ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ-ಮಾದಿಗ ಎಂದೇ ಬರಸಬೇಕು- ಮಾಜಿ ಸಚಿವ ಎಚ್.ಆಂಜನೇಯ ಸೂಚನೆ

ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ನಮ್ಮ ಸಮುದಾಯದ ಬಂಧುಗಳು A.K., A.D., A.A ಎಂದು ಬರಸದೆ, ಧರ್ಮದ ಕಾಲಂನಲ್ಲಿ ಹಿಂದು, ಜಾತಿ ಮತ್ತು ಉಪಜಾತಿ ಕಾಲಂನಲ್ಲಿ B-061 ಮಾದಿಗ ಎಂದೇ ಬರಸಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣ ಸಮೀಪವಿರುವ ಡಾ. ರಾಜ್‌ಕುಮಾರ್ ಕಲಾಮಂದಿರ (ಟೌನ್‌ಹಾಲ್)ದಲ್ಲಿ ಕರ್ನಾಟಕ ಮಾದರ ಮಹಾಸಭಾ ವತಿಯಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬಗ್ಗೆ ಜಾಗೃತಿ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ನಾಲ್ಕು ದಶಕಗಳ ಹೋರಾಟ, ತ್ಯಾಗ, ಬಲಿದಾನಗಳ ಫಲಶೃತಿಯಾಗಿ ಕರ್ನಾಟಕ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಜಾರಿಗೆ ತಂದಿರುವುದು ನಮಗೆಲ್ಲರಿಗೂ ಸಂತೋಷದಾಯಕ ವಿಷಯವಾಗಿದೆ. ಮುಂದುವರೆದು ಒಳ ಮೀಸಲಾತಿ ಪ್ರಯೋಜನವನ್ನು ನಮ್ಮ ಸಮುದಾಯ ಪಡೆದುಕೊಳ್ಳುವ ದಾರಿ ಸುಗಮವಾಗಿಲ್ಲ, ಮೀಸಲಾತಿಗೆ ಅನುಗುಣವಾದ ಶೈಕ್ಷಣಿಕ ಅರ್ಹತೆಗಳುಳ್ಳ ಅಭ್ಯರ್ಥಿಗಳ ಸಂಖ್ಯೆ ಕೇವಲ ಬೆರಳೆಣಿಕೆಯಷ್ಟಿರುವುದು ದುರಾದೃಷ್ಟಕರ ಸಂಗತಿ. ಆದ್ದರಿಂದ ನಮ್ಮ ಸಮುದಾಯದ ಯುವ ಜನರನ್ನು ಕನಿಷ್ಠ ಪದವಿ ವಿದ್ಯಾವಂತರನ್ನಾಗಿ ರೂಪಿಸಬೇಕಾದ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಒಳಮೀಸಲಾತಿಯ ಹೋರಾಟದ ಅನೇಕ ಮಜಲುಗಳಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ದುಡಿದ ಸಮಾಜದ ನಾಯಕರುಗಳು ಈ ಒಳಮೀಸಲಾತಿ ಪಡೆದು ಕೊಳ್ಳುವಲ್ಲಿ ಇರುವಂತಹ ತೊಡಕುಗಳನ್ನು ಪರಿಹರಿಸುವ ಸಲುವಾಗಿ ಎಲ್ಲಾ ರಾಜಕೀಯ ಪಕ್ಷಗಳ ನೇತಾರರು ಪಕ್ಷಾತೀತವಾಗಿ ಒಗ್ಗೂಡಿ ರಾಜ್ಯ ಮಟ್ಟದಲ್ಲಿ ಕರ್ನಾಟಕ ಮಾದಾರ ಮಹಾಸಭಾವನ್ನು ಸ್ಥಾಪಿಸಲಾಗಿದ್ದು, ಸಮುದಾಯವನ್ನು ಸದೃಢವಾಗಿ ಕಟ್ಟಿ ಬೆಳೆಸಲು ಅನೇಕ ಕಾರ್ಯಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಮಾಜಿ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ರಾಜ್ಯದಲ್ಲಿ 50ಲಕ್ಷಕ್ಕೂ ಹೆಚ್ಚು ಮಾದಿಗರು ಇದ್ದಾರೆ. ಮಾದಿಗ ಕುರಿತು ಚಿಂತನ ಮಂಥನ‌ವಾಗಬೇಕು. ಮೂಲ ಜಾತಿ ಮಾದಿಗ ಎಂದು ಬರೆಸಿದರೆ ಮಾತ್ರ ಮೀಸಲಾತಿ, ಇಲ್ಲದಿದ್ದಲ್ಲಿ ಯಾವ ಮೀಸಲಾತಿಯೂ ಬರುವುದಿಲ್ಲ ಎಂದು ಎಚ್ಚರಿಸಿದರು…

ಈ ವೇಳೆ ಪಾಲನಹಳ್ಳಿ ಮಠದ ಸಂಸ್ಥಾಪಕರು, ಪೀಠಾಧ್ಯಕ್ಷರಾದ ಡಾ. ಸಿದ್ದರಾಜು ಸ್ವಾಮಿ, ರಾಜ್ಯಸಭಾ ಮಾಜಿ ಸದಸ್ಯರಾದ ಡಾ. ಎಲ್. ಹನುಮಂತಯ್ಯ, ಚಂದ್ರಪ್ಪ, ಪಾವಗಡ ಮಾಜಿ ಶಾಸಕ ತಿಮ್ಮರಾಯಪ್ಪ, ಎಸ್ ಎಸ್ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ವಿ ಮಹೇಶ್ ಕುಮಾರ್, ರಾಮಕೃಷ್ಣಪ್ಪ, ಬಚ್ಚಹಳ್ಳಿ ನಾಗರಾಜ್, ರಾಜಘಟ್ಟ ಕಾಂತರಾಜ್, ತಳವಾರ ನಾಗರಾಜ್, ಹರ್ಷ, ಕುಂಬಾರಪೇಟೆ ನಾರಾಯಣಪ್ಪ, ಮುನಿಯಪ್ಪ. T. D, ವಕೀಲರಾದ ಕಾಂತರಾಜು, ಮುನಿರಾಜು, ಶಿವು, ಮನು, ಮಂಜುನಾಥ್, ವೆಂಕಟೇಶ್, ಹೊಸಕೋಟೆ ಸುಬ್ಬಣ್ಣ, ವಿಜಯಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮಹಿಳೆಯ ದಾರುಣ ಸಾವು

ರೆಸಾರ್ಟ್‌ ಸ್ವಿಮ್ಮಿಂಗ್ ಪೂಲ್ ಗೆ ಧುಮುಕಿದ ಮಹಿಳೆಯೊಬ್ಬರು ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ…

7 hours ago

ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ವಿದ್ಯುತ್ ಕಂಬ

ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಉರುಳಿಬಿದ್ದಿದೆ. ದೊಡ್ಡಬಳ್ಳಾಪುರ ತಾಲೂಕಿನ…

8 hours ago

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

ಕೊಡಗು ಜಿಲ್ಲೆಯ ವಿವಿಧೆಡೆ ಇಂದು ಸಂಜೆ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ವಿರಾಜಪೇಟೆ ತಾಲೂಕಿನ ವಿವಿಧ ಭಾಗಗಳು ಪೊನ್ನಂಪೇಟೆ…

9 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 6.5 ಕೋಟಿ ರೂ. ಮೌಲ್ಯದ 18.6 ಕೆಜಿ ಹೈಡ್ರೋಪೋನಿಕ್ ಗಾಂಜಾ ಸೀಜ್

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು‌ ಪ್ರತ್ಯೇಕ ಪ್ರಕರಣಗಳಲ್ಲಿ‌ ಕೋಟಿ ಕೋಟಿ ಮೌಲ್ಯದ…

10 hours ago

ಚರಂಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..!

ಚರಂಡಿಯಲ್ಲಿ‌ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ…

14 hours ago

ಮಾ.6ರಂದು ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ: ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹ

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…

16 hours ago