35ರ ಯುವತಿಗೆ ತಾಳಿಕಟ್ಟಿದ 75ರ ವೃದ್ಧ

ವರನಿಗೆ 75 ವರ್ಷ, ವಧುವಿಗೆ 35 ವರ್ಷ‌ ವಯಸ್ಸು ಅಷ್ಟೇ. ವಯಸ್ಸಿನ ಎಲ್ಲೇ ಮೀರಿ 35 ವರ್ಷದ ಯುವತಿಯನ್ನ ವರಸಿದ 75ರ ವೃದ್ಧ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದಲ್ಲಿ ನಡೆದಿದೆ.

ಮೇಲೂರು ಗ್ರಾಮದ 75 ವರ್ಷದ ಈರಣ್ಣ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ 35 ವರ್ಷದ ಅನುಶ್ರೀ ಅವರನ್ನ ಅಪ್ಪೇಗೌಡನಹಳ್ಳಿ ಗೇಟ್ ಬಯಲಾಂಜನೇಯಸ್ವಾಮಿ ದೇವಾಲಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈರಣ್ಣನಿಗೆ ಈ ಮೊದಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆತನ ಪತ್ನಿ ಮೃತಪಟ್ಟು ಐದಾರು ವರ್ಷಗಳೇ ಕಳೆದಿವೆ. ಈತನ ಮಗ-ಮಗಳು ಯಾರೂ ಈರಣ್ಣನನ್ನು ನೋಡಿಕೊಳ್ಳುತ್ತಿರಲಿಲ್ಲ. ಮತ್ತೊಂದಡೆ ಈರಣ್ಣನಿಗೆ ಹೃದಯ ಸಮಸ್ಯೆ, ಬಿಪಿ, ಶುಗರ್ ಇದೆಯಂತೆ. ಲಾಲನೆ, ಪಾಲನೆ, ಪೋಷಣೆಗೋಸ್ಕರವಾದರೂ ಮತ್ತೊಂದು ಮದುವೆಯಾಗುವ ಆಸೆ ವ್ಯಕ್ತಪಡಿಸಿದ್ದ ಈರಣ್ಣ.

ಇನ್ನೊಂದಡೆ ತಂದೆ, ತಾಯಿ, ಬಂಧು-ಬಳಗ ಇಲ್ಲದೇ ಅನುಶ್ರೀ ಎಂಬ ಮಹಿಳೆ ಒಂಟಿಯಾಗಿದ್ದಳು. ಪ್ರೀತಿಸಿ ಮದುವೆಯಾಗಿದ್ದ ಗಂಡ ಆಕೆಯನ್ನು ತೊರೆದಿದ್ದಾನೆ. 6 ವರ್ಷದ ಮಗನಿರುವ ಅನುಶ್ರೀ ಈಗ ಈರಣ್ಣನನ್ನು ಮದುವೆ ಮಾಡಿಕೊಂಡು ಹೊಸ ಬಾಳಿನ ಕನಸ್ಸನ್ನು ಕಂಡಿದ್ದಾಳೆ.

ಇಲ್ಲಿ ವಯಸ್ಸು ಮುಖ್ಯ ಅಲ್ಲ, ಒಬ್ಬರಿಗೊಬ್ಬರ ಆಸರೆ ಅತಿಮುಖ್ಯ. ಈ ಹಿನ್ನೆಲೆ ತಮ್ಮ ವಯಸ್ಸನ್ನ ಬದಿಗೊತ್ತಿ ಮದುವೆಯಾಗಿರುವ ಈರಣ್ಣ ಹಾಗೂ ಅನುಶ್ರೀ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

7 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

15 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

19 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago