೆ ಹೆಂಡತಿ ಜೊತೆಗೆ ಇರುವ ಫೋಟೋ ತೋರಿಸುತ್ತಿರುವ ಗಂಡ, ತನ್ನ ಬಳಿ ಹಣ ಹಾಕಿಸಿಕೊಂಡಿರುವ ಲಿಸ್ಟ್ ತೋರಿಸುತ್ತಿರುವ ಮತ್ತೊಬ್ಬ ಯುವಕ, ನ್ಯಾಯ ಬೇಕು ಎಂದು ಇಬ್ಬರು ಅಳಲು ತೋಡಿಕೊಳ್ಳುತ್ತಿರುವ ಇಬ್ಬರು ಗಂಡಂದಿರು, ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ  ದೊಡ್ಡಬೆಳವಂಗಲ ಪೋಲೀಸ್ ಠಾಣೆ ಬಳಿ.

ಹೌದು ದೊಡ್ಡಬಳ್ಳಾಪುರದ‌ ಹಣಬೆ ಗ್ರಾಮದ ಸುಧಾರಾಣಿ(31) ಇಬ್ಬರು ಗಂಡಂದಿರಿಗೆ ಮೋಸ ಮಾಡಿರುವ ಆರೋಪ ಹೊತ್ತ ಮಹಿಳೆ.

ಈಕೆ ಕಳೆದ ಏಳೆಂಟು ವರ್ಷಗಳ ಹಿಂದೆ ಹಿರೇಗೌಡ ಎಂಬ ವ್ಯಕ್ತಿಯೊಂದಿಗೆ ಮದುವೆ ಆಗಿದ್ದಳಂತೆ. ಇಬ್ಬರೂ ಪ್ರಾರಂಭದಲ್ಲಿ ಅನ್ಯೋನ್ಯವಾಗಿಯೇ ಇದ್ದರು. ಇವರಿಬ್ಬರ ಪ್ರೀತಿಗೆ ಒಂದು ಗಂಡು ಮತ್ತೊಂದು ಹೆಣ್ಣು ಮಗಿವಿದೆ. ಆದರೆ ಇವರ ಸಂಸಾರದಲ್ಲಿ ಬಿರುಕು ಬಂದ ಹಿನ್ನಲೆ ಕಳೆದ ಮೂರು ವರ್ಷದಿಂದ ಇಬ್ಬರು ದೂರವಿದ್ದರಂತೆ. ಇದನ್ನೆ ಬಂಡವಾಳ ಮಾಡಿಕೊಂಡ ಮಹಿಳೆ ಬೇರೆ ಬೇರೆ ಯುವಕರಿಗೆ ಬಲೆ ಬೀಸಿದ್ದಾಳೆ.

ಇನ್ನೂ ಡಿಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅನಂತಮೂರ್ತಿ ಎಂಬ ಯುವಕನಿಗೆ ಸುಧಾರಾಣಿ ಬಲೆ ಬೀಸಿದ್ದಾಳೆ. ಆನ್ ಲೈನ್ ನಲ್ಲಿ ವಸ್ತುಗಳನ್ನು ಬುಕ್ ಮಾಡಿಕೊಂಡಿದ್ದ ವೇಳೆ ಡಿಲಿವರಿಗೆ ಬಂದಾಗ ನಂಬರ್ ತೆಗೆದುಕೊಂಡು ಮೊದಲು ಸ್ನೇಹ ಬೆಳೆಸಿದ್ದಾಳೆ. ಸ್ನೇಹ ನಂತರ ಪ್ರೀತಿಯಾಗಿ, ನನ್ನ ಗಂಡ ತೀರಿಹೋಗಿದ್ದಾನೆ ಎಂದು ಸುಳ್ಳು ಹೇಳಿ ಮದುವೆ ಆಗಿದ್ದಳಂತೆ. ಪಾಪ ಒಂಟಿ ಮಹಿಳೆ ಜೀವನ ಕಟ್ಟಿಕೊಡೋಣಾ ಅಂತ ಹೇಳಿ, ಒಳ್ಳೆಯ ಮನಸ್ಸಿನಿಂದ ಮದುವೆ ಆಗಿದ್ದಾನೆ. ಇಬ್ಬರೂ ಸೇರಿ ಒಂದು ವರ್ಷಕ್ಕೂ ಹೆಚ್ಚು ದಿನ ಸಂಸಾರ ಮಾಡಿದ್ದರಂತೆ. ಈ ವೇಳೆ ಆರೋಗ್ಯ ಸರಿ ಇಲ್ಲ, ಸಂಬಂಧಿಕರಿಗೆ ಸಮಸ್ಯೆ ಆಗಿದೆ ಎಂದು ಕುಂಟು ನೆಪ ಹೇಳಿಕೊಂಡು 15 ರಿಂದ 20 ಲಕ್ಷ ಹಣ ದೋಚಿದ್ದಾಳೆ ಎಂದು ಎರಡನೇ ಗಂಡ ಅನಂತಮೂರ್ತಿ ಆರೋಪ ಮಾಡಿದ್ದಾನೆ. ಆದರೆ ಈಗ ಇವರಿಬ್ಬರನ್ನೂ ಬಿಟ್ಟು ಮೂರನೇ ಮದುವೆ ಆಗಿದ್ದಾಳೆ ಎಂದು ಇಬ್ಬರು ಗಂಡಂದಿರು ಆರೋಪ ಮಾಡುತ್ತಿದ್ದಾರೆ. ಇನ್ನೂ ಎರಡನೇ ಗಂಡ ನಾನು ಕೊಟ್ಟ ಹಣ ವಾಪಸ್ ಕೊಡಿ ಎಂದು ಕೇಳಿಕೊಂಡರೆ, ಮೊದಲನೇ ಗಂಡ ನನ್ನ ಮಕ್ಕಳನ್ನು ನನ್ನ ಬಳಿಗೆ ಕಳಿಸಿಕೊಡಿ ಎಂದು ಆಗ್ರಹಿಸುತ್ತಿದ್ದಾನೆ. ಇನ್ನೂ ಘಟನೆ ಕುರಿತು ಮಹಿಳೆ ಮತ್ತು  ಎರಡನೇ ಗಂಡ ದೂರು ಮತ್ತು ಪ್ರತಿ ದೂರು ನೀಡಿದ್ದಾರೆ.

ಒಟ್ಟಾರೆ ತನ್ನ ಅಂದವನ್ನೇ ಬಂಡವಾಳ ಮಾಡಿಕೊಂಡ ಮಹಿಳೆ ಗಂಡಂದಿರಿಗೆ ಮೋಸ ಮಾಡಿ ಪೋಲೀಸ್ ಠಾಣೆ ಮೆಟ್ಟಿಲು ತುಳಿದ್ದಾಳೆ‌. ಪೋಲೀಸರು ಯುವಕರಿಗೆ ಯಾವ ರೀತಿ ನ್ಯಾಯ ಒದಗಿಸುತ್ತಾರೆ ಕಾದು ನೋಡಬೇಕಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

8 minutes ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

10 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

13 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago