35ರ ಯುವತಿಗೆ ತಾಳಿಕಟ್ಟಿದ 75ರ ವೃದ್ಧ

ವರನಿಗೆ 75 ವರ್ಷ, ವಧುವಿಗೆ 35 ವರ್ಷ‌ ವಯಸ್ಸು ಅಷ್ಟೇ. ವಯಸ್ಸಿನ ಎಲ್ಲೇ ಮೀರಿ 35 ವರ್ಷದ ಯುವತಿಯನ್ನ ವರಸಿದ 75ರ ವೃದ್ಧ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದಲ್ಲಿ ನಡೆದಿದೆ.

ಮೇಲೂರು ಗ್ರಾಮದ 75 ವರ್ಷದ ಈರಣ್ಣ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ 35 ವರ್ಷದ ಅನುಶ್ರೀ ಅವರನ್ನ ಅಪ್ಪೇಗೌಡನಹಳ್ಳಿ ಗೇಟ್ ಬಯಲಾಂಜನೇಯಸ್ವಾಮಿ ದೇವಾಲಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈರಣ್ಣನಿಗೆ ಈ ಮೊದಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆತನ ಪತ್ನಿ ಮೃತಪಟ್ಟು ಐದಾರು ವರ್ಷಗಳೇ ಕಳೆದಿವೆ. ಈತನ ಮಗ-ಮಗಳು ಯಾರೂ ಈರಣ್ಣನನ್ನು ನೋಡಿಕೊಳ್ಳುತ್ತಿರಲಿಲ್ಲ. ಮತ್ತೊಂದಡೆ ಈರಣ್ಣನಿಗೆ ಹೃದಯ ಸಮಸ್ಯೆ, ಬಿಪಿ, ಶುಗರ್ ಇದೆಯಂತೆ. ಲಾಲನೆ, ಪಾಲನೆ, ಪೋಷಣೆಗೋಸ್ಕರವಾದರೂ ಮತ್ತೊಂದು ಮದುವೆಯಾಗುವ ಆಸೆ ವ್ಯಕ್ತಪಡಿಸಿದ್ದ ಈರಣ್ಣ.

ಇನ್ನೊಂದಡೆ ತಂದೆ, ತಾಯಿ, ಬಂಧು-ಬಳಗ ಇಲ್ಲದೇ ಅನುಶ್ರೀ ಎಂಬ ಮಹಿಳೆ ಒಂಟಿಯಾಗಿದ್ದಳು. ಪ್ರೀತಿಸಿ ಮದುವೆಯಾಗಿದ್ದ ಗಂಡ ಆಕೆಯನ್ನು ತೊರೆದಿದ್ದಾನೆ. 6 ವರ್ಷದ ಮಗನಿರುವ ಅನುಶ್ರೀ ಈಗ ಈರಣ್ಣನನ್ನು ಮದುವೆ ಮಾಡಿಕೊಂಡು ಹೊಸ ಬಾಳಿನ ಕನಸ್ಸನ್ನು ಕಂಡಿದ್ದಾಳೆ.

ಇಲ್ಲಿ ವಯಸ್ಸು ಮುಖ್ಯ ಅಲ್ಲ, ಒಬ್ಬರಿಗೊಬ್ಬರ ಆಸರೆ ಅತಿಮುಖ್ಯ. ಈ ಹಿನ್ನೆಲೆ ತಮ್ಮ ವಯಸ್ಸನ್ನ ಬದಿಗೊತ್ತಿ ಮದುವೆಯಾಗಿರುವ ಈರಣ್ಣ ಹಾಗೂ ಅನುಶ್ರೀ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

13 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

18 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago