ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ ರೂ.13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್ಕಾನ್ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ.
ಫಾಕ್ಸ್ಕಾನ್ ಈಗಾಗಲೇ ರಾಜ್ಯದಲ್ಲಿ ರೂ. 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಜೆಎಸ್ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ ), ಜೆಎಸ್ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ ), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (ರೂ 3237.30 ಕೋಟಿ ), ಟಿಆರ್ಐಎಲ್ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (ರೂ 3273 ಕೋಟಿ ಹೂಡಿಕೆ), ಜಾನಕಿ ಕಾರ್ಪ್ ಲಿಮಿಟೆಡ್ (ರೂ 607 ಕೋಟಿ ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು ’ಎಸ್ಎಚ್ಎಲ್ಸಿಸಿ’ ಅನುಮೋದನೆ ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ.
“ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು ರೂ. 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3,538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ‘ಬೆಂಗಳೂರಿನ ಆಚೆ’ ಉಪಕ್ರಮದ ಭಾಗವಾಗಿವೆ”.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…