ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ ರೂ.13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್ಕಾನ್ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ.
ಫಾಕ್ಸ್ಕಾನ್ ಈಗಾಗಲೇ ರಾಜ್ಯದಲ್ಲಿ ರೂ. 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಜೆಎಸ್ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ ), ಜೆಎಸ್ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ ), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (ರೂ 3237.30 ಕೋಟಿ ), ಟಿಆರ್ಐಎಲ್ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (ರೂ 3273 ಕೋಟಿ ಹೂಡಿಕೆ), ಜಾನಕಿ ಕಾರ್ಪ್ ಲಿಮಿಟೆಡ್ (ರೂ 607 ಕೋಟಿ ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು ’ಎಸ್ಎಚ್ಎಲ್ಸಿಸಿ’ ಅನುಮೋದನೆ ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ.
“ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು ರೂ. 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3,538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ‘ಬೆಂಗಳೂರಿನ ಆಚೆ’ ಉಪಕ್ರಮದ ಭಾಗವಾಗಿವೆ”.
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…