ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂಚಿತವಾಗಿ ಅಂದರೆ ಇದೇ ತಿಂಗಳ ಜುಲೈ 09 ರಂದು ಅಂಬಾರಗೋಡ್ಲು – ಕಳಸವಳ್ಳಿ – ಸಿಗಂದೂರು ಸೇತುವೆ ಉದ್ಘಾಟನೆಗೆ ನಾನು ಗೌರವಯುತವಾಗಿ ಆಹ್ವಾನ ನೀಡಿದ್ದೇನೆ. ಆದರು ಹಿರಿಯರಾದ ಸಿದ್ದರಾಮಯ್ಯ ಅವರು ಆಹ್ವಾನ ತಲುಪಿರುವುದು ತಡವಾಗಿದೆ ಎಂದು ಸಾರ್ವಜನಿಕವಾಗಿ ಹೇಳುತ್ತಿರುವುದು ಎಷ್ಟು ಸಮಂಜಸ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಹೇಳಿದ್ದಾರೆ.
ಶರಾವತಿ ನದಿಗೆ ಕಟ್ಟಿರುವ ಈ ಸೇತುವೆ ಆರು ದಶಕಗಳ ಸಾವಿರಾರು ಜನರ ಹೋರಾಟದ ಬೆವರಿನ ಪ್ರತಿಫಲ. ಇಷ್ಟು ಮಾತ್ರವಲ್ಲದೆ, ಸಾವಿರಾರು ಜನರ ಭಾವನೆಗಳ ಪ್ರತಿರೂಪ. ಅವರೆಲ್ಲರ ಭಾವನೆಗಳಿಗೆ ಘಾಸಿ ಮಾಡಬೇಡಿ ಎಂದು ಮನವಿ ಮಾಡುತ್ತೇನೆ ಎಂದರು.
ವಿವಿಧ ವಿಚಾರಗಳಲ್ಲಿ ಪರಸ್ಪರ ರಾಜಕೀಯ ಮಾಡುವುದು ಸರಿ. ಆದರೆ ಆಹ್ವಾನ ಪತ್ರಿಕೆ ಮುಂಚಿತವಾಗಿ ತಲುಪಿಯು ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದು ಶರಾವತಿ ಹಿನ್ನೀರಿನ ಪ್ರದೇಶದ ಜನತೆಗೆ ನೀವು ಮಾಡುವ ಅವಮಾನ ಎಂದು ಭಾವಿಸುತ್ತೇನೆ. ಈ ಕೂಡಲೇ ರಾಜ್ಯದ ಜನತೆಯ ಮುಂದೆ ತಮ್ಮ ಹೇಳಿಕೆ ಹಿಂಪಡೆದು ನಿಜಾಂಶ ತಿಳಿಸುವ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಇಷ್ಟಲ್ಲದೆ, ಕೇಂದ್ರ ಭೂಸಾರಿಗೆ ಮಂತ್ರಾಲಯ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರು ಇದೇ ತಿಂಗಳ ಜುಲೈ 11 ರಂದು ಖುದ್ದು ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಧಿಕೃತವಾಗಿ ಆಹ್ವಾನ ನೀಡಿರುತ್ತಾರೆ ಎಂಬುದನ್ನು ಕ್ಷೇತ್ರದ ಜನತೆಯ ಗಮನಕ್ಕೆ ತರಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…