3 ಮದುವೆಯಾದ ಐನಾತಿ..? ಪ್ರೀತಿಸಿ ಮದುವೆ ಆಗಿ ಯುವಕರಿಂದ ಹಣ ದೋಚಿರುವ ಆರೋಪ: ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಗಂಡಂದಿರು.!

ಆಕೆ ನೋಡಲು ಸುರ ಸುಂದರಿ. ತನ್ನ ಅಂದವನ್ನೇ ಬಂಡವಾಳ ಮಾಡಿಕೊಂಡು ಯುವಕರಿಗೆ ಬಲೆ ಬೀಸುತ್ತಿದ್ದಳು. ಇವಳ ಮಾಯಾ ಜಾಲಕ್ಕೆ ಬಲಿಯಾಗಿದ್ದು ಮಾತ್ರ ಡಿಲಿವರಿ ಬಾಯ್. ಊರೂರು ಅಲೆದು ಜೀವನ ಸಾಗಿಸುತ್ತಿದ್ದ ಯುವನ ಬಳಿ ಮದುವೆಯ ಆಟ ಆಡಿ ಲಕ್ಷ ಲಕ್ಷ ಹಣ ದೋಚಿರುವ ಆರೋಪ ಕೇಳಿ ಬಂದಿದೆ.

ಹೌದು ಹೀಗೆ ಪೋಲೀಸ್ ಠಾಣೆಯ ಮುಂದೆ ಹೆಂಡತಿ ಜೊತೆಗೆ ಇರುವ ಫೋಟೋ ತೋರಿಸುತ್ತಿರುವ ಗಂಡ, ತನ್ನ ಬಳಿ ಹಣ ಹಾಕಿಸಿಕೊಂಡಿರುವ ಲಿಸ್ಟ್ ತೋರಿಸುತ್ತಿರುವ ಮತ್ತೊಬ್ಬ ಯುವಕ, ನ್ಯಾಯ ಬೇಕು ಎಂದು ಇಬ್ಬರು ಅಳಲು ತೋಡಿಕೊಳ್ಳುತ್ತಿರುವ ಇಬ್ಬರು ಗಂಡಂದಿರು, ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ  ದೊಡ್ಡಬೆಳವಂಗಲ ಪೋಲೀಸ್ ಠಾಣೆ ಬಳಿ.

ಹೌದು ದೊಡ್ಡಬಳ್ಳಾಪುರದ‌ ಹಣಬೆ ಗ್ರಾಮದ ಸುಧಾರಾಣಿ(31) ಇಬ್ಬರು ಗಂಡಂದಿರಿಗೆ ಮೋಸ ಮಾಡಿರುವ ಆರೋಪ ಹೊತ್ತ ಮಹಿಳೆ.

ಈಕೆ ಕಳೆದ ಏಳೆಂಟು ವರ್ಷಗಳ ಹಿಂದೆ ಹಿರೇಗೌಡ ಎಂಬ ವ್ಯಕ್ತಿಯೊಂದಿಗೆ ಮದುವೆ ಆಗಿದ್ದಳಂತೆ. ಇಬ್ಬರೂ ಪ್ರಾರಂಭದಲ್ಲಿ ಅನ್ಯೋನ್ಯವಾಗಿಯೇ ಇದ್ದರು. ಇವರಿಬ್ಬರ ಪ್ರೀತಿಗೆ ಒಂದು ಗಂಡು ಮತ್ತೊಂದು ಹೆಣ್ಣು ಮಗಿವಿದೆ. ಆದರೆ ಇವರ ಸಂಸಾರದಲ್ಲಿ ಬಿರುಕು ಬಂದ ಹಿನ್ನಲೆ ಕಳೆದ ಮೂರು ವರ್ಷದಿಂದ ಇಬ್ಬರು ದೂರವಿದ್ದರಂತೆ. ಇದನ್ನೆ ಬಂಡವಾಳ ಮಾಡಿಕೊಂಡ ಮಹಿಳೆ ಬೇರೆ ಬೇರೆ ಯುವಕರಿಗೆ ಬಲೆ ಬೀಸಿದ್ದಾಳೆ.

ಇನ್ನೂ ಡಿಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅನಂತಮೂರ್ತಿ ಎಂಬ ಯುವಕನಿಗೆ ಸುಧಾರಾಣಿ ಬಲೆ ಬೀಸಿದ್ದಾಳೆ. ಆನ್ ಲೈನ್ ನಲ್ಲಿ ವಸ್ತುಗಳನ್ನು ಬುಕ್ ಮಾಡಿಕೊಂಡಿದ್ದ ವೇಳೆ ಡಿಲಿವರಿಗೆ ಬಂದಾಗ ನಂಬರ್ ತೆಗೆದುಕೊಂಡು ಮೊದಲು ಸ್ನೇಹ ಬೆಳೆಸಿದ್ದಾಳೆ. ಸ್ನೇಹ ನಂತರ ಪ್ರೀತಿಯಾಗಿ, ನನ್ನ ಗಂಡ ತೀರಿಹೋಗಿದ್ದಾನೆ ಎಂದು ಸುಳ್ಳು ಹೇಳಿ ಮದುವೆ ಆಗಿದ್ದಳಂತೆ. ಪಾಪ ಒಂಟಿ ಮಹಿಳೆ ಜೀವನ ಕಟ್ಟಿಕೊಡೋಣಾ ಅಂತ ಹೇಳಿ, ಒಳ್ಳೆಯ ಮನಸ್ಸಿನಿಂದ ಮದುವೆ ಆಗಿದ್ದಾನೆ. ಇಬ್ಬರೂ ಸೇರಿ ಒಂದು ವರ್ಷಕ್ಕೂ ಹೆಚ್ಚು ದಿನ ಸಂಸಾರ ಮಾಡಿದ್ದರಂತೆ. ಈ ವೇಳೆ ಆರೋಗ್ಯ ಸರಿ ಇಲ್ಲ, ಸಂಬಂಧಿಕರಿಗೆ ಸಮಸ್ಯೆ ಆಗಿದೆ ಎಂದು ಕುಂಟು ನೆಪ ಹೇಳಿಕೊಂಡು 15 ರಿಂದ 20 ಲಕ್ಷ ಹಣ ದೋಚಿದ್ದಾಳೆ ಎಂದು ಎರಡನೇ ಗಂಡ ಅನಂತಮೂರ್ತಿ ಆರೋಪ ಮಾಡಿದ್ದಾನೆ. ಆದರೆ ಈಗ ಇವರಿಬ್ಬರನ್ನೂ ಬಿಟ್ಟು ಮೂರನೇ ಮದುವೆ ಆಗಿದ್ದಾಳೆ ಎಂದು ಇಬ್ಬರು ಗಂಡಂದಿರು ಆರೋಪ ಮಾಡುತ್ತಿದ್ದಾರೆ. ಇನ್ನೂ ಎರಡನೇ ಗಂಡ ನಾನು ಕೊಟ್ಟ ಹಣ ವಾಪಸ್ ಕೊಡಿ ಎಂದು ಕೇಳಿಕೊಂಡರೆ, ಮೊದಲನೇ ಗಂಡ ನನ್ನ ಮಕ್ಕಳನ್ನು ನನ್ನ ಬಳಿಗೆ ಕಳಿಸಿಕೊಡಿ ಎಂದು ಆಗ್ರಹಿಸುತ್ತಿದ್ದಾನೆ. ಇನ್ನೂ ಘಟನೆ ಕುರಿತು ಮಹಿಳೆ ಮತ್ತು  ಎರಡನೇ ಗಂಡ ದೂರು ಮತ್ತು ಪ್ರತಿ ದೂರು ನೀಡಿದ್ದಾರೆ.

ಒಟ್ಟಾರೆ ತನ್ನ ಅಂದವನ್ನೇ ಬಂಡವಾಳ ಮಾಡಿಕೊಂಡ ಮಹಿಳೆ ಗಂಡಂದಿರಿಗೆ ಮೋಸ ಮಾಡಿ ಪೋಲೀಸ್ ಠಾಣೆ ಮೆಟ್ಟಿಲು ತುಳಿದ್ದಾಳೆ‌. ಪೋಲೀಸರು ಯುವಕರಿಗೆ ಯಾವ ರೀತಿ ನ್ಯಾಯ ಒದಗಿಸುತ್ತಾರೆ ಕಾದು ನೋಡಬೇಕಿದೆ.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

5 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

7 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

12 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago