ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ-ಮಾದಿಗ ಎಂದೇ ಬರಸಬೇಕು- ಮಾಜಿ ಸಚಿವ ಎಚ್.ಆಂಜನೇಯ ಸೂಚನೆ

ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ನಮ್ಮ ಸಮುದಾಯದ ಬಂಧುಗಳು A.K., A.D., A.A ಎಂದು ಬರಸದೆ, ಧರ್ಮದ ಕಾಲಂನಲ್ಲಿ ಹಿಂದು, ಜಾತಿ ಮತ್ತು ಉಪಜಾತಿ ಕಾಲಂನಲ್ಲಿ B-061 ಮಾದಿಗ ಎಂದೇ ಬರಸಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣ ಸಮೀಪವಿರುವ ಡಾ. ರಾಜ್‌ಕುಮಾರ್ ಕಲಾಮಂದಿರ (ಟೌನ್‌ಹಾಲ್)ದಲ್ಲಿ ಕರ್ನಾಟಕ ಮಾದರ ಮಹಾಸಭಾ ವತಿಯಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬಗ್ಗೆ ಜಾಗೃತಿ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ನಾಲ್ಕು ದಶಕಗಳ ಹೋರಾಟ, ತ್ಯಾಗ, ಬಲಿದಾನಗಳ ಫಲಶೃತಿಯಾಗಿ ಕರ್ನಾಟಕ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಜಾರಿಗೆ ತಂದಿರುವುದು ನಮಗೆಲ್ಲರಿಗೂ ಸಂತೋಷದಾಯಕ ವಿಷಯವಾಗಿದೆ. ಮುಂದುವರೆದು ಒಳ ಮೀಸಲಾತಿ ಪ್ರಯೋಜನವನ್ನು ನಮ್ಮ ಸಮುದಾಯ ಪಡೆದುಕೊಳ್ಳುವ ದಾರಿ ಸುಗಮವಾಗಿಲ್ಲ, ಮೀಸಲಾತಿಗೆ ಅನುಗುಣವಾದ ಶೈಕ್ಷಣಿಕ ಅರ್ಹತೆಗಳುಳ್ಳ ಅಭ್ಯರ್ಥಿಗಳ ಸಂಖ್ಯೆ ಕೇವಲ ಬೆರಳೆಣಿಕೆಯಷ್ಟಿರುವುದು ದುರಾದೃಷ್ಟಕರ ಸಂಗತಿ. ಆದ್ದರಿಂದ ನಮ್ಮ ಸಮುದಾಯದ ಯುವ ಜನರನ್ನು ಕನಿಷ್ಠ ಪದವಿ ವಿದ್ಯಾವಂತರನ್ನಾಗಿ ರೂಪಿಸಬೇಕಾದ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಒಳಮೀಸಲಾತಿಯ ಹೋರಾಟದ ಅನೇಕ ಮಜಲುಗಳಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ದುಡಿದ ಸಮಾಜದ ನಾಯಕರುಗಳು ಈ ಒಳಮೀಸಲಾತಿ ಪಡೆದು ಕೊಳ್ಳುವಲ್ಲಿ ಇರುವಂತಹ ತೊಡಕುಗಳನ್ನು ಪರಿಹರಿಸುವ ಸಲುವಾಗಿ ಎಲ್ಲಾ ರಾಜಕೀಯ ಪಕ್ಷಗಳ ನೇತಾರರು ಪಕ್ಷಾತೀತವಾಗಿ ಒಗ್ಗೂಡಿ ರಾಜ್ಯ ಮಟ್ಟದಲ್ಲಿ ಕರ್ನಾಟಕ ಮಾದಾರ ಮಹಾಸಭಾವನ್ನು ಸ್ಥಾಪಿಸಲಾಗಿದ್ದು, ಸಮುದಾಯವನ್ನು ಸದೃಢವಾಗಿ ಕಟ್ಟಿ ಬೆಳೆಸಲು ಅನೇಕ ಕಾರ್ಯಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಮಾಜಿ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ರಾಜ್ಯದಲ್ಲಿ 50ಲಕ್ಷಕ್ಕೂ ಹೆಚ್ಚು ಮಾದಿಗರು ಇದ್ದಾರೆ. ಮಾದಿಗ ಕುರಿತು ಚಿಂತನ ಮಂಥನ‌ವಾಗಬೇಕು. ಮೂಲ ಜಾತಿ ಮಾದಿಗ ಎಂದು ಬರೆಸಿದರೆ ಮಾತ್ರ ಮೀಸಲಾತಿ, ಇಲ್ಲದಿದ್ದಲ್ಲಿ ಯಾವ ಮೀಸಲಾತಿಯೂ ಬರುವುದಿಲ್ಲ ಎಂದು ಎಚ್ಚರಿಸಿದರು…

ಈ ವೇಳೆ ಪಾಲನಹಳ್ಳಿ ಮಠದ ಸಂಸ್ಥಾಪಕರು, ಪೀಠಾಧ್ಯಕ್ಷರಾದ ಡಾ. ಸಿದ್ದರಾಜು ಸ್ವಾಮಿ, ರಾಜ್ಯಸಭಾ ಮಾಜಿ ಸದಸ್ಯರಾದ ಡಾ. ಎಲ್. ಹನುಮಂತಯ್ಯ, ಚಂದ್ರಪ್ಪ, ಪಾವಗಡ ಮಾಜಿ ಶಾಸಕ ತಿಮ್ಮರಾಯಪ್ಪ, ಎಸ್ ಎಸ್ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ವಿ ಮಹೇಶ್ ಕುಮಾರ್, ರಾಮಕೃಷ್ಣಪ್ಪ, ಬಚ್ಚಹಳ್ಳಿ ನಾಗರಾಜ್, ರಾಜಘಟ್ಟ ಕಾಂತರಾಜ್, ತಳವಾರ ನಾಗರಾಜ್, ಹರ್ಷ, ಕುಂಬಾರಪೇಟೆ ನಾರಾಯಣಪ್ಪ, ಮುನಿಯಪ್ಪ. T. D, ವಕೀಲರಾದ ಕಾಂತರಾಜು, ಮುನಿರಾಜು, ಶಿವು, ಮನು, ಮಂಜುನಾಥ್, ವೆಂಕಟೇಶ್, ಹೊಸಕೋಟೆ ಸುಬ್ಬಣ್ಣ, ವಿಜಯಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ…

10 minutes ago

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್ – ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಡ್ರಗ್ ಕಂಟ್ರೋಲರ್.!

ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ ಲೋಕಾಯುಕ್ತ ಬಲೆಗೆ…

16 minutes ago

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

4 hours ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

7 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

9 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

12 hours ago