35ರ ಯುವತಿಗೆ ತಾಳಿಕಟ್ಟಿದ 75ರ ವೃದ್ಧ

ವರನಿಗೆ 75 ವರ್ಷ, ವಧುವಿಗೆ 35 ವರ್ಷ‌ ವಯಸ್ಸು ಅಷ್ಟೇ. ವಯಸ್ಸಿನ ಎಲ್ಲೇ ಮೀರಿ 35 ವರ್ಷದ ಯುವತಿಯನ್ನ ವರಸಿದ 75ರ ವೃದ್ಧ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದಲ್ಲಿ ನಡೆದಿದೆ.

ಮೇಲೂರು ಗ್ರಾಮದ 75 ವರ್ಷದ ಈರಣ್ಣ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ 35 ವರ್ಷದ ಅನುಶ್ರೀ ಅವರನ್ನ ಅಪ್ಪೇಗೌಡನಹಳ್ಳಿ ಗೇಟ್ ಬಯಲಾಂಜನೇಯಸ್ವಾಮಿ ದೇವಾಲಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈರಣ್ಣನಿಗೆ ಈ ಮೊದಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆತನ ಪತ್ನಿ ಮೃತಪಟ್ಟು ಐದಾರು ವರ್ಷಗಳೇ ಕಳೆದಿವೆ. ಈತನ ಮಗ-ಮಗಳು ಯಾರೂ ಈರಣ್ಣನನ್ನು ನೋಡಿಕೊಳ್ಳುತ್ತಿರಲಿಲ್ಲ. ಮತ್ತೊಂದಡೆ ಈರಣ್ಣನಿಗೆ ಹೃದಯ ಸಮಸ್ಯೆ, ಬಿಪಿ, ಶುಗರ್ ಇದೆಯಂತೆ. ಲಾಲನೆ, ಪಾಲನೆ, ಪೋಷಣೆಗೋಸ್ಕರವಾದರೂ ಮತ್ತೊಂದು ಮದುವೆಯಾಗುವ ಆಸೆ ವ್ಯಕ್ತಪಡಿಸಿದ್ದ ಈರಣ್ಣ.

ಇನ್ನೊಂದಡೆ ತಂದೆ, ತಾಯಿ, ಬಂಧು-ಬಳಗ ಇಲ್ಲದೇ ಅನುಶ್ರೀ ಎಂಬ ಮಹಿಳೆ ಒಂಟಿಯಾಗಿದ್ದಳು. ಪ್ರೀತಿಸಿ ಮದುವೆಯಾಗಿದ್ದ ಗಂಡ ಆಕೆಯನ್ನು ತೊರೆದಿದ್ದಾನೆ. 6 ವರ್ಷದ ಮಗನಿರುವ ಅನುಶ್ರೀ ಈಗ ಈರಣ್ಣನನ್ನು ಮದುವೆ ಮಾಡಿಕೊಂಡು ಹೊಸ ಬಾಳಿನ ಕನಸ್ಸನ್ನು ಕಂಡಿದ್ದಾಳೆ.

ಇಲ್ಲಿ ವಯಸ್ಸು ಮುಖ್ಯ ಅಲ್ಲ, ಒಬ್ಬರಿಗೊಬ್ಬರ ಆಸರೆ ಅತಿಮುಖ್ಯ. ಈ ಹಿನ್ನೆಲೆ ತಮ್ಮ ವಯಸ್ಸನ್ನ ಬದಿಗೊತ್ತಿ ಮದುವೆಯಾಗಿರುವ ಈರಣ್ಣ ಹಾಗೂ ಅನುಶ್ರೀ.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

28 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

5 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

6 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

7 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago