35ರ ಯುವತಿಗೆ ತಾಳಿಕಟ್ಟಿದ 75ರ ವೃದ್ಧ

ವರನಿಗೆ 75 ವರ್ಷ, ವಧುವಿಗೆ 35 ವರ್ಷ‌ ವಯಸ್ಸು ಅಷ್ಟೇ. ವಯಸ್ಸಿನ ಎಲ್ಲೇ ಮೀರಿ 35 ವರ್ಷದ ಯುವತಿಯನ್ನ ವರಸಿದ 75ರ ವೃದ್ಧ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದಲ್ಲಿ ನಡೆದಿದೆ.

ಮೇಲೂರು ಗ್ರಾಮದ 75 ವರ್ಷದ ಈರಣ್ಣ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ 35 ವರ್ಷದ ಅನುಶ್ರೀ ಅವರನ್ನ ಅಪ್ಪೇಗೌಡನಹಳ್ಳಿ ಗೇಟ್ ಬಯಲಾಂಜನೇಯಸ್ವಾಮಿ ದೇವಾಲಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈರಣ್ಣನಿಗೆ ಈ ಮೊದಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆತನ ಪತ್ನಿ ಮೃತಪಟ್ಟು ಐದಾರು ವರ್ಷಗಳೇ ಕಳೆದಿವೆ. ಈತನ ಮಗ-ಮಗಳು ಯಾರೂ ಈರಣ್ಣನನ್ನು ನೋಡಿಕೊಳ್ಳುತ್ತಿರಲಿಲ್ಲ. ಮತ್ತೊಂದಡೆ ಈರಣ್ಣನಿಗೆ ಹೃದಯ ಸಮಸ್ಯೆ, ಬಿಪಿ, ಶುಗರ್ ಇದೆಯಂತೆ. ಲಾಲನೆ, ಪಾಲನೆ, ಪೋಷಣೆಗೋಸ್ಕರವಾದರೂ ಮತ್ತೊಂದು ಮದುವೆಯಾಗುವ ಆಸೆ ವ್ಯಕ್ತಪಡಿಸಿದ್ದ ಈರಣ್ಣ.

ಇನ್ನೊಂದಡೆ ತಂದೆ, ತಾಯಿ, ಬಂಧು-ಬಳಗ ಇಲ್ಲದೇ ಅನುಶ್ರೀ ಎಂಬ ಮಹಿಳೆ ಒಂಟಿಯಾಗಿದ್ದಳು. ಪ್ರೀತಿಸಿ ಮದುವೆಯಾಗಿದ್ದ ಗಂಡ ಆಕೆಯನ್ನು ತೊರೆದಿದ್ದಾನೆ. 6 ವರ್ಷದ ಮಗನಿರುವ ಅನುಶ್ರೀ ಈಗ ಈರಣ್ಣನನ್ನು ಮದುವೆ ಮಾಡಿಕೊಂಡು ಹೊಸ ಬಾಳಿನ ಕನಸ್ಸನ್ನು ಕಂಡಿದ್ದಾಳೆ.

ಇಲ್ಲಿ ವಯಸ್ಸು ಮುಖ್ಯ ಅಲ್ಲ, ಒಬ್ಬರಿಗೊಬ್ಬರ ಆಸರೆ ಅತಿಮುಖ್ಯ. ಈ ಹಿನ್ನೆಲೆ ತಮ್ಮ ವಯಸ್ಸನ್ನ ಬದಿಗೊತ್ತಿ ಮದುವೆಯಾಗಿರುವ ಈರಣ್ಣ ಹಾಗೂ ಅನುಶ್ರೀ.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

3 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

3 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

4 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

7 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

19 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

19 hours ago