ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ನಮ್ಮ ಸಮುದಾಯದ ಬಂಧುಗಳು A.K., A.D., A.A ಎಂದು ಬರಸದೆ, ಧರ್ಮದ ಕಾಲಂನಲ್ಲಿ ಹಿಂದು, ಜಾತಿ ಮತ್ತು ಉಪಜಾತಿ ಕಾಲಂನಲ್ಲಿ B-061 ಮಾದಿಗ ಎಂದೇ ಬರಸಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣ ಸಮೀಪವಿರುವ ಡಾ. ರಾಜ್ಕುಮಾರ್ ಕಲಾಮಂದಿರ (ಟೌನ್ಹಾಲ್)ದಲ್ಲಿ ಕರ್ನಾಟಕ ಮಾದರ ಮಹಾಸಭಾ ವತಿಯಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬಗ್ಗೆ ಜಾಗೃತಿ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ನಾಲ್ಕು ದಶಕಗಳ ಹೋರಾಟ, ತ್ಯಾಗ, ಬಲಿದಾನಗಳ ಫಲಶೃತಿಯಾಗಿ ಕರ್ನಾಟಕ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಜಾರಿಗೆ ತಂದಿರುವುದು ನಮಗೆಲ್ಲರಿಗೂ ಸಂತೋಷದಾಯಕ ವಿಷಯವಾಗಿದೆ. ಮುಂದುವರೆದು ಒಳ ಮೀಸಲಾತಿ ಪ್ರಯೋಜನವನ್ನು ನಮ್ಮ ಸಮುದಾಯ ಪಡೆದುಕೊಳ್ಳುವ ದಾರಿ ಸುಗಮವಾಗಿಲ್ಲ, ಮೀಸಲಾತಿಗೆ ಅನುಗುಣವಾದ ಶೈಕ್ಷಣಿಕ ಅರ್ಹತೆಗಳುಳ್ಳ ಅಭ್ಯರ್ಥಿಗಳ ಸಂಖ್ಯೆ ಕೇವಲ ಬೆರಳೆಣಿಕೆಯಷ್ಟಿರುವುದು ದುರಾದೃಷ್ಟಕರ ಸಂಗತಿ. ಆದ್ದರಿಂದ ನಮ್ಮ ಸಮುದಾಯದ ಯುವ ಜನರನ್ನು ಕನಿಷ್ಠ ಪದವಿ ವಿದ್ಯಾವಂತರನ್ನಾಗಿ ರೂಪಿಸಬೇಕಾದ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಒಳಮೀಸಲಾತಿಯ ಹೋರಾಟದ ಅನೇಕ ಮಜಲುಗಳಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ದುಡಿದ ಸಮಾಜದ ನಾಯಕರುಗಳು ಈ ಒಳಮೀಸಲಾತಿ ಪಡೆದು ಕೊಳ್ಳುವಲ್ಲಿ ಇರುವಂತಹ ತೊಡಕುಗಳನ್ನು ಪರಿಹರಿಸುವ ಸಲುವಾಗಿ ಎಲ್ಲಾ ರಾಜಕೀಯ ಪಕ್ಷಗಳ ನೇತಾರರು ಪಕ್ಷಾತೀತವಾಗಿ ಒಗ್ಗೂಡಿ ರಾಜ್ಯ ಮಟ್ಟದಲ್ಲಿ ಕರ್ನಾಟಕ ಮಾದಾರ ಮಹಾಸಭಾವನ್ನು ಸ್ಥಾಪಿಸಲಾಗಿದ್ದು, ಸಮುದಾಯವನ್ನು ಸದೃಢವಾಗಿ ಕಟ್ಟಿ ಬೆಳೆಸಲು ಅನೇಕ ಕಾರ್ಯಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಮಾಜಿ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.
ರಾಜ್ಯದಲ್ಲಿ 50ಲಕ್ಷಕ್ಕೂ ಹೆಚ್ಚು ಮಾದಿಗರು ಇದ್ದಾರೆ. ಮಾದಿಗ ಕುರಿತು ಚಿಂತನ ಮಂಥನವಾಗಬೇಕು. ಮೂಲ ಜಾತಿ ಮಾದಿಗ ಎಂದು ಬರೆಸಿದರೆ ಮಾತ್ರ ಮೀಸಲಾತಿ, ಇಲ್ಲದಿದ್ದಲ್ಲಿ ಯಾವ ಮೀಸಲಾತಿಯೂ ಬರುವುದಿಲ್ಲ ಎಂದು ಎಚ್ಚರಿಸಿದರು…
ಈ ವೇಳೆ ಪಾಲನಹಳ್ಳಿ ಮಠದ ಸಂಸ್ಥಾಪಕರು, ಪೀಠಾಧ್ಯಕ್ಷರಾದ ಡಾ. ಸಿದ್ದರಾಜು ಸ್ವಾಮಿ, ರಾಜ್ಯಸಭಾ ಮಾಜಿ ಸದಸ್ಯರಾದ ಡಾ. ಎಲ್. ಹನುಮಂತಯ್ಯ, ಚಂದ್ರಪ್ಪ, ಪಾವಗಡ ಮಾಜಿ ಶಾಸಕ ತಿಮ್ಮರಾಯಪ್ಪ, ಎಸ್ ಎಸ್ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ವಿ ಮಹೇಶ್ ಕುಮಾರ್, ರಾಮಕೃಷ್ಣಪ್ಪ, ಬಚ್ಚಹಳ್ಳಿ ನಾಗರಾಜ್, ರಾಜಘಟ್ಟ ಕಾಂತರಾಜ್, ತಳವಾರ ನಾಗರಾಜ್, ಹರ್ಷ, ಕುಂಬಾರಪೇಟೆ ನಾರಾಯಣಪ್ಪ, ಮುನಿಯಪ್ಪ. T. D, ವಕೀಲರಾದ ಕಾಂತರಾಜು, ಮುನಿರಾಜು, ಶಿವು, ಮನು, ಮಂಜುನಾಥ್, ವೆಂಕಟೇಶ್, ಹೊಸಕೋಟೆ ಸುಬ್ಬಣ್ಣ, ವಿಜಯಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…