ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ-ಮಾದಿಗ ಎಂದೇ ಬರಸಬೇಕು- ಮಾಜಿ ಸಚಿವ ಎಚ್.ಆಂಜನೇಯ ಸೂಚನೆ

ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ನಮ್ಮ ಸಮುದಾಯದ ಬಂಧುಗಳು A.K., A.D., A.A ಎಂದು ಬರಸದೆ, ಧರ್ಮದ ಕಾಲಂನಲ್ಲಿ ಹಿಂದು, ಜಾತಿ ಮತ್ತು ಉಪಜಾತಿ ಕಾಲಂನಲ್ಲಿ B-061 ಮಾದಿಗ ಎಂದೇ ಬರಸಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣ ಸಮೀಪವಿರುವ ಡಾ. ರಾಜ್‌ಕುಮಾರ್ ಕಲಾಮಂದಿರ (ಟೌನ್‌ಹಾಲ್)ದಲ್ಲಿ ಕರ್ನಾಟಕ ಮಾದರ ಮಹಾಸಭಾ ವತಿಯಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬಗ್ಗೆ ಜಾಗೃತಿ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ನಾಲ್ಕು ದಶಕಗಳ ಹೋರಾಟ, ತ್ಯಾಗ, ಬಲಿದಾನಗಳ ಫಲಶೃತಿಯಾಗಿ ಕರ್ನಾಟಕ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಜಾರಿಗೆ ತಂದಿರುವುದು ನಮಗೆಲ್ಲರಿಗೂ ಸಂತೋಷದಾಯಕ ವಿಷಯವಾಗಿದೆ. ಮುಂದುವರೆದು ಒಳ ಮೀಸಲಾತಿ ಪ್ರಯೋಜನವನ್ನು ನಮ್ಮ ಸಮುದಾಯ ಪಡೆದುಕೊಳ್ಳುವ ದಾರಿ ಸುಗಮವಾಗಿಲ್ಲ, ಮೀಸಲಾತಿಗೆ ಅನುಗುಣವಾದ ಶೈಕ್ಷಣಿಕ ಅರ್ಹತೆಗಳುಳ್ಳ ಅಭ್ಯರ್ಥಿಗಳ ಸಂಖ್ಯೆ ಕೇವಲ ಬೆರಳೆಣಿಕೆಯಷ್ಟಿರುವುದು ದುರಾದೃಷ್ಟಕರ ಸಂಗತಿ. ಆದ್ದರಿಂದ ನಮ್ಮ ಸಮುದಾಯದ ಯುವ ಜನರನ್ನು ಕನಿಷ್ಠ ಪದವಿ ವಿದ್ಯಾವಂತರನ್ನಾಗಿ ರೂಪಿಸಬೇಕಾದ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಒಳಮೀಸಲಾತಿಯ ಹೋರಾಟದ ಅನೇಕ ಮಜಲುಗಳಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ದುಡಿದ ಸಮಾಜದ ನಾಯಕರುಗಳು ಈ ಒಳಮೀಸಲಾತಿ ಪಡೆದು ಕೊಳ್ಳುವಲ್ಲಿ ಇರುವಂತಹ ತೊಡಕುಗಳನ್ನು ಪರಿಹರಿಸುವ ಸಲುವಾಗಿ ಎಲ್ಲಾ ರಾಜಕೀಯ ಪಕ್ಷಗಳ ನೇತಾರರು ಪಕ್ಷಾತೀತವಾಗಿ ಒಗ್ಗೂಡಿ ರಾಜ್ಯ ಮಟ್ಟದಲ್ಲಿ ಕರ್ನಾಟಕ ಮಾದಾರ ಮಹಾಸಭಾವನ್ನು ಸ್ಥಾಪಿಸಲಾಗಿದ್ದು, ಸಮುದಾಯವನ್ನು ಸದೃಢವಾಗಿ ಕಟ್ಟಿ ಬೆಳೆಸಲು ಅನೇಕ ಕಾರ್ಯಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಮಾಜಿ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ರಾಜ್ಯದಲ್ಲಿ 50ಲಕ್ಷಕ್ಕೂ ಹೆಚ್ಚು ಮಾದಿಗರು ಇದ್ದಾರೆ. ಮಾದಿಗ ಕುರಿತು ಚಿಂತನ ಮಂಥನ‌ವಾಗಬೇಕು. ಮೂಲ ಜಾತಿ ಮಾದಿಗ ಎಂದು ಬರೆಸಿದರೆ ಮಾತ್ರ ಮೀಸಲಾತಿ, ಇಲ್ಲದಿದ್ದಲ್ಲಿ ಯಾವ ಮೀಸಲಾತಿಯೂ ಬರುವುದಿಲ್ಲ ಎಂದು ಎಚ್ಚರಿಸಿದರು…

ಈ ವೇಳೆ ಪಾಲನಹಳ್ಳಿ ಮಠದ ಸಂಸ್ಥಾಪಕರು, ಪೀಠಾಧ್ಯಕ್ಷರಾದ ಡಾ. ಸಿದ್ದರಾಜು ಸ್ವಾಮಿ, ರಾಜ್ಯಸಭಾ ಮಾಜಿ ಸದಸ್ಯರಾದ ಡಾ. ಎಲ್. ಹನುಮಂತಯ್ಯ, ಚಂದ್ರಪ್ಪ, ಪಾವಗಡ ಮಾಜಿ ಶಾಸಕ ತಿಮ್ಮರಾಯಪ್ಪ, ಎಸ್ ಎಸ್ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ವಿ ಮಹೇಶ್ ಕುಮಾರ್, ರಾಮಕೃಷ್ಣಪ್ಪ, ಬಚ್ಚಹಳ್ಳಿ ನಾಗರಾಜ್, ರಾಜಘಟ್ಟ ಕಾಂತರಾಜ್, ತಳವಾರ ನಾಗರಾಜ್, ಹರ್ಷ, ಕುಂಬಾರಪೇಟೆ ನಾರಾಯಣಪ್ಪ, ಮುನಿಯಪ್ಪ. T. D, ವಕೀಲರಾದ ಕಾಂತರಾಜು, ಮುನಿರಾಜು, ಶಿವು, ಮನು, ಮಂಜುನಾಥ್, ವೆಂಕಟೇಶ್, ಹೊಸಕೋಟೆ ಸುಬ್ಬಣ್ಣ, ವಿಜಯಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

9 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

11 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

13 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

21 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago