30ದಿನಗಳ ಅವಧಿಯ ಟೈಲರಿಂಗ್ ಉಚಿತ ತರಬೇತಿ ಶಿಬಿರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ 30 ದಿನಗಳ ಕಾಲಾವಧಿಯ ಟೈಲರಿಂಗ್ ಉಚಿತ  ತರಬೇತಿ  ಶಿಬಿರ ಹಮ್ಮಿಕೊಳ್ಳಲಾಗಿದೆ.

ಆಸಕ್ತ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 2023  ಸೆಪ್ಟೆಂಬರ್ 29 ಶುಕ್ರವಾರದಂದು  ಸಂಸ್ಥೆಯಲ್ಲಿ ನಡೆಯುವ  ತರಬೇತಿಯಲ್ಲಿ ನೇರವಾಗಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಿ ತಮ್ಮ ಹೆಸರನ್ನು ನೊಂದಾಯಿಸಕೊಳ್ಳಬಹುದು.

ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.

ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644 9535774621 ಸಂಪರ್ಕಿಸಬಹುದಾಗಿದೆ.

ಆಸಕ್ತರು ಗೂಗಲ್ ಫಾರ್ಮ್ ಮೂಲಕ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಅದರ ಲಿಂಕ್,

 https://docs.google.com/forms/d/1xDvF4Tozn-HlRBRbikHKVudJGDkFPiBb2Y0jS996Cus/edit?chromeless=1

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

8 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

16 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

16 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago