ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ ರೂ.13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್ಕಾನ್ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ.
ಫಾಕ್ಸ್ಕಾನ್ ಈಗಾಗಲೇ ರಾಜ್ಯದಲ್ಲಿ ರೂ. 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಜೆಎಸ್ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ ), ಜೆಎಸ್ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ ), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (ರೂ 3237.30 ಕೋಟಿ ), ಟಿಆರ್ಐಎಲ್ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (ರೂ 3273 ಕೋಟಿ ಹೂಡಿಕೆ), ಜಾನಕಿ ಕಾರ್ಪ್ ಲಿಮಿಟೆಡ್ (ರೂ 607 ಕೋಟಿ ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು ’ಎಸ್ಎಚ್ಎಲ್ಸಿಸಿ’ ಅನುಮೋದನೆ ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ.
“ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು ರೂ. 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3,538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ‘ಬೆಂಗಳೂರಿನ ಆಚೆ’ ಉಪಕ್ರಮದ ಭಾಗವಾಗಿವೆ”.
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…