ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಅಡ್ಡವಾಗಿ ಬ್ಯಾನರ್ ಅಳವಡಿಕೆ ಆರೋಪ: ಪ್ರಬುದ್ಧ ಕರ್ನಾಟಕ ಭೀಮ ಸೇನೆ ಖಂಡನೆ

ದೊಡ್ಡಬಳ್ಳಾಪುರ : ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಅಡ್ಡವಾಗಿ ಬ್ಯಾನರ್ ಕಟ್ಟಿ ರಾಷ್ಟ್ರ ನಾಯಕರಿಗೆ ಅವಮಾನ ಮಾಡಿದ್ದಾರೆ, ಮಹಾನ್ ನಾಯಕರಿಗೆ ಅಗೌರವ ತೋರಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಆಗ್ರಹಿಸಿದೆ.

ದೊಡ್ಡಬಳ್ಳಾಪುರ ಹಳೇ ಬಸ್ ನಿಲ್ದಾಣದಲ್ಲಿರುವ ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ವಿಶ್ವಕರ್ಮ ಜನಾಂಗಕ್ಕೆ ಸೇರಿದ ಬ್ಯಾನರ್ ಕಟ್ಟಲಾಗಿತ್ತು, ರಾಷ್ಟ್ರ ನಾಯಕರಿಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಿದ್ದಾರೆ, ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಪ್ರಬುದ್ಧ ಕರ್ನಾಟಕ ಭೀಮ ಸೇನೆ ತಹಶೀಲ್ದಾರ್ ಕಚೇರಿ, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡಿದೆ.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷರಾದ ಯು.ಮುನಿರಾಜು, ನಗರದ ಹಳೇ ಬಸ್ ನಿಲ್ದಾಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗಳಿವೆ, ನಿನ್ನೆ ವಿಶ್ವಕರ್ಮ ಜನಾಂಗದವರು ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಅಡ್ಡವಾಗಿ ಬ್ಯಾನರ್ ಕಟ್ಟಿ ಧೀಮಂತ ನಾಯಕರಿಗೆ ಅವಮಾನ ಮಾಡಿದ್ದಾರೆ. ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಬ್ಯಾನರ್ ಕಟ್ಟಿದ್ದಾರೆ, ರಾಷ್ಟ್ರ ನಾಯಕರಿಗೆ ಅವಮಾನ ಮಾಡಬೇಕೆಂಬ ಉದ್ದೇಶವನ್ನಿಟ್ಟುಕೊಂಡು ಕೃತ್ಯ ಮಾಡಿದ್ದಾರೆ, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳ ಬೇಕು ಇಲ್ಲದಿದ್ದಾರೆ ಹೋರಾಟ ಮಾಡುವುದ್ದಾಗಿ ಹೇಳಿದರು.

ಈ ವೇಳೆ ರಾಜ್ಯ ಗೌರವಾಧ್ಯಕ್ಷರಾದ ವಿ.ನಾಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಚೆನ್ನಿಗರಾಯಪ್ಪ, ರಾಜ್ಯ ಕಾರ್ಯದರ್ಶಿ ಮೊಖದ್ದರ್, ತಾಲೂಕು ಅಧ್ಯಕ್ಷ ಜಿ.ಸಿ.ಶಿವಕುಮಾರ್, ತಾಲೂಕು ಕಾರ್ಮಿಕ ಘಟಕ ಅಧ್ಯಕ್ಷ ಜಿ.ಶಿವಕುಮಾರ್, ತಾಲೂಕು ಗೌರವಾಧ್ಯಕ್ಷ ಎಚ್.ಕೃಷ್ಣಪ್ಪ, ಸಂಘಟನಾ ಕಾರ್ಯದರ್ಶಿ ನಯಾಜ್ ಅಹಮದ್, ಅಲ್ಲ ಸಂಖ್ಯಾತರ ಘಟಕದ ಉಪಾಧ್ಯಕ್ಷ ಇರ್ಷಾದ್ ಪಾಷ ಇದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

16 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

24 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago