35ರ ಯುವತಿಗೆ ತಾಳಿಕಟ್ಟಿದ 75ರ ವೃದ್ಧ

ವರನಿಗೆ 75 ವರ್ಷ, ವಧುವಿಗೆ 35 ವರ್ಷ‌ ವಯಸ್ಸು ಅಷ್ಟೇ. ವಯಸ್ಸಿನ ಎಲ್ಲೇ ಮೀರಿ 35 ವರ್ಷದ ಯುವತಿಯನ್ನ ವರಸಿದ 75ರ ವೃದ್ಧ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದಲ್ಲಿ ನಡೆದಿದೆ.

ಮೇಲೂರು ಗ್ರಾಮದ 75 ವರ್ಷದ ಈರಣ್ಣ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ 35 ವರ್ಷದ ಅನುಶ್ರೀ ಅವರನ್ನ ಅಪ್ಪೇಗೌಡನಹಳ್ಳಿ ಗೇಟ್ ಬಯಲಾಂಜನೇಯಸ್ವಾಮಿ ದೇವಾಲಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈರಣ್ಣನಿಗೆ ಈ ಮೊದಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆತನ ಪತ್ನಿ ಮೃತಪಟ್ಟು ಐದಾರು ವರ್ಷಗಳೇ ಕಳೆದಿವೆ. ಈತನ ಮಗ-ಮಗಳು ಯಾರೂ ಈರಣ್ಣನನ್ನು ನೋಡಿಕೊಳ್ಳುತ್ತಿರಲಿಲ್ಲ. ಮತ್ತೊಂದಡೆ ಈರಣ್ಣನಿಗೆ ಹೃದಯ ಸಮಸ್ಯೆ, ಬಿಪಿ, ಶುಗರ್ ಇದೆಯಂತೆ. ಲಾಲನೆ, ಪಾಲನೆ, ಪೋಷಣೆಗೋಸ್ಕರವಾದರೂ ಮತ್ತೊಂದು ಮದುವೆಯಾಗುವ ಆಸೆ ವ್ಯಕ್ತಪಡಿಸಿದ್ದ ಈರಣ್ಣ.

ಇನ್ನೊಂದಡೆ ತಂದೆ, ತಾಯಿ, ಬಂಧು-ಬಳಗ ಇಲ್ಲದೇ ಅನುಶ್ರೀ ಎಂಬ ಮಹಿಳೆ ಒಂಟಿಯಾಗಿದ್ದಳು. ಪ್ರೀತಿಸಿ ಮದುವೆಯಾಗಿದ್ದ ಗಂಡ ಆಕೆಯನ್ನು ತೊರೆದಿದ್ದಾನೆ. 6 ವರ್ಷದ ಮಗನಿರುವ ಅನುಶ್ರೀ ಈಗ ಈರಣ್ಣನನ್ನು ಮದುವೆ ಮಾಡಿಕೊಂಡು ಹೊಸ ಬಾಳಿನ ಕನಸ್ಸನ್ನು ಕಂಡಿದ್ದಾಳೆ.

ಇಲ್ಲಿ ವಯಸ್ಸು ಮುಖ್ಯ ಅಲ್ಲ, ಒಬ್ಬರಿಗೊಬ್ಬರ ಆಸರೆ ಅತಿಮುಖ್ಯ. ಈ ಹಿನ್ನೆಲೆ ತಮ್ಮ ವಯಸ್ಸನ್ನ ಬದಿಗೊತ್ತಿ ಮದುವೆಯಾಗಿರುವ ಈರಣ್ಣ ಹಾಗೂ ಅನುಶ್ರೀ.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

8 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

9 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

21 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

24 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

1 day ago