ದೊಡ್ಡಬಳ್ಳಾಪುರ : ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಅಡ್ಡವಾಗಿ ಬ್ಯಾನರ್ ಕಟ್ಟಿ ರಾಷ್ಟ್ರ ನಾಯಕರಿಗೆ ಅವಮಾನ ಮಾಡಿದ್ದಾರೆ, ಮಹಾನ್ ನಾಯಕರಿಗೆ ಅಗೌರವ ತೋರಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಆಗ್ರಹಿಸಿದೆ.
ದೊಡ್ಡಬಳ್ಳಾಪುರ ಹಳೇ ಬಸ್ ನಿಲ್ದಾಣದಲ್ಲಿರುವ ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ವಿಶ್ವಕರ್ಮ ಜನಾಂಗಕ್ಕೆ ಸೇರಿದ ಬ್ಯಾನರ್ ಕಟ್ಟಲಾಗಿತ್ತು, ರಾಷ್ಟ್ರ ನಾಯಕರಿಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಿದ್ದಾರೆ, ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಪ್ರಬುದ್ಧ ಕರ್ನಾಟಕ ಭೀಮ ಸೇನೆ ತಹಶೀಲ್ದಾರ್ ಕಚೇರಿ, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡಿದೆ.
ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರಾದ ಯು.ಮುನಿರಾಜು, ನಗರದ ಹಳೇ ಬಸ್ ನಿಲ್ದಾಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗಳಿವೆ, ನಿನ್ನೆ ವಿಶ್ವಕರ್ಮ ಜನಾಂಗದವರು ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಅಡ್ಡವಾಗಿ ಬ್ಯಾನರ್ ಕಟ್ಟಿ ಧೀಮಂತ ನಾಯಕರಿಗೆ ಅವಮಾನ ಮಾಡಿದ್ದಾರೆ. ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಬ್ಯಾನರ್ ಕಟ್ಟಿದ್ದಾರೆ, ರಾಷ್ಟ್ರ ನಾಯಕರಿಗೆ ಅವಮಾನ ಮಾಡಬೇಕೆಂಬ ಉದ್ದೇಶವನ್ನಿಟ್ಟುಕೊಂಡು ಕೃತ್ಯ ಮಾಡಿದ್ದಾರೆ, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳ ಬೇಕು ಇಲ್ಲದಿದ್ದಾರೆ ಹೋರಾಟ ಮಾಡುವುದ್ದಾಗಿ ಹೇಳಿದರು.
ಈ ವೇಳೆ ರಾಜ್ಯ ಗೌರವಾಧ್ಯಕ್ಷರಾದ ವಿ.ನಾಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚೆನ್ನಿಗರಾಯಪ್ಪ, ರಾಜ್ಯ ಕಾರ್ಯದರ್ಶಿ ಮೊಖದ್ದರ್, ತಾಲೂಕು ಅಧ್ಯಕ್ಷ ಜಿ.ಸಿ.ಶಿವಕುಮಾರ್, ತಾಲೂಕು ಕಾರ್ಮಿಕ ಘಟಕ ಅಧ್ಯಕ್ಷ ಜಿ.ಶಿವಕುಮಾರ್, ತಾಲೂಕು ಗೌರವಾಧ್ಯಕ್ಷ ಎಚ್.ಕೃಷ್ಣಪ್ಪ, ಸಂಘಟನಾ ಕಾರ್ಯದರ್ಶಿ ನಯಾಜ್ ಅಹಮದ್, ಅಲ್ಲ ಸಂಖ್ಯಾತರ ಘಟಕದ ಉಪಾಧ್ಯಕ್ಷ ಇರ್ಷಾದ್ ಪಾಷ ಇದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…