ಶಿರಸಿ: ಸುಮಾರು 35 ವರ್ಷಗಳಿಂದ ಹಳೆಯ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಶಿರಸಿ ಪೊಲೀಸರು ದೆಹಲಿಯಲ್ಲಿ ಪತ್ತೆ ಹಚ್ಚಿ, ದಾಂಡೇಲಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
1990ರ ನವೆಂಬರ್ 29 ರಂದು ಶಿರಸಿಯ ಐದು ರಸ್ತೆಯ ಬಳಿ ದಿನಕರ್ ನಾರಾಯಣ ಶೆಟ್ಟಿ ಎಂಬುವವರಿಗೆ ದೀಪಕ್ ವಿಠಲ್ ಭಂಡಾರಿ ಎಂಬಾತ ಹಲ್ಲೆ ಮಾಡಿ ಗಾಯಗೊಳಿಸಿದ್ದ. ಈ ಸಂಬಂಧ ನಾರಾಯಣ ನಾಗಪ್ಪ ಶೆಟ್ಟಿ ಅವರು ನೀಡಿದ ದೂರಿನ ಮೇರೆಗೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಪ್ರಕರಣ ದಾಖಲಾದಾಗಿನಿಂದಲೂ ಆರೋಪಿ ದೀಪಕ್ ಭಂಡಾರಿ ನಾಪತ್ತೆಯಾಗಿದ್ದ. ಕಳೆದ 35 ವರ್ಷಗಳಿಂದ ಆತ ಪೊಲೀಸರಿಗೂ ಅಥವಾ ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ.
ಆರೋಪಿ ದೀಪಕ್ ಭಂಡಾರಿಗಾಗಿ ಹುಬ್ಬಳ್ಳಿ, ಮಂಗಳೂರು, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇಂತಹ ಕ್ಲಿಷ್ಟಕರ ಪ್ರಕರಣವನ್ನು ಭೇದಿಸಲು ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡಕ್ಕೆ ಆರೋಪಿಯು ಪ್ರಸ್ತುತ ನವದೆಹಲಿಯಲ್ಲಿ ವಾಸವಾಗಿದ್ದು, ದಾಂಡೇಲಿಗೆ ಬರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು.
ಮಾಹಿತಿಯನ್ನಾಧರಿಸಿ ಕಾರ್ಯಪ್ರವೃತ್ತರಾದ ಪೊಲೀಸರು, ದಿನಾಂಕ 25-08-2025 ರಂದು ದಾಂಡೇಲಿಯಲ್ಲಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಯಶಸ್ವಿ ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕೃಷ್ಣಮೂರ್ತಿ ಜಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಜಗದೀಶ ನಾಯ್ಕ, ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ್ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಶಶಿಕಾಂತ ವರ್ಮಾ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದೆ.
ಶಿರಸಿ ನಗರ ಠಾಣೆಯ ಪಿಎಸ್ಐಗಳಾದ ನಾಗಪ್ಪ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ನಾರಾಯಣ ಆರ್. ರಾಠೋಡ್ (ತನಿಖೆ) ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹನುಮಂತ ಕಬಾಡಿ, ತುಕಾರಾಮ ಬಣಕಾರ, ರಾಮಯ್ಯ ಪೂಜಾರಿ, ಸದ್ದಾಂ ಹಸೇನ್, ಚನ್ನಬಸಪ್ಪ ಕ್ಯಾರಕಟ್ಟಿ, ಹನುಮಂತ ಮಾಕಾಪುರ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಉದಯ ಗುನಗಾ ಮತ್ತು ಬಬನ್ ಕದಂ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…