ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ನಮ್ಮ ಸಮುದಾಯದ ಬಂಧುಗಳು A.K., A.D., A.A ಎಂದು ಬರಸದೆ, ಧರ್ಮದ ಕಾಲಂನಲ್ಲಿ ಹಿಂದು, ಜಾತಿ ಮತ್ತು ಉಪಜಾತಿ ಕಾಲಂನಲ್ಲಿ B-061 ಮಾದಿಗ ಎಂದೇ ಬರಸಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.
ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣ ಸಮೀಪವಿರುವ ಡಾ. ರಾಜ್ಕುಮಾರ್ ಕಲಾಮಂದಿರ (ಟೌನ್ಹಾಲ್)ದಲ್ಲಿ ಕರ್ನಾಟಕ ಮಾದರ ಮಹಾಸಭಾ ವತಿಯಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬಗ್ಗೆ ಜಾಗೃತಿ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ನಾಲ್ಕು ದಶಕಗಳ ಹೋರಾಟ, ತ್ಯಾಗ, ಬಲಿದಾನಗಳ ಫಲಶೃತಿಯಾಗಿ ಕರ್ನಾಟಕ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಜಾರಿಗೆ ತಂದಿರುವುದು ನಮಗೆಲ್ಲರಿಗೂ ಸಂತೋಷದಾಯಕ ವಿಷಯವಾಗಿದೆ. ಮುಂದುವರೆದು ಒಳ ಮೀಸಲಾತಿ ಪ್ರಯೋಜನವನ್ನು ನಮ್ಮ ಸಮುದಾಯ ಪಡೆದುಕೊಳ್ಳುವ ದಾರಿ ಸುಗಮವಾಗಿಲ್ಲ, ಮೀಸಲಾತಿಗೆ ಅನುಗುಣವಾದ ಶೈಕ್ಷಣಿಕ ಅರ್ಹತೆಗಳುಳ್ಳ ಅಭ್ಯರ್ಥಿಗಳ ಸಂಖ್ಯೆ ಕೇವಲ ಬೆರಳೆಣಿಕೆಯಷ್ಟಿರುವುದು ದುರಾದೃಷ್ಟಕರ ಸಂಗತಿ. ಆದ್ದರಿಂದ ನಮ್ಮ ಸಮುದಾಯದ ಯುವ ಜನರನ್ನು ಕನಿಷ್ಠ ಪದವಿ ವಿದ್ಯಾವಂತರನ್ನಾಗಿ ರೂಪಿಸಬೇಕಾದ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಒಳಮೀಸಲಾತಿಯ ಹೋರಾಟದ ಅನೇಕ ಮಜಲುಗಳಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ದುಡಿದ ಸಮಾಜದ ನಾಯಕರುಗಳು ಈ ಒಳಮೀಸಲಾತಿ ಪಡೆದು ಕೊಳ್ಳುವಲ್ಲಿ ಇರುವಂತಹ ತೊಡಕುಗಳನ್ನು ಪರಿಹರಿಸುವ ಸಲುವಾಗಿ ಎಲ್ಲಾ ರಾಜಕೀಯ ಪಕ್ಷಗಳ ನೇತಾರರು ಪಕ್ಷಾತೀತವಾಗಿ ಒಗ್ಗೂಡಿ ರಾಜ್ಯ ಮಟ್ಟದಲ್ಲಿ ಕರ್ನಾಟಕ ಮಾದಾರ ಮಹಾಸಭಾವನ್ನು ಸ್ಥಾಪಿಸಲಾಗಿದ್ದು, ಸಮುದಾಯವನ್ನು ಸದೃಢವಾಗಿ ಕಟ್ಟಿ ಬೆಳೆಸಲು ಅನೇಕ ಕಾರ್ಯಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಮಾಜಿ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.
ರಾಜ್ಯದಲ್ಲಿ 50ಲಕ್ಷಕ್ಕೂ ಹೆಚ್ಚು ಮಾದಿಗರು ಇದ್ದಾರೆ. ಮಾದಿಗ ಕುರಿತು ಚಿಂತನ ಮಂಥನವಾಗಬೇಕು. ಮೂಲ ಜಾತಿ ಮಾದಿಗ ಎಂದು ಬರೆಸಿದರೆ ಮಾತ್ರ ಮೀಸಲಾತಿ, ಇಲ್ಲದಿದ್ದಲ್ಲಿ ಯಾವ ಮೀಸಲಾತಿಯೂ ಬರುವುದಿಲ್ಲ ಎಂದು ಎಚ್ಚರಿಸಿದರು…
ಈ ವೇಳೆ ಪಾಲನಹಳ್ಳಿ ಮಠದ ಸಂಸ್ಥಾಪಕರು, ಪೀಠಾಧ್ಯಕ್ಷರಾದ ಡಾ. ಸಿದ್ದರಾಜು ಸ್ವಾಮಿ, ರಾಜ್ಯಸಭಾ ಮಾಜಿ ಸದಸ್ಯರಾದ ಡಾ. ಎಲ್. ಹನುಮಂತಯ್ಯ, ಚಂದ್ರಪ್ಪ, ಪಾವಗಡ ಮಾಜಿ ಶಾಸಕ ತಿಮ್ಮರಾಯಪ್ಪ, ಎಸ್ ಎಸ್ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ವಿ ಮಹೇಶ್ ಕುಮಾರ್, ರಾಮಕೃಷ್ಣಪ್ಪ, ಬಚ್ಚಹಳ್ಳಿ ನಾಗರಾಜ್, ರಾಜಘಟ್ಟ ಕಾಂತರಾಜ್, ತಳವಾರ ನಾಗರಾಜ್, ಹರ್ಷ, ಕುಂಬಾರಪೇಟೆ ನಾರಾಯಣಪ್ಪ, ಮುನಿಯಪ್ಪ. T. D, ವಕೀಲರಾದ ಕಾಂತರಾಜು, ಮುನಿರಾಜು, ಶಿವು, ಮನು, ಮಂಜುನಾಥ್, ವೆಂಕಟೇಶ್, ಹೊಸಕೋಟೆ ಸುಬ್ಬಣ್ಣ, ವಿಜಯಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…