ಸೇತುವೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ  ನಾನು ಗೌರವಯುತವಾಗಿ ಆಹ್ವಾನ ನೀಡಿದ್ದೇನೆ- ಸಂಸದ ಬಿ.ವೈ ರಾಘವೇಂದ್ರ

ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂಚಿತವಾಗಿ ಅಂದರೆ ಇದೇ ತಿಂಗಳ ಜುಲೈ 09 ರಂದು ಅಂಬಾರಗೋಡ್ಲು – ಕಳಸವಳ್ಳಿ – ಸಿಗಂದೂರು ಸೇತುವೆ ಉದ್ಘಾಟನೆಗೆ ನಾನು ಗೌರವಯುತವಾಗಿ ಆಹ್ವಾನ ನೀಡಿದ್ದೇನೆ. ಆದರು ಹಿರಿಯರಾದ ಸಿದ್ದರಾಮಯ್ಯ ಅವರು ಆಹ್ವಾನ ತಲುಪಿರುವುದು ತಡವಾಗಿದೆ ಎಂದು ಸಾರ್ವಜನಿಕವಾಗಿ ಹೇಳುತ್ತಿರುವುದು ಎಷ್ಟು ಸಮಂಜಸ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಹೇಳಿದ್ದಾರೆ.

ಶರಾವತಿ ನದಿಗೆ ಕಟ್ಟಿರುವ ಈ ಸೇತುವೆ ಆರು ದಶಕಗಳ ಸಾವಿರಾರು ಜನರ ಹೋರಾಟದ ಬೆವರಿನ ಪ್ರತಿಫಲ. ಇಷ್ಟು ಮಾತ್ರವಲ್ಲದೆ, ಸಾವಿರಾರು ಜನರ ಭಾವನೆಗಳ ಪ್ರತಿರೂಪ. ಅವರೆಲ್ಲರ ಭಾವನೆಗಳಿಗೆ ಘಾಸಿ ಮಾಡಬೇಡಿ ಎಂದು ಮನವಿ ಮಾಡುತ್ತೇನೆ ಎಂದರು.

ವಿವಿಧ ವಿಚಾರಗಳಲ್ಲಿ ಪರಸ್ಪರ ರಾಜಕೀಯ ಮಾಡುವುದು ಸರಿ. ಆದರೆ ಆಹ್ವಾನ ಪತ್ರಿಕೆ ಮುಂಚಿತವಾಗಿ ತಲುಪಿಯು ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದು ಶರಾವತಿ ಹಿನ್ನೀರಿನ ಪ್ರದೇಶದ ಜನತೆಗೆ ನೀವು ಮಾಡುವ ಅವಮಾನ ಎಂದು ಭಾವಿಸುತ್ತೇನೆ. ಈ ಕೂಡಲೇ ರಾಜ್ಯದ ಜನತೆಯ ಮುಂದೆ ತಮ್ಮ ಹೇಳಿಕೆ ಹಿಂಪಡೆದು ನಿಜಾಂಶ ತಿಳಿಸುವ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಇಷ್ಟಲ್ಲದೆ, ಕೇಂದ್ರ ಭೂಸಾರಿಗೆ ಮಂತ್ರಾಲಯ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರು ಇದೇ ತಿಂಗಳ ಜುಲೈ 11 ರಂದು ಖುದ್ದು ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಧಿಕೃತವಾಗಿ ಆಹ್ವಾನ ನೀಡಿರುತ್ತಾರೆ ಎಂಬುದನ್ನು ಕ್ಷೇತ್ರದ ಜನತೆಯ ಗಮನಕ್ಕೆ ತರಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

49 minutes ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

4 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

13 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

24 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

1 day ago