35ರ ಯುವತಿಗೆ ತಾಳಿಕಟ್ಟಿದ 75ರ ವೃದ್ಧ

ವರನಿಗೆ 75 ವರ್ಷ, ವಧುವಿಗೆ 35 ವರ್ಷ‌ ವಯಸ್ಸು ಅಷ್ಟೇ. ವಯಸ್ಸಿನ ಎಲ್ಲೇ ಮೀರಿ 35 ವರ್ಷದ ಯುವತಿಯನ್ನ ವರಸಿದ 75ರ ವೃದ್ಧ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದಲ್ಲಿ ನಡೆದಿದೆ.

ಮೇಲೂರು ಗ್ರಾಮದ 75 ವರ್ಷದ ಈರಣ್ಣ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ 35 ವರ್ಷದ ಅನುಶ್ರೀ ಅವರನ್ನ ಅಪ್ಪೇಗೌಡನಹಳ್ಳಿ ಗೇಟ್ ಬಯಲಾಂಜನೇಯಸ್ವಾಮಿ ದೇವಾಲಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈರಣ್ಣನಿಗೆ ಈ ಮೊದಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆತನ ಪತ್ನಿ ಮೃತಪಟ್ಟು ಐದಾರು ವರ್ಷಗಳೇ ಕಳೆದಿವೆ. ಈತನ ಮಗ-ಮಗಳು ಯಾರೂ ಈರಣ್ಣನನ್ನು ನೋಡಿಕೊಳ್ಳುತ್ತಿರಲಿಲ್ಲ. ಮತ್ತೊಂದಡೆ ಈರಣ್ಣನಿಗೆ ಹೃದಯ ಸಮಸ್ಯೆ, ಬಿಪಿ, ಶುಗರ್ ಇದೆಯಂತೆ. ಲಾಲನೆ, ಪಾಲನೆ, ಪೋಷಣೆಗೋಸ್ಕರವಾದರೂ ಮತ್ತೊಂದು ಮದುವೆಯಾಗುವ ಆಸೆ ವ್ಯಕ್ತಪಡಿಸಿದ್ದ ಈರಣ್ಣ.

ಇನ್ನೊಂದಡೆ ತಂದೆ, ತಾಯಿ, ಬಂಧು-ಬಳಗ ಇಲ್ಲದೇ ಅನುಶ್ರೀ ಎಂಬ ಮಹಿಳೆ ಒಂಟಿಯಾಗಿದ್ದಳು. ಪ್ರೀತಿಸಿ ಮದುವೆಯಾಗಿದ್ದ ಗಂಡ ಆಕೆಯನ್ನು ತೊರೆದಿದ್ದಾನೆ. 6 ವರ್ಷದ ಮಗನಿರುವ ಅನುಶ್ರೀ ಈಗ ಈರಣ್ಣನನ್ನು ಮದುವೆ ಮಾಡಿಕೊಂಡು ಹೊಸ ಬಾಳಿನ ಕನಸ್ಸನ್ನು ಕಂಡಿದ್ದಾಳೆ.

ಇಲ್ಲಿ ವಯಸ್ಸು ಮುಖ್ಯ ಅಲ್ಲ, ಒಬ್ಬರಿಗೊಬ್ಬರ ಆಸರೆ ಅತಿಮುಖ್ಯ. ಈ ಹಿನ್ನೆಲೆ ತಮ್ಮ ವಯಸ್ಸನ್ನ ಬದಿಗೊತ್ತಿ ಮದುವೆಯಾಗಿರುವ ಈರಣ್ಣ ಹಾಗೂ ಅನುಶ್ರೀ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

6 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

7 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

13 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

13 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

19 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago