ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂಚಿತವಾಗಿ ಅಂದರೆ ಇದೇ ತಿಂಗಳ ಜುಲೈ 09 ರಂದು ಅಂಬಾರಗೋಡ್ಲು – ಕಳಸವಳ್ಳಿ – ಸಿಗಂದೂರು ಸೇತುವೆ ಉದ್ಘಾಟನೆಗೆ ನಾನು ಗೌರವಯುತವಾಗಿ ಆಹ್ವಾನ ನೀಡಿದ್ದೇನೆ. ಆದರು ಹಿರಿಯರಾದ ಸಿದ್ದರಾಮಯ್ಯ ಅವರು ಆಹ್ವಾನ ತಲುಪಿರುವುದು ತಡವಾಗಿದೆ ಎಂದು ಸಾರ್ವಜನಿಕವಾಗಿ ಹೇಳುತ್ತಿರುವುದು ಎಷ್ಟು ಸಮಂಜಸ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಹೇಳಿದ್ದಾರೆ.
ಶರಾವತಿ ನದಿಗೆ ಕಟ್ಟಿರುವ ಈ ಸೇತುವೆ ಆರು ದಶಕಗಳ ಸಾವಿರಾರು ಜನರ ಹೋರಾಟದ ಬೆವರಿನ ಪ್ರತಿಫಲ. ಇಷ್ಟು ಮಾತ್ರವಲ್ಲದೆ, ಸಾವಿರಾರು ಜನರ ಭಾವನೆಗಳ ಪ್ರತಿರೂಪ. ಅವರೆಲ್ಲರ ಭಾವನೆಗಳಿಗೆ ಘಾಸಿ ಮಾಡಬೇಡಿ ಎಂದು ಮನವಿ ಮಾಡುತ್ತೇನೆ ಎಂದರು.
ವಿವಿಧ ವಿಚಾರಗಳಲ್ಲಿ ಪರಸ್ಪರ ರಾಜಕೀಯ ಮಾಡುವುದು ಸರಿ. ಆದರೆ ಆಹ್ವಾನ ಪತ್ರಿಕೆ ಮುಂಚಿತವಾಗಿ ತಲುಪಿಯು ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದು ಶರಾವತಿ ಹಿನ್ನೀರಿನ ಪ್ರದೇಶದ ಜನತೆಗೆ ನೀವು ಮಾಡುವ ಅವಮಾನ ಎಂದು ಭಾವಿಸುತ್ತೇನೆ. ಈ ಕೂಡಲೇ ರಾಜ್ಯದ ಜನತೆಯ ಮುಂದೆ ತಮ್ಮ ಹೇಳಿಕೆ ಹಿಂಪಡೆದು ನಿಜಾಂಶ ತಿಳಿಸುವ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಇಷ್ಟಲ್ಲದೆ, ಕೇಂದ್ರ ಭೂಸಾರಿಗೆ ಮಂತ್ರಾಲಯ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರು ಇದೇ ತಿಂಗಳ ಜುಲೈ 11 ರಂದು ಖುದ್ದು ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಧಿಕೃತವಾಗಿ ಆಹ್ವಾನ ನೀಡಿರುತ್ತಾರೆ ಎಂಬುದನ್ನು ಕ್ಷೇತ್ರದ ಜನತೆಯ ಗಮನಕ್ಕೆ ತರಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…