ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಇಂದು(ಶುಕ್ರವಾರ) ಹುಂಡಿ ಕಾಣಿಕೆ ಎಣಿಕೆ ಮಾಡಲಾಯಿತು.
ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಶುಕ್ರವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.65,65,445 ಹಣ ಸಂಗ್ರಹವಾಗಿದೆ.
ಇದರೊಂದಿಗೆ 73,600 ರೂ ಮೌಲ್ಯದ 01 ಕೆಜಿ ಬೆಳ್ಳಿ, 2,800 ರೂ ಮೌಲ್ಯದ 700 ಮಿಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.
ಹುಂಡಿ ಕಾಣಿಕೆ ಎಣಿಕೆ ಕಾರ್ಯದಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ. ದಿನೇಶ್, ಉಪ ಕಾರ್ಯದರ್ಶಿ ಎಂ. ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಸಿಲ್ದಾರ್ ಜಿ.ಜೆ. ಹೇಮಾವತಿ, ಪ್ರಧಾನ ಅರ್ಚಕ ಶ್ರೀನಿಧಿ, ಪ್ರಾಧಿಕಾರದ ಸದಸ್ಯರಾದ ಜೆ.ಎನ್ .ರಂಗಪ್ಪ, ಎಸ್ .ರವಿ, ಲಕ್ಷ್ಮ ನಾಯಕ್, ಆರ್. ವಿ ಮಹೇಶ್ ಕುಮಾರ್, ಹೇಮಲತಾ ರಮೇಶ್, ಪೋಲಿಸ್ ಸಿಬ್ಬಂದಿ ದೇವಾಲಯದ ಸಿಬ್ಬಂದಿ, ಇಂಡಿಯಾನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ ಉಪಸ್ಥಿತರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…