300 ಕೋಟಿ ವೆಚ್ಚದ 220 ಕೆವಿ ವಿದ್ಯುತ್ ಸ್ಥಾವರಕ್ಕೆ ಭೂಮಿ ಪೂಜೆ

ನೆಲಮಂಗಲದ ಬಸವನಹಳ್ಳಿಯಲ್ಲಿ ಸುಮಾರು 300 ಕೋಟಿ ರೂಗಳ ವೆಚ್ಚದಲ್ಲಿ 220ಕೆವಿ ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರು ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿ ನೆಲಮಂಗಲ ತಾಲ್ಲೂಕಿನಲ್ಲಿ ಗೃಹ ಬಳಕೆಗೆ, ಕೃಷಿ, ಕೈಗಾರಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ಸಮಸ್ಯೆ ಎದುರಾಗಿತ್ತು. ನೆಲಮಂಗಲ ತಾಲ್ಲೂಕಿ ಜನತೆಯ ಬಹುದಿನಗಳ ಬೇಡಿಕೆಯು ಇದಾಗಿದ್ದು ಇದನ್ನು ಬಗೆಹರಿಸಲು ಸುಗಮ ವಿದ್ಯುತ್ ಪೂರೈಕೆಗಾಗಿ ಇಂದು ನಾವು 220ಕೆವಿ ವಿದ್ಯುತ್ ಸ್ಥಾವರವನು ನಿರ್ಮಾಣ ಮಾಡಲು ಗುದ್ದಲಿಪೂಜೆ ನೆರವೇರಿಸಿದ್ದೇವೆ. ಅದಕ್ಕಾಗಿ ಫೀಡರ್ ಗಳು, ಟ್ರಾನ್ಸ್ ಫಾರ್ಮರ್ ಗಳನ್ನು ನೀಡಲಾಗುತ್ತಿದೆ. ಫೀಡರ್ ಮಟ್ಟದ ಸೌರೀಕರಣದ ಮೂಲಕ ರೈತ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ಕುಸುಮ್- ಸಿ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಲಾಗುತ್ತಿದೆ.

ಕೃಷಿ ಪಂಪ್ ಸೆಟ್‌ಗಳಿಗೆ ಸಂಬಂಧಿಸಿದ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು, ಸರ್ಕಾರ ರೈತರಿಗೆ ಸೌರಶಕ್ತಿ ಚಾಲಿತ ಪಂಪ್ ಸೆಟ್‌ಗಳನ್ನು ಒದಗಿಸುವ ಕುಸುಮ್-ಬಿ ಯೋಜನೆಗೆ ಆದ್ಯತೆ ನೀಡುತ್ತಿದೆ. ರಾಜ್ಯ ಸರ್ಕಾರ ತನ್ನ ಸಬ್ಸಿಡಿ ಪಾಲನ್ನು ಶೇಕಡಾ 50 ಕ್ಕೆ ಹೆಚ್ಚಿಸಿದೆ, ಆದರೆ ಕೇಂದ್ರ ಸರ್ಕಾರವು ಶೇಕಡಾ 30 ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಸೌರ ಪಂಪ್ ಸೆಟ್ ಪಡೆಯಲು ವೆಚ್ಚದ ಶೇಕಡಾ 20 ರಷ್ಟು ಮಾತ್ರ ಪಾವತಿಸಬೇಕಾಗುತ್ತದೆ. ಈ ಯೋಜನೆಯು ರೈತರಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತದೆ” ಎಂದು ಹೇಳಿದರು.

ರಾಜ್ಯಾದ್ಯಂತ ಮುಂದಿನ ಆರ್ಥಿಕ ವರ್ಷದಲ್ಲಿ 100 ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಹೇಳಿದರು.

ನೆಲಮಂಗಲ ಶಾಸಕ ಶ್ರೀನಿವಾಸ ಅವರು ಮಾತನಾಡಿ ನೆಲಮಂಗಲ ತಾಲೂಕಿನಲ್ಲಿ ₹300 ಕೋಟಿ ವೆಚ್ಚದ 220 ಕೆ.ವಿ ವಿದ್ಯುತ್ ಸ್ಥಾವರ ನಿರ್ಮಾಣದಿಂದ ಭವಿಷ್ಯದ ವಿದ್ಯುತ್ ಹೊರೆಯನ್ನು ನೀಗಿಸಬಹುದು ಜೊತೆಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬಹುದು. ತಾಲೂಕಿಗೆ ನೆಲದಡಿ(ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್) ಅಳವಡಿಕೆಗೆ ಮಂಜೂರು ಸಿಕ್ಕಿದ್ದು ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ ನಾಲ್ಕು ವಿದ್ಯುತ್ ಉಪಕೇಂದ್ರಗಳು ಸ್ಥಾಪನೆಗೆ ಕೂಡ ಅನುಮೋದನೆ ನೀಡಿದ್ದಾರೆ ಎಂದರು.

ವಿಧಾನಪರಿಷತ್ ಸದಸ್ಯ ಎಸ್. ರವಿ ಅವರು ಮಾತನಾಡಿ ಕೈಗಾರಿಕಾ ಮತ್ತು ವಾಣಿಜ್ಯ ಸ್ಥಾವರಗಳು ಹೊಸದಾಗಿ ಸ್ಥಾಪನೆಗೊಳ್ಳುತ್ತಿದ್ದು, ವಿದ್ಯುತ್ ಹೊರೆಯು ದಿನೇ ದಿನೇ ಹೆಚ್ಚಾಗುತ್ತಿದ್ದು ವಿದ್ಯುತ್ ಪೂರೈಸಲು ಸಹಕಾರಿಯಾಗಲಿದೆ. ಜೊತೆಗೆ ಬೇಸಿಗೆ ಸಮಯದಲ್ಲಿ ರೈತರಿಗೆ ಅನುಕೂಲವಾಗುವಂತೆ ಕೃಷಿ ಪಂಪ್‌ ಸೆಟ್ ಗಳಿಗೆ ಹೆಚ್ಚುವರಿ ವಿದ್ಯುತ್ ಪೂರೈಸಲು ಹೆಚ್ಚು ಅನೂಕುಲವಾಯಿತು ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ನೆಲಮಂಗಲ ನಗರ ಸಭೆ ಅಧ್ಯಕ್ಷರಾದ ಎನ್. ಗಣೇಶ್, ಉಪಾಧ್ಯಕ್ಷರಾದ ಜಿ. ಆನಂದ್, ನೆಲಮಂಗಲ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ನಾರಯಣ ಗೌಡ, ಮಾಜಿ ಅಧ್ಯಕ್ಷರಾದ ಹೇಮಂತ್ ಕುಮಾರ್, ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ನಾಗರತ್ನ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

12 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

23 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 day ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago