ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂಚಿತವಾಗಿ ಅಂದರೆ ಇದೇ ತಿಂಗಳ ಜುಲೈ 09 ರಂದು ಅಂಬಾರಗೋಡ್ಲು – ಕಳಸವಳ್ಳಿ – ಸಿಗಂದೂರು ಸೇತುವೆ ಉದ್ಘಾಟನೆಗೆ ನಾನು ಗೌರವಯುತವಾಗಿ ಆಹ್ವಾನ ನೀಡಿದ್ದೇನೆ. ಆದರು ಹಿರಿಯರಾದ ಸಿದ್ದರಾಮಯ್ಯ ಅವರು ಆಹ್ವಾನ ತಲುಪಿರುವುದು ತಡವಾಗಿದೆ ಎಂದು ಸಾರ್ವಜನಿಕವಾಗಿ ಹೇಳುತ್ತಿರುವುದು ಎಷ್ಟು ಸಮಂಜಸ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಹೇಳಿದ್ದಾರೆ.
ಶರಾವತಿ ನದಿಗೆ ಕಟ್ಟಿರುವ ಈ ಸೇತುವೆ ಆರು ದಶಕಗಳ ಸಾವಿರಾರು ಜನರ ಹೋರಾಟದ ಬೆವರಿನ ಪ್ರತಿಫಲ. ಇಷ್ಟು ಮಾತ್ರವಲ್ಲದೆ, ಸಾವಿರಾರು ಜನರ ಭಾವನೆಗಳ ಪ್ರತಿರೂಪ. ಅವರೆಲ್ಲರ ಭಾವನೆಗಳಿಗೆ ಘಾಸಿ ಮಾಡಬೇಡಿ ಎಂದು ಮನವಿ ಮಾಡುತ್ತೇನೆ ಎಂದರು.
ವಿವಿಧ ವಿಚಾರಗಳಲ್ಲಿ ಪರಸ್ಪರ ರಾಜಕೀಯ ಮಾಡುವುದು ಸರಿ. ಆದರೆ ಆಹ್ವಾನ ಪತ್ರಿಕೆ ಮುಂಚಿತವಾಗಿ ತಲುಪಿಯು ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದು ಶರಾವತಿ ಹಿನ್ನೀರಿನ ಪ್ರದೇಶದ ಜನತೆಗೆ ನೀವು ಮಾಡುವ ಅವಮಾನ ಎಂದು ಭಾವಿಸುತ್ತೇನೆ. ಈ ಕೂಡಲೇ ರಾಜ್ಯದ ಜನತೆಯ ಮುಂದೆ ತಮ್ಮ ಹೇಳಿಕೆ ಹಿಂಪಡೆದು ನಿಜಾಂಶ ತಿಳಿಸುವ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಇಷ್ಟಲ್ಲದೆ, ಕೇಂದ್ರ ಭೂಸಾರಿಗೆ ಮಂತ್ರಾಲಯ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರು ಇದೇ ತಿಂಗಳ ಜುಲೈ 11 ರಂದು ಖುದ್ದು ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಧಿಕೃತವಾಗಿ ಆಹ್ವಾನ ನೀಡಿರುತ್ತಾರೆ ಎಂಬುದನ್ನು ಕ್ಷೇತ್ರದ ಜನತೆಯ ಗಮನಕ್ಕೆ ತರಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…