ರೋಟರಾಕ್ಟ್ ಬೆಂಗಳೂರು, ಬಸವೇಶ್ವರನಗರ (ರೋಟರಾಕ್ಟ್ ಡಿಸ್ಟ್ರಿಕ್ಟ್ 3192) ಹಾಗೂ ಸುಚೇತನಾ ಎಜುಕೇಶನಲ್ ಮತ್ತು ಚಾರಿಟಬಲ್ ಟ್ರಸ್ಟ್(ರಿ) ಸಹೋಗದಲ್ಲಿ ಆಯೋಜಿಸಿದ್ದ “ವಿದ್ಯಾ ಸಂಕಲ್ಪ” ಕಾರ್ಯಕ್ರಮದ ಅಡಿಯಲ್ಲಿ ಶ್ರೀ ಅರವಿಂದ ಪ್ರಾರ್ಥಮಿಕ ಪಾಠ ಶಾಲಿಯ 30 ಮಕ್ಕಳಿಗೆ ವಾರ್ಷಿಕ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ವಿದ್ಯಾ ಸಂಲಕ್ಪ ಯೋಜನೆಯನ್ನು ಕಳೆದ 4 ವರ್ಷದಿಂದ ಮುಂದುವರಿಸಿಕೊಂಡು ಬರುತ್ತಿದ್ದು, ಮುಂಬರುವ ದಿನಗಳಲ್ಲೂ ಬಡ ಮಕ್ಕಳಿಗೆ ವಾರ್ಷಿಕ ವಿದ್ಯಾರ್ಥಿ ವೇತನವನ್ನು ನೀಡುವುದರ ಜೊತೆಗೆ ಕನ್ನಡ ಮಾಧ್ಯಮಕ್ಕೆ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಭರವಸೆಯನ್ನು ನೀಡಲಾಯಿತು.
ಇದೇ ಸಂದರ್ಭದಲ್ಲಿ ಶ್ರೀ ಅರವಿಂದ ವಿದ್ಯಾ ಸಂಸ್ಥೆಯ ಖಜಾಂಚಿ ವೆಂಕಪ್ಪ, ಶಾಲಾ ಪ್ರಾಂಶುಪಾಲ ಸರ್ವಮಂಗಳ, ಹಿರಿಯ ಶಿಕ್ಷಕ ವಸಂತ್ ರಾಜ್, ಸುರೇಶ್, ರೋಟರಾಕ್ಟ್ ಹಾಗೂ ಸುಚೇತನ ತಂಡದ ಮಂಜುನಾಥ್ ನಾಗ್, ಚೇತನ್, ದೀಪಿಕಾ, ಅಭಿಷೇಕ್, ನಮಿತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…