3 ಸಾವಿರ ವಿದ್ಯಾರ್ಥಿಗಳಿಂದ ಪ್ರಜಾತಂತ್ರ ರಕ್ಷಣೆ ಸಂಕಲ್ಪ

ದೊಡ್ಡಬಳ್ಳಾಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ 3 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡು ಪ್ರಜಾಪ್ರಭುತ್ವ ರಕ್ಷಣೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ವಿದ್ಯಾರ್ಥಿನಿಲಯ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳು ಮಾನವ ಸರಪಳಿ ರಚಿಸಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣೆಯ ಸಂಕಲ್ಪ ಮಾಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಇಂದು ಜಾಗತಿಕ ಮಟ್ಟದಲ್ಲಿ ಸದೃಢ ಹಾಗೂ ಸೌಹಾರ್ದಯುತ ಸಮಾನ ನಿರ್ಮಾಣಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಅಡಿಗಲ್ಲಾಗಿದ್ದು, ಭಾರತ ಪ್ರಜಾಪ್ರಭುತ್ವದ ತಾಯಿ ಎನಿಸಿದೆ. ಜಗತ್ತಿನ ಅತಿದೊಡ್ಡ ಪ್ರಜಾತಂತ್ರ ವ್ಯವಸ್ಥೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಅನನ್ಯತೆಯನ್ನು ಉಳಿಸಿಕೊಂಡಿದೆ ಎಂದರು.

ಪ್ರಾಧ್ಯಾಪಕ ರವಿಕಿರಣ್, ಸಂವಿಧಾನ ಪೀಠಿಕೆ ಹಾಗೂ ಪ್ರಜಾಪ್ರಭುತ್ವ ರಕ್ಷಣೆಯ ಸಂಕಲ್ಪ ವಿಧಿಯನ್ನು ಬೋಧಿಸಿದರು.

ಮಾನವ ಸಂಪನ್ಮೂಲ ಅಧಿಕಾರಿ ಬಾಬುರೆಡ್ಡಿ, ಶೈಕ್ಷಣಿಕ ಘಟಕಗಳ ಮುಖ್ಯಸ್ಥರಾದ ವಿಜಯ್‌ಕಾರ್ತಿಕ್, ನಾಗರಾಜ್, ಮಹಂತೇಶಪ್ಪ, ಚಿಕ್ಕಣ್ಣ, ನರಸಿಂಹರೆಡ್ಡಿ, ರವಿಕುಮಾರ್, ಧನಂಜಯ್, ಜಿಯಾವುಲ್ಲಾ, ಎಇಇ ರಮೇಶ್‌ಕುಮಾರ್, ವಾರ್ಡನ್‌ ಶಂಕರ್‌, ದೈಹಿಕ ಶಿಕ್ಷಣ ನಿರ್ದೇಶಕ ದಾದಾಫೀರ್, ವಾಹನ ಉಸ್ತುವಾರಿ ವಿಶ್ವನಾಥ್ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಬಳಿಕ, ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿ, ತಾಲೂಕಿನ ತುಮಕೂರು ರಾಷ್ಟ್ರೀಯ ಹೆದ್ದಾರಿಯ ಮೆಷ್ಟ್ರುಮನೆ ಕ್ರಾಸ್‌ನಿಂದ ಕೊಡಿಗೇಹಳ್ಳಿ ಮಾರ್ಗವಾಗಿ ಕುರುಬರಹಳ್ಳಿಯವರೆಗೆ ಸುಮಾರು 3 ಕಿ.ಮೀ ಉದ್ದದ ಮಾನವ ಸರಪಳಿ ರಚಿಸಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾದರು.

Ramesh Babu

Journalist

Recent Posts

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

19 hours ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

19 hours ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

20 hours ago

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…

24 hours ago

ದಿಢೀರ್ ಸಾವುಗಳ ಸುತ್ತಾ…..

ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…

1 day ago

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

2 days ago