ಸೇತುವೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ  ನಾನು ಗೌರವಯುತವಾಗಿ ಆಹ್ವಾನ ನೀಡಿದ್ದೇನೆ- ಸಂಸದ ಬಿ.ವೈ ರಾಘವೇಂದ್ರ

ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂಚಿತವಾಗಿ ಅಂದರೆ ಇದೇ ತಿಂಗಳ ಜುಲೈ 09 ರಂದು ಅಂಬಾರಗೋಡ್ಲು – ಕಳಸವಳ್ಳಿ – ಸಿಗಂದೂರು ಸೇತುವೆ ಉದ್ಘಾಟನೆಗೆ ನಾನು ಗೌರವಯುತವಾಗಿ ಆಹ್ವಾನ ನೀಡಿದ್ದೇನೆ. ಆದರು ಹಿರಿಯರಾದ ಸಿದ್ದರಾಮಯ್ಯ ಅವರು ಆಹ್ವಾನ ತಲುಪಿರುವುದು ತಡವಾಗಿದೆ ಎಂದು ಸಾರ್ವಜನಿಕವಾಗಿ ಹೇಳುತ್ತಿರುವುದು ಎಷ್ಟು ಸಮಂಜಸ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಹೇಳಿದ್ದಾರೆ.

ಶರಾವತಿ ನದಿಗೆ ಕಟ್ಟಿರುವ ಈ ಸೇತುವೆ ಆರು ದಶಕಗಳ ಸಾವಿರಾರು ಜನರ ಹೋರಾಟದ ಬೆವರಿನ ಪ್ರತಿಫಲ. ಇಷ್ಟು ಮಾತ್ರವಲ್ಲದೆ, ಸಾವಿರಾರು ಜನರ ಭಾವನೆಗಳ ಪ್ರತಿರೂಪ. ಅವರೆಲ್ಲರ ಭಾವನೆಗಳಿಗೆ ಘಾಸಿ ಮಾಡಬೇಡಿ ಎಂದು ಮನವಿ ಮಾಡುತ್ತೇನೆ ಎಂದರು.

ವಿವಿಧ ವಿಚಾರಗಳಲ್ಲಿ ಪರಸ್ಪರ ರಾಜಕೀಯ ಮಾಡುವುದು ಸರಿ. ಆದರೆ ಆಹ್ವಾನ ಪತ್ರಿಕೆ ಮುಂಚಿತವಾಗಿ ತಲುಪಿಯು ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದು ಶರಾವತಿ ಹಿನ್ನೀರಿನ ಪ್ರದೇಶದ ಜನತೆಗೆ ನೀವು ಮಾಡುವ ಅವಮಾನ ಎಂದು ಭಾವಿಸುತ್ತೇನೆ. ಈ ಕೂಡಲೇ ರಾಜ್ಯದ ಜನತೆಯ ಮುಂದೆ ತಮ್ಮ ಹೇಳಿಕೆ ಹಿಂಪಡೆದು ನಿಜಾಂಶ ತಿಳಿಸುವ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಇಷ್ಟಲ್ಲದೆ, ಕೇಂದ್ರ ಭೂಸಾರಿಗೆ ಮಂತ್ರಾಲಯ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರು ಇದೇ ತಿಂಗಳ ಜುಲೈ 11 ರಂದು ಖುದ್ದು ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಧಿಕೃತವಾಗಿ ಆಹ್ವಾನ ನೀಡಿರುತ್ತಾರೆ ಎಂಬುದನ್ನು ಕ್ಷೇತ್ರದ ಜನತೆಯ ಗಮನಕ್ಕೆ ತರಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

57 minutes ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

8 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

9 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

22 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

22 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

22 hours ago