ನೆಲಮಂಗಲದ ಬಸವನಹಳ್ಳಿಯಲ್ಲಿ ಸುಮಾರು 300 ಕೋಟಿ ರೂಗಳ ವೆಚ್ಚದಲ್ಲಿ 220ಕೆವಿ ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರು ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿ ನೆಲಮಂಗಲ ತಾಲ್ಲೂಕಿನಲ್ಲಿ ಗೃಹ ಬಳಕೆಗೆ, ಕೃಷಿ, ಕೈಗಾರಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ಸಮಸ್ಯೆ ಎದುರಾಗಿತ್ತು. ನೆಲಮಂಗಲ ತಾಲ್ಲೂಕಿ ಜನತೆಯ ಬಹುದಿನಗಳ ಬೇಡಿಕೆಯು ಇದಾಗಿದ್ದು ಇದನ್ನು ಬಗೆಹರಿಸಲು ಸುಗಮ ವಿದ್ಯುತ್ ಪೂರೈಕೆಗಾಗಿ ಇಂದು ನಾವು 220ಕೆವಿ ವಿದ್ಯುತ್ ಸ್ಥಾವರವನು ನಿರ್ಮಾಣ ಮಾಡಲು ಗುದ್ದಲಿಪೂಜೆ ನೆರವೇರಿಸಿದ್ದೇವೆ. ಅದಕ್ಕಾಗಿ ಫೀಡರ್ ಗಳು, ಟ್ರಾನ್ಸ್ ಫಾರ್ಮರ್ ಗಳನ್ನು ನೀಡಲಾಗುತ್ತಿದೆ. ಫೀಡರ್ ಮಟ್ಟದ ಸೌರೀಕರಣದ ಮೂಲಕ ರೈತ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ಕುಸುಮ್- ಸಿ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಲಾಗುತ್ತಿದೆ.
ಕೃಷಿ ಪಂಪ್ ಸೆಟ್ಗಳಿಗೆ ಸಂಬಂಧಿಸಿದ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು, ಸರ್ಕಾರ ರೈತರಿಗೆ ಸೌರಶಕ್ತಿ ಚಾಲಿತ ಪಂಪ್ ಸೆಟ್ಗಳನ್ನು ಒದಗಿಸುವ ಕುಸುಮ್-ಬಿ ಯೋಜನೆಗೆ ಆದ್ಯತೆ ನೀಡುತ್ತಿದೆ. ರಾಜ್ಯ ಸರ್ಕಾರ ತನ್ನ ಸಬ್ಸಿಡಿ ಪಾಲನ್ನು ಶೇಕಡಾ 50 ಕ್ಕೆ ಹೆಚ್ಚಿಸಿದೆ, ಆದರೆ ಕೇಂದ್ರ ಸರ್ಕಾರವು ಶೇಕಡಾ 30 ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಸೌರ ಪಂಪ್ ಸೆಟ್ ಪಡೆಯಲು ವೆಚ್ಚದ ಶೇಕಡಾ 20 ರಷ್ಟು ಮಾತ್ರ ಪಾವತಿಸಬೇಕಾಗುತ್ತದೆ. ಈ ಯೋಜನೆಯು ರೈತರಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ” ಎಂದು ಹೇಳಿದರು.
ರಾಜ್ಯಾದ್ಯಂತ ಮುಂದಿನ ಆರ್ಥಿಕ ವರ್ಷದಲ್ಲಿ 100 ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಹೇಳಿದರು.
ನೆಲಮಂಗಲ ಶಾಸಕ ಶ್ರೀನಿವಾಸ ಅವರು ಮಾತನಾಡಿ ನೆಲಮಂಗಲ ತಾಲೂಕಿನಲ್ಲಿ ₹300 ಕೋಟಿ ವೆಚ್ಚದ 220 ಕೆ.ವಿ ವಿದ್ಯುತ್ ಸ್ಥಾವರ ನಿರ್ಮಾಣದಿಂದ ಭವಿಷ್ಯದ ವಿದ್ಯುತ್ ಹೊರೆಯನ್ನು ನೀಗಿಸಬಹುದು ಜೊತೆಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬಹುದು. ತಾಲೂಕಿಗೆ ನೆಲದಡಿ(ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್) ಅಳವಡಿಕೆಗೆ ಮಂಜೂರು ಸಿಕ್ಕಿದ್ದು ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ ನಾಲ್ಕು ವಿದ್ಯುತ್ ಉಪಕೇಂದ್ರಗಳು ಸ್ಥಾಪನೆಗೆ ಕೂಡ ಅನುಮೋದನೆ ನೀಡಿದ್ದಾರೆ ಎಂದರು.
ವಿಧಾನಪರಿಷತ್ ಸದಸ್ಯ ಎಸ್. ರವಿ ಅವರು ಮಾತನಾಡಿ ಕೈಗಾರಿಕಾ ಮತ್ತು ವಾಣಿಜ್ಯ ಸ್ಥಾವರಗಳು ಹೊಸದಾಗಿ ಸ್ಥಾಪನೆಗೊಳ್ಳುತ್ತಿದ್ದು, ವಿದ್ಯುತ್ ಹೊರೆಯು ದಿನೇ ದಿನೇ ಹೆಚ್ಚಾಗುತ್ತಿದ್ದು ವಿದ್ಯುತ್ ಪೂರೈಸಲು ಸಹಕಾರಿಯಾಗಲಿದೆ. ಜೊತೆಗೆ ಬೇಸಿಗೆ ಸಮಯದಲ್ಲಿ ರೈತರಿಗೆ ಅನುಕೂಲವಾಗುವಂತೆ ಕೃಷಿ ಪಂಪ್ ಸೆಟ್ ಗಳಿಗೆ ಹೆಚ್ಚುವರಿ ವಿದ್ಯುತ್ ಪೂರೈಸಲು ಹೆಚ್ಚು ಅನೂಕುಲವಾಯಿತು ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ನೆಲಮಂಗಲ ನಗರ ಸಭೆ ಅಧ್ಯಕ್ಷರಾದ ಎನ್. ಗಣೇಶ್, ಉಪಾಧ್ಯಕ್ಷರಾದ ಜಿ. ಆನಂದ್, ನೆಲಮಂಗಲ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ನಾರಯಣ ಗೌಡ, ಮಾಜಿ ಅಧ್ಯಕ್ಷರಾದ ಹೇಮಂತ್ ಕುಮಾರ್, ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ನಾಗರತ್ನ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…