ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂಚಿತವಾಗಿ ಅಂದರೆ ಇದೇ ತಿಂಗಳ ಜುಲೈ 09 ರಂದು ಅಂಬಾರಗೋಡ್ಲು – ಕಳಸವಳ್ಳಿ – ಸಿಗಂದೂರು ಸೇತುವೆ ಉದ್ಘಾಟನೆಗೆ ನಾನು ಗೌರವಯುತವಾಗಿ ಆಹ್ವಾನ ನೀಡಿದ್ದೇನೆ. ಆದರು ಹಿರಿಯರಾದ ಸಿದ್ದರಾಮಯ್ಯ ಅವರು ಆಹ್ವಾನ ತಲುಪಿರುವುದು ತಡವಾಗಿದೆ ಎಂದು ಸಾರ್ವಜನಿಕವಾಗಿ ಹೇಳುತ್ತಿರುವುದು ಎಷ್ಟು ಸಮಂಜಸ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಹೇಳಿದ್ದಾರೆ.
ಶರಾವತಿ ನದಿಗೆ ಕಟ್ಟಿರುವ ಈ ಸೇತುವೆ ಆರು ದಶಕಗಳ ಸಾವಿರಾರು ಜನರ ಹೋರಾಟದ ಬೆವರಿನ ಪ್ರತಿಫಲ. ಇಷ್ಟು ಮಾತ್ರವಲ್ಲದೆ, ಸಾವಿರಾರು ಜನರ ಭಾವನೆಗಳ ಪ್ರತಿರೂಪ. ಅವರೆಲ್ಲರ ಭಾವನೆಗಳಿಗೆ ಘಾಸಿ ಮಾಡಬೇಡಿ ಎಂದು ಮನವಿ ಮಾಡುತ್ತೇನೆ ಎಂದರು.
ವಿವಿಧ ವಿಚಾರಗಳಲ್ಲಿ ಪರಸ್ಪರ ರಾಜಕೀಯ ಮಾಡುವುದು ಸರಿ. ಆದರೆ ಆಹ್ವಾನ ಪತ್ರಿಕೆ ಮುಂಚಿತವಾಗಿ ತಲುಪಿಯು ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದು ಶರಾವತಿ ಹಿನ್ನೀರಿನ ಪ್ರದೇಶದ ಜನತೆಗೆ ನೀವು ಮಾಡುವ ಅವಮಾನ ಎಂದು ಭಾವಿಸುತ್ತೇನೆ. ಈ ಕೂಡಲೇ ರಾಜ್ಯದ ಜನತೆಯ ಮುಂದೆ ತಮ್ಮ ಹೇಳಿಕೆ ಹಿಂಪಡೆದು ನಿಜಾಂಶ ತಿಳಿಸುವ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಇಷ್ಟಲ್ಲದೆ, ಕೇಂದ್ರ ಭೂಸಾರಿಗೆ ಮಂತ್ರಾಲಯ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರು ಇದೇ ತಿಂಗಳ ಜುಲೈ 11 ರಂದು ಖುದ್ದು ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಧಿಕೃತವಾಗಿ ಆಹ್ವಾನ ನೀಡಿರುತ್ತಾರೆ ಎಂಬುದನ್ನು ಕ್ಷೇತ್ರದ ಜನತೆಯ ಗಮನಕ್ಕೆ ತರಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…