35ರ ಯುವತಿಗೆ ತಾಳಿಕಟ್ಟಿದ 75ರ ವೃದ್ಧ

ವರನಿಗೆ 75 ವರ್ಷ, ವಧುವಿಗೆ 35 ವರ್ಷ‌ ವಯಸ್ಸು ಅಷ್ಟೇ. ವಯಸ್ಸಿನ ಎಲ್ಲೇ ಮೀರಿ 35 ವರ್ಷದ ಯುವತಿಯನ್ನ ವರಸಿದ 75ರ ವೃದ್ಧ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದಲ್ಲಿ ನಡೆದಿದೆ.

ಮೇಲೂರು ಗ್ರಾಮದ 75 ವರ್ಷದ ಈರಣ್ಣ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ 35 ವರ್ಷದ ಅನುಶ್ರೀ ಅವರನ್ನ ಅಪ್ಪೇಗೌಡನಹಳ್ಳಿ ಗೇಟ್ ಬಯಲಾಂಜನೇಯಸ್ವಾಮಿ ದೇವಾಲಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈರಣ್ಣನಿಗೆ ಈ ಮೊದಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆತನ ಪತ್ನಿ ಮೃತಪಟ್ಟು ಐದಾರು ವರ್ಷಗಳೇ ಕಳೆದಿವೆ. ಈತನ ಮಗ-ಮಗಳು ಯಾರೂ ಈರಣ್ಣನನ್ನು ನೋಡಿಕೊಳ್ಳುತ್ತಿರಲಿಲ್ಲ. ಮತ್ತೊಂದಡೆ ಈರಣ್ಣನಿಗೆ ಹೃದಯ ಸಮಸ್ಯೆ, ಬಿಪಿ, ಶುಗರ್ ಇದೆಯಂತೆ. ಲಾಲನೆ, ಪಾಲನೆ, ಪೋಷಣೆಗೋಸ್ಕರವಾದರೂ ಮತ್ತೊಂದು ಮದುವೆಯಾಗುವ ಆಸೆ ವ್ಯಕ್ತಪಡಿಸಿದ್ದ ಈರಣ್ಣ.

ಇನ್ನೊಂದಡೆ ತಂದೆ, ತಾಯಿ, ಬಂಧು-ಬಳಗ ಇಲ್ಲದೇ ಅನುಶ್ರೀ ಎಂಬ ಮಹಿಳೆ ಒಂಟಿಯಾಗಿದ್ದಳು. ಪ್ರೀತಿಸಿ ಮದುವೆಯಾಗಿದ್ದ ಗಂಡ ಆಕೆಯನ್ನು ತೊರೆದಿದ್ದಾನೆ. 6 ವರ್ಷದ ಮಗನಿರುವ ಅನುಶ್ರೀ ಈಗ ಈರಣ್ಣನನ್ನು ಮದುವೆ ಮಾಡಿಕೊಂಡು ಹೊಸ ಬಾಳಿನ ಕನಸ್ಸನ್ನು ಕಂಡಿದ್ದಾಳೆ.

ಇಲ್ಲಿ ವಯಸ್ಸು ಮುಖ್ಯ ಅಲ್ಲ, ಒಬ್ಬರಿಗೊಬ್ಬರ ಆಸರೆ ಅತಿಮುಖ್ಯ. ಈ ಹಿನ್ನೆಲೆ ತಮ್ಮ ವಯಸ್ಸನ್ನ ಬದಿಗೊತ್ತಿ ಮದುವೆಯಾಗಿರುವ ಈರಣ್ಣ ಹಾಗೂ ಅನುಶ್ರೀ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

15 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

24 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago