ನೆಲಮಂಗಲದ ಬಸವನಹಳ್ಳಿಯಲ್ಲಿ ಸುಮಾರು 300 ಕೋಟಿ ರೂಗಳ ವೆಚ್ಚದಲ್ಲಿ 220ಕೆವಿ ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರು ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿ ನೆಲಮಂಗಲ ತಾಲ್ಲೂಕಿನಲ್ಲಿ ಗೃಹ ಬಳಕೆಗೆ, ಕೃಷಿ, ಕೈಗಾರಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ಸಮಸ್ಯೆ ಎದುರಾಗಿತ್ತು. ನೆಲಮಂಗಲ ತಾಲ್ಲೂಕಿ ಜನತೆಯ ಬಹುದಿನಗಳ ಬೇಡಿಕೆಯು ಇದಾಗಿದ್ದು ಇದನ್ನು ಬಗೆಹರಿಸಲು ಸುಗಮ ವಿದ್ಯುತ್ ಪೂರೈಕೆಗಾಗಿ ಇಂದು ನಾವು 220ಕೆವಿ ವಿದ್ಯುತ್ ಸ್ಥಾವರವನು ನಿರ್ಮಾಣ ಮಾಡಲು ಗುದ್ದಲಿಪೂಜೆ ನೆರವೇರಿಸಿದ್ದೇವೆ. ಅದಕ್ಕಾಗಿ ಫೀಡರ್ ಗಳು, ಟ್ರಾನ್ಸ್ ಫಾರ್ಮರ್ ಗಳನ್ನು ನೀಡಲಾಗುತ್ತಿದೆ. ಫೀಡರ್ ಮಟ್ಟದ ಸೌರೀಕರಣದ ಮೂಲಕ ರೈತ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ಕುಸುಮ್- ಸಿ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಲಾಗುತ್ತಿದೆ.
ಕೃಷಿ ಪಂಪ್ ಸೆಟ್ಗಳಿಗೆ ಸಂಬಂಧಿಸಿದ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು, ಸರ್ಕಾರ ರೈತರಿಗೆ ಸೌರಶಕ್ತಿ ಚಾಲಿತ ಪಂಪ್ ಸೆಟ್ಗಳನ್ನು ಒದಗಿಸುವ ಕುಸುಮ್-ಬಿ ಯೋಜನೆಗೆ ಆದ್ಯತೆ ನೀಡುತ್ತಿದೆ. ರಾಜ್ಯ ಸರ್ಕಾರ ತನ್ನ ಸಬ್ಸಿಡಿ ಪಾಲನ್ನು ಶೇಕಡಾ 50 ಕ್ಕೆ ಹೆಚ್ಚಿಸಿದೆ, ಆದರೆ ಕೇಂದ್ರ ಸರ್ಕಾರವು ಶೇಕಡಾ 30 ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಸೌರ ಪಂಪ್ ಸೆಟ್ ಪಡೆಯಲು ವೆಚ್ಚದ ಶೇಕಡಾ 20 ರಷ್ಟು ಮಾತ್ರ ಪಾವತಿಸಬೇಕಾಗುತ್ತದೆ. ಈ ಯೋಜನೆಯು ರೈತರಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ” ಎಂದು ಹೇಳಿದರು.
ರಾಜ್ಯಾದ್ಯಂತ ಮುಂದಿನ ಆರ್ಥಿಕ ವರ್ಷದಲ್ಲಿ 100 ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಹೇಳಿದರು.
ನೆಲಮಂಗಲ ಶಾಸಕ ಶ್ರೀನಿವಾಸ ಅವರು ಮಾತನಾಡಿ ನೆಲಮಂಗಲ ತಾಲೂಕಿನಲ್ಲಿ ₹300 ಕೋಟಿ ವೆಚ್ಚದ 220 ಕೆ.ವಿ ವಿದ್ಯುತ್ ಸ್ಥಾವರ ನಿರ್ಮಾಣದಿಂದ ಭವಿಷ್ಯದ ವಿದ್ಯುತ್ ಹೊರೆಯನ್ನು ನೀಗಿಸಬಹುದು ಜೊತೆಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬಹುದು. ತಾಲೂಕಿಗೆ ನೆಲದಡಿ(ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್) ಅಳವಡಿಕೆಗೆ ಮಂಜೂರು ಸಿಕ್ಕಿದ್ದು ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ ನಾಲ್ಕು ವಿದ್ಯುತ್ ಉಪಕೇಂದ್ರಗಳು ಸ್ಥಾಪನೆಗೆ ಕೂಡ ಅನುಮೋದನೆ ನೀಡಿದ್ದಾರೆ ಎಂದರು.
ವಿಧಾನಪರಿಷತ್ ಸದಸ್ಯ ಎಸ್. ರವಿ ಅವರು ಮಾತನಾಡಿ ಕೈಗಾರಿಕಾ ಮತ್ತು ವಾಣಿಜ್ಯ ಸ್ಥಾವರಗಳು ಹೊಸದಾಗಿ ಸ್ಥಾಪನೆಗೊಳ್ಳುತ್ತಿದ್ದು, ವಿದ್ಯುತ್ ಹೊರೆಯು ದಿನೇ ದಿನೇ ಹೆಚ್ಚಾಗುತ್ತಿದ್ದು ವಿದ್ಯುತ್ ಪೂರೈಸಲು ಸಹಕಾರಿಯಾಗಲಿದೆ. ಜೊತೆಗೆ ಬೇಸಿಗೆ ಸಮಯದಲ್ಲಿ ರೈತರಿಗೆ ಅನುಕೂಲವಾಗುವಂತೆ ಕೃಷಿ ಪಂಪ್ ಸೆಟ್ ಗಳಿಗೆ ಹೆಚ್ಚುವರಿ ವಿದ್ಯುತ್ ಪೂರೈಸಲು ಹೆಚ್ಚು ಅನೂಕುಲವಾಯಿತು ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ನೆಲಮಂಗಲ ನಗರ ಸಭೆ ಅಧ್ಯಕ್ಷರಾದ ಎನ್. ಗಣೇಶ್, ಉಪಾಧ್ಯಕ್ಷರಾದ ಜಿ. ಆನಂದ್, ನೆಲಮಂಗಲ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ನಾರಯಣ ಗೌಡ, ಮಾಜಿ ಅಧ್ಯಕ್ಷರಾದ ಹೇಮಂತ್ ಕುಮಾರ್, ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ನಾಗರತ್ನ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…