35 ವರ್ಷಗಳ ಬಳಿಕ ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಶಿರಸಿ: ಸುಮಾರು 35 ವರ್ಷಗಳಿಂದ ಹಳೆಯ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಶಿರಸಿ ಪೊಲೀಸರು ದೆಹಲಿಯಲ್ಲಿ ಪತ್ತೆ ಹಚ್ಚಿ, ದಾಂಡೇಲಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

1990ರ ನವೆಂಬರ್ 29 ರಂದು ಶಿರಸಿಯ ಐದು ರಸ್ತೆಯ ಬಳಿ ದಿನಕರ್ ನಾರಾಯಣ ಶೆಟ್ಟಿ ಎಂಬುವವರಿಗೆ ದೀಪಕ್ ವಿಠಲ್ ಭಂಡಾರಿ ಎಂಬಾತ ಹಲ್ಲೆ ಮಾಡಿ ಗಾಯಗೊಳಿಸಿದ್ದ. ಈ ಸಂಬಂಧ ನಾರಾಯಣ ನಾಗಪ್ಪ ಶೆಟ್ಟಿ ಅವರು ನೀಡಿದ ದೂರಿನ ಮೇರೆಗೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಪ್ರಕರಣ ದಾಖಲಾದಾಗಿನಿಂದಲೂ ಆರೋಪಿ ದೀಪಕ್ ಭಂಡಾರಿ ನಾಪತ್ತೆಯಾಗಿದ್ದ. ಕಳೆದ 35 ವರ್ಷಗಳಿಂದ ಆತ ಪೊಲೀಸರಿಗೂ ಅಥವಾ ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಆರೋಪಿ ದೀಪಕ್ ಭಂಡಾರಿಗಾಗಿ ಹುಬ್ಬಳ್ಳಿ, ಮಂಗಳೂರು, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇಂತಹ ಕ್ಲಿಷ್ಟಕರ ಪ್ರಕರಣವನ್ನು ಭೇದಿಸಲು ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡಕ್ಕೆ ಆರೋಪಿಯು ಪ್ರಸ್ತುತ ನವದೆಹಲಿಯಲ್ಲಿ ವಾಸವಾಗಿದ್ದು, ದಾಂಡೇಲಿಗೆ ಬರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು.

ಮಾಹಿತಿಯನ್ನಾಧರಿಸಿ ಕಾರ್ಯಪ್ರವೃತ್ತರಾದ ಪೊಲೀಸರು, ದಿನಾಂಕ 25-08-2025 ರಂದು ದಾಂಡೇಲಿಯಲ್ಲಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಯಶಸ್ವಿ ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕೃಷ್ಣಮೂರ್ತಿ ಜಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಜಗದೀಶ ನಾಯ್ಕ, ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ್ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಶಶಿಕಾಂತ ವರ್ಮಾ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದೆ.

ಶಿರಸಿ ನಗರ ಠಾಣೆಯ ಪಿಎಸ್‌ಐಗಳಾದ ನಾಗಪ್ಪ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ನಾರಾಯಣ ಆರ್. ರಾಠೋಡ್ (ತನಿಖೆ) ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹನುಮಂತ ಕಬಾಡಿ, ತುಕಾರಾಮ ಬಣಕಾರ, ರಾಮಯ್ಯ ಪೂಜಾರಿ, ಸದ್ದಾಂ ಹಸೇನ್, ಚನ್ನಬಸಪ್ಪ ಕ್ಯಾರಕಟ್ಟಿ, ಹನುಮಂತ ಮಾಕಾಪುರ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಉದಯ ಗುನಗಾ ಮತ್ತು ಬಬನ್ ಕದಂ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 hour ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

4 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

11 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago