3 ಮದುವೆಯಾದ ಐನಾತಿ..? ಪ್ರೀತಿಸಿ ಮದುವೆ ಆಗಿ ಯುವಕರಿಂದ ಹಣ ದೋಚಿರುವ ಆರೋಪ: ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಗಂಡಂದಿರು.!

ಆಕೆ ನೋಡಲು ಸುರ ಸುಂದರಿ. ತನ್ನ ಅಂದವನ್ನೇ ಬಂಡವಾಳ ಮಾಡಿಕೊಂಡು ಯುವಕರಿಗೆ ಬಲೆ ಬೀಸುತ್ತಿದ್ದಳು. ಇವಳ ಮಾಯಾ ಜಾಲಕ್ಕೆ ಬಲಿಯಾಗಿದ್ದು ಮಾತ್ರ ಡಿಲಿವರಿ ಬಾಯ್. ಊರೂರು ಅಲೆದು ಜೀವನ ಸಾಗಿಸುತ್ತಿದ್ದ ಯುವನ ಬಳಿ ಮದುವೆಯ ಆಟ ಆಡಿ ಲಕ್ಷ ಲಕ್ಷ ಹಣ ದೋಚಿರುವ ಆರೋಪ ಕೇಳಿ ಬಂದಿದೆ.

ಹೌದು ಹೀಗೆ ಪೋಲೀಸ್ ಠಾಣೆಯ ಮುಂದೆ ಹೆಂಡತಿ ಜೊತೆಗೆ ಇರುವ ಫೋಟೋ ತೋರಿಸುತ್ತಿರುವ ಗಂಡ, ತನ್ನ ಬಳಿ ಹಣ ಹಾಕಿಸಿಕೊಂಡಿರುವ ಲಿಸ್ಟ್ ತೋರಿಸುತ್ತಿರುವ ಮತ್ತೊಬ್ಬ ಯುವಕ, ನ್ಯಾಯ ಬೇಕು ಎಂದು ಇಬ್ಬರು ಅಳಲು ತೋಡಿಕೊಳ್ಳುತ್ತಿರುವ ಇಬ್ಬರು ಗಂಡಂದಿರು, ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ  ದೊಡ್ಡಬೆಳವಂಗಲ ಪೋಲೀಸ್ ಠಾಣೆ ಬಳಿ.

ಹೌದು ದೊಡ್ಡಬಳ್ಳಾಪುರದ‌ ಹಣಬೆ ಗ್ರಾಮದ ಸುಧಾರಾಣಿ(31) ಇಬ್ಬರು ಗಂಡಂದಿರಿಗೆ ಮೋಸ ಮಾಡಿರುವ ಆರೋಪ ಹೊತ್ತ ಮಹಿಳೆ.

ಈಕೆ ಕಳೆದ ಏಳೆಂಟು ವರ್ಷಗಳ ಹಿಂದೆ ಹಿರೇಗೌಡ ಎಂಬ ವ್ಯಕ್ತಿಯೊಂದಿಗೆ ಮದುವೆ ಆಗಿದ್ದಳಂತೆ. ಇಬ್ಬರೂ ಪ್ರಾರಂಭದಲ್ಲಿ ಅನ್ಯೋನ್ಯವಾಗಿಯೇ ಇದ್ದರು. ಇವರಿಬ್ಬರ ಪ್ರೀತಿಗೆ ಒಂದು ಗಂಡು ಮತ್ತೊಂದು ಹೆಣ್ಣು ಮಗಿವಿದೆ. ಆದರೆ ಇವರ ಸಂಸಾರದಲ್ಲಿ ಬಿರುಕು ಬಂದ ಹಿನ್ನಲೆ ಕಳೆದ ಮೂರು ವರ್ಷದಿಂದ ಇಬ್ಬರು ದೂರವಿದ್ದರಂತೆ. ಇದನ್ನೆ ಬಂಡವಾಳ ಮಾಡಿಕೊಂಡ ಮಹಿಳೆ ಬೇರೆ ಬೇರೆ ಯುವಕರಿಗೆ ಬಲೆ ಬೀಸಿದ್ದಾಳೆ.

ಇನ್ನೂ ಡಿಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅನಂತಮೂರ್ತಿ ಎಂಬ ಯುವಕನಿಗೆ ಸುಧಾರಾಣಿ ಬಲೆ ಬೀಸಿದ್ದಾಳೆ. ಆನ್ ಲೈನ್ ನಲ್ಲಿ ವಸ್ತುಗಳನ್ನು ಬುಕ್ ಮಾಡಿಕೊಂಡಿದ್ದ ವೇಳೆ ಡಿಲಿವರಿಗೆ ಬಂದಾಗ ನಂಬರ್ ತೆಗೆದುಕೊಂಡು ಮೊದಲು ಸ್ನೇಹ ಬೆಳೆಸಿದ್ದಾಳೆ. ಸ್ನೇಹ ನಂತರ ಪ್ರೀತಿಯಾಗಿ, ನನ್ನ ಗಂಡ ತೀರಿಹೋಗಿದ್ದಾನೆ ಎಂದು ಸುಳ್ಳು ಹೇಳಿ ಮದುವೆ ಆಗಿದ್ದಳಂತೆ. ಪಾಪ ಒಂಟಿ ಮಹಿಳೆ ಜೀವನ ಕಟ್ಟಿಕೊಡೋಣಾ ಅಂತ ಹೇಳಿ, ಒಳ್ಳೆಯ ಮನಸ್ಸಿನಿಂದ ಮದುವೆ ಆಗಿದ್ದಾನೆ. ಇಬ್ಬರೂ ಸೇರಿ ಒಂದು ವರ್ಷಕ್ಕೂ ಹೆಚ್ಚು ದಿನ ಸಂಸಾರ ಮಾಡಿದ್ದರಂತೆ. ಈ ವೇಳೆ ಆರೋಗ್ಯ ಸರಿ ಇಲ್ಲ, ಸಂಬಂಧಿಕರಿಗೆ ಸಮಸ್ಯೆ ಆಗಿದೆ ಎಂದು ಕುಂಟು ನೆಪ ಹೇಳಿಕೊಂಡು 15 ರಿಂದ 20 ಲಕ್ಷ ಹಣ ದೋಚಿದ್ದಾಳೆ ಎಂದು ಎರಡನೇ ಗಂಡ ಅನಂತಮೂರ್ತಿ ಆರೋಪ ಮಾಡಿದ್ದಾನೆ. ಆದರೆ ಈಗ ಇವರಿಬ್ಬರನ್ನೂ ಬಿಟ್ಟು ಮೂರನೇ ಮದುವೆ ಆಗಿದ್ದಾಳೆ ಎಂದು ಇಬ್ಬರು ಗಂಡಂದಿರು ಆರೋಪ ಮಾಡುತ್ತಿದ್ದಾರೆ. ಇನ್ನೂ ಎರಡನೇ ಗಂಡ ನಾನು ಕೊಟ್ಟ ಹಣ ವಾಪಸ್ ಕೊಡಿ ಎಂದು ಕೇಳಿಕೊಂಡರೆ, ಮೊದಲನೇ ಗಂಡ ನನ್ನ ಮಕ್ಕಳನ್ನು ನನ್ನ ಬಳಿಗೆ ಕಳಿಸಿಕೊಡಿ ಎಂದು ಆಗ್ರಹಿಸುತ್ತಿದ್ದಾನೆ. ಇನ್ನೂ ಘಟನೆ ಕುರಿತು ಮಹಿಳೆ ಮತ್ತು  ಎರಡನೇ ಗಂಡ ದೂರು ಮತ್ತು ಪ್ರತಿ ದೂರು ನೀಡಿದ್ದಾರೆ.

ಒಟ್ಟಾರೆ ತನ್ನ ಅಂದವನ್ನೇ ಬಂಡವಾಳ ಮಾಡಿಕೊಂಡ ಮಹಿಳೆ ಗಂಡಂದಿರಿಗೆ ಮೋಸ ಮಾಡಿ ಪೋಲೀಸ್ ಠಾಣೆ ಮೆಟ್ಟಿಲು ತುಳಿದ್ದಾಳೆ‌. ಪೋಲೀಸರು ಯುವಕರಿಗೆ ಯಾವ ರೀತಿ ನ್ಯಾಯ ಒದಗಿಸುತ್ತಾರೆ ಕಾದು ನೋಡಬೇಕಿದೆ.

Ramesh Babu

Journalist

Recent Posts

ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ

ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…

3 hours ago

ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

5 hours ago

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

17 hours ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

1 day ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

1 day ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

1 day ago