ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂಚಿತವಾಗಿ ಅಂದರೆ ಇದೇ ತಿಂಗಳ ಜುಲೈ 09 ರಂದು ಅಂಬಾರಗೋಡ್ಲು – ಕಳಸವಳ್ಳಿ – ಸಿಗಂದೂರು ಸೇತುವೆ ಉದ್ಘಾಟನೆಗೆ ನಾನು ಗೌರವಯುತವಾಗಿ ಆಹ್ವಾನ ನೀಡಿದ್ದೇನೆ. ಆದರು ಹಿರಿಯರಾದ ಸಿದ್ದರಾಮಯ್ಯ ಅವರು ಆಹ್ವಾನ ತಲುಪಿರುವುದು ತಡವಾಗಿದೆ ಎಂದು ಸಾರ್ವಜನಿಕವಾಗಿ ಹೇಳುತ್ತಿರುವುದು ಎಷ್ಟು ಸಮಂಜಸ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಹೇಳಿದ್ದಾರೆ.
ಶರಾವತಿ ನದಿಗೆ ಕಟ್ಟಿರುವ ಈ ಸೇತುವೆ ಆರು ದಶಕಗಳ ಸಾವಿರಾರು ಜನರ ಹೋರಾಟದ ಬೆವರಿನ ಪ್ರತಿಫಲ. ಇಷ್ಟು ಮಾತ್ರವಲ್ಲದೆ, ಸಾವಿರಾರು ಜನರ ಭಾವನೆಗಳ ಪ್ರತಿರೂಪ. ಅವರೆಲ್ಲರ ಭಾವನೆಗಳಿಗೆ ಘಾಸಿ ಮಾಡಬೇಡಿ ಎಂದು ಮನವಿ ಮಾಡುತ್ತೇನೆ ಎಂದರು.
ವಿವಿಧ ವಿಚಾರಗಳಲ್ಲಿ ಪರಸ್ಪರ ರಾಜಕೀಯ ಮಾಡುವುದು ಸರಿ. ಆದರೆ ಆಹ್ವಾನ ಪತ್ರಿಕೆ ಮುಂಚಿತವಾಗಿ ತಲುಪಿಯು ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದು ಶರಾವತಿ ಹಿನ್ನೀರಿನ ಪ್ರದೇಶದ ಜನತೆಗೆ ನೀವು ಮಾಡುವ ಅವಮಾನ ಎಂದು ಭಾವಿಸುತ್ತೇನೆ. ಈ ಕೂಡಲೇ ರಾಜ್ಯದ ಜನತೆಯ ಮುಂದೆ ತಮ್ಮ ಹೇಳಿಕೆ ಹಿಂಪಡೆದು ನಿಜಾಂಶ ತಿಳಿಸುವ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಇಷ್ಟಲ್ಲದೆ, ಕೇಂದ್ರ ಭೂಸಾರಿಗೆ ಮಂತ್ರಾಲಯ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರು ಇದೇ ತಿಂಗಳ ಜುಲೈ 11 ರಂದು ಖುದ್ದು ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಧಿಕೃತವಾಗಿ ಆಹ್ವಾನ ನೀಡಿರುತ್ತಾರೆ ಎಂಬುದನ್ನು ಕ್ಷೇತ್ರದ ಜನತೆಯ ಗಮನಕ್ಕೆ ತರಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…