ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಅಡ್ಡವಾಗಿ ಬ್ಯಾನರ್ ಅಳವಡಿಕೆ ಆರೋಪ: ಪ್ರಬುದ್ಧ ಕರ್ನಾಟಕ ಭೀಮ ಸೇನೆ ಖಂಡನೆ

ದೊಡ್ಡಬಳ್ಳಾಪುರ : ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಅಡ್ಡವಾಗಿ ಬ್ಯಾನರ್ ಕಟ್ಟಿ ರಾಷ್ಟ್ರ ನಾಯಕರಿಗೆ ಅವಮಾನ ಮಾಡಿದ್ದಾರೆ, ಮಹಾನ್ ನಾಯಕರಿಗೆ ಅಗೌರವ ತೋರಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಆಗ್ರಹಿಸಿದೆ.

ದೊಡ್ಡಬಳ್ಳಾಪುರ ಹಳೇ ಬಸ್ ನಿಲ್ದಾಣದಲ್ಲಿರುವ ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ವಿಶ್ವಕರ್ಮ ಜನಾಂಗಕ್ಕೆ ಸೇರಿದ ಬ್ಯಾನರ್ ಕಟ್ಟಲಾಗಿತ್ತು, ರಾಷ್ಟ್ರ ನಾಯಕರಿಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಿದ್ದಾರೆ, ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಪ್ರಬುದ್ಧ ಕರ್ನಾಟಕ ಭೀಮ ಸೇನೆ ತಹಶೀಲ್ದಾರ್ ಕಚೇರಿ, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡಿದೆ.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರಾದ ಯು.ಮುನಿರಾಜು, ನಗರದ ಹಳೇ ಬಸ್ ನಿಲ್ದಾಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗಳಿವೆ, ನಿನ್ನೆ ವಿಶ್ವಕರ್ಮ ಜನಾಂಗದವರು ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಅಡ್ಡವಾಗಿ ಬ್ಯಾನರ್ ಕಟ್ಟಿ ಧೀಮಂತ ನಾಯಕರಿಗೆ ಅವಮಾನ ಮಾಡಿದ್ದಾರೆ. ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಬ್ಯಾನರ್ ಕಟ್ಟಿದ್ದಾರೆ, ರಾಷ್ಟ್ರ ನಾಯಕರಿಗೆ ಅವಮಾನ ಮಾಡಬೇಕೆಂಬ ಉದ್ದೇಶವನ್ನಿಟ್ಟುಕೊಂಡು ಕೃತ್ಯ ಮಾಡಿದ್ದಾರೆ, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳ ಬೇಕು ಇಲ್ಲದಿದ್ದಾರೆ ಹೋರಾಟ ಮಾಡುವುದ್ದಾಗಿ ಹೇಳಿದರು.

ಈ ವೇಳೆ ರಾಜ್ಯ ಗೌರವಾಧ್ಯಕ್ಷರಾದ ವಿ.ನಾಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚೆನ್ನಿಗರಾಯಪ್ಪ, ರಾಜ್ಯ ಕಾರ್ಯದರ್ಶಿ ಮೊಖದ್ದರ್, ತಾಲೂಕು ಅಧ್ಯಕ್ಷ ಜಿ.ಸಿ.ಶಿವಕುಮಾರ್, ತಾಲೂಕು ಕಾರ್ಮಿಕ ಘಟಕ ಅಧ್ಯಕ್ಷ ಜಿ.ಶಿವಕುಮಾರ್, ತಾಲೂಕು ಗೌರವಾಧ್ಯಕ್ಷ ಎಚ್.ಕೃಷ್ಣಪ್ಪ, ಸಂಘಟನಾ ಕಾರ್ಯದರ್ಶಿ ನಯಾಜ್ ಅಹಮದ್, ಅಲ್ಲ ಸಂಖ್ಯಾತರ ಘಟಕದ ಉಪಾಧ್ಯಕ್ಷ ಇರ್ಷಾದ್ ಪಾಷ ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

24 minutes ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago