ದೊಡ್ಡಬಳ್ಳಾಪುರ ತಾಲೂಕಿನ ಎಸ್ ಎಸ್ ಘಾಟಿ ಸುಬ್ರಹ್ಮಣ್ಯ ದೇವಾಲಯದ ಸಮೀಪವಿರುವ ಬಂಡೇಪಾಳ್ಯದಲ್ಲಿರುವ 31ಅಡಿ ಎತ್ತರವಿರುವ ದೇವರಬೆಟ್ಟ ಶ್ರೀ ವಿಶ್ವ ಶನೇಶ್ವರ ಸ್ವಾಮಿಯ 21ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಹಗಲು ಪರಿಷೆ ಕಾರ್ಯಕ್ರಮಗಳು ಭಕ್ತರ ಸಮ್ಮಖದಲ್ಲಿ ಬಹಳ ಸಂಭ್ರಮ ಸಡಗರದಿಂದ ನೆರವೇರಿದವು.
ಶನೇಶ್ವರ ಸ್ವಾಮಿ, ಬನಶಂಕರಿ, ಪಂಚಮುಖಿ ಗಣಪತಿ, ಆಂಜನೇಯಸ್ವಾಮಿ, ಆದಿತ್ಯಾದಿ ನವಗ್ರಹಗಳಿಗೆ ಮೇ.26ರಿಂದ ಜೂ.1ರವರೆಗೆ ವಿವಿಧ ಪೂಜಾವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಹಗಲು ಪರಿಷೆ ಹಿನ್ನೆಲೆ ದೇವಾಲಯದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ನಾನಾ ಭಾಗಗಳಿಂದ ಭಕ್ತರ ದಂಡೇ ಹರಿದುಬಂದು ಕಲ್ಯಾಣೋತ್ಸವ, ಬ್ರಹ್ಮರಥೋತ್ಸವ, ಹಗಲು ಪರಿಷೆಯನ್ನು ಕಣ್ತುಂಬಿಕೊಂಡು ದೇವರ ಕೃಪೆಗೆ ಪಾತ್ರರಾದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…