ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ

ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್, ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆ, ಚೈಲ್ಡ್ ರೈಟ್ಸ್ ಟ್ರಸ್ಟ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರೋಜಿಪುರ ಇವರುಗಳ ಸಹಯೋಗದಲ್ಲಿ ಡಿ.4 ರಂದು “ತೆರೆದ ಮನೆ” ಕಾರ್ಯಕ್ರಮವನ್ನು ನಡೆಸಲಾಯಿತು.

ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಚಿದಾನಂದ ಮೂರ್ತಿ ಮಾತನಾಡಿ “ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ಹಾಗೂ ಚೈಲ್ಡ್ ರೈಟ್ಸ್ ಟ್ರಸ್ಟ್ ಇವರುಗಳ ಸಹಯೋಗದಲ್ಲಿ ನಡೆಯುತ್ತಿರುವ “ಎಲ್ಲಾ ಮಕ್ಕಳಿಗೂ, ಎಲ್ಲಾ ಹಕ್ಕುಗಳು (ಹಕ್ಕಿನೊಂದಿಗೆ ಜವಾಬ್ದಾರಿ)” ಅಭಿಯಾನದಡಿ  ಮಕ್ಕಳ ಬದುಕು, ರಕ್ಷಣೆ, ಅಭಿವೃದ್ಧಿ ಹಾಗೂ ಭಾಗವಹಿಸುವಿಕೆಯ ಹಕ್ಕುಗಳನ್ನು ಎಲ್ಲರಿಗೂ ತಲುಪಿಸಲು ಹಾಗೂ ಮಕ್ಕಳಿಗಾಗಿ ಇರುವ ಕಾರ್ಯಕ್ರಮಗಳು ಮತ್ತು ಯೋಜನೆಗಳು ತಲುಪುವಂತೆ ಮಾಡುವುದು ಮತ್ತು ಮಕ್ಕಳ ಹಕ್ಕುಗಳ ಜಾಗೃತಿ ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದಡಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪೊಲೀಸ್ ಠಾಣೆಯನ್ನು ಮಕ್ಕಳ ಸ್ನೇಹಿ ಪೊಲೀಸ್ ಠಾಣೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ನಡೆಯುತ್ತಿರುವ “ತೆರೆದ ಮನೆ” ಕಾರ್ಯಕ್ರಮವನ್ನು ನಮ್ಮ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರೋಜಿಪುರ ಇವರುಗಳೊಂದಿಗೆ ಮಾತನಾಡಿ ಕಾರ್ಯಕ್ರಮವನ್ನು ಎಲ್ಲರ ಸಹಯೋಗದಲ್ಲಿ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

ಮಕ್ಕಳನ್ನು ಬಸ್ ನಲ್ಲಿ ಠಾಣೆಗೆ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಗಿತ್ತು. ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಅಮರೇಶ್ ಗೌಡ ಎ ರವರು ಈ ವ್ಯವಸ್ಥೆಯನ್ನು ಮಕ್ಕಳಿಗಾಗಿ ಮಾಡಿದ್ದರು. ಠಾಣೆಯ ತನಿಖಾ ಸಹಾಯಕರಾದ ಮುನಿರಾಜುರವರು ಮಕ್ಕಳಿಗೆ ಠಾಣೆಯ ಬೇರೆ ಬೇರೆ ವಿಭಾಗಗಳು, ಎಫ್ ಐ ಆರ್ ನೋಂದಣಿ ಪ್ರಕ್ರಿಯೆ, ಮಹಿಳಾ ಸಹಾಯವಾಣಿ, ಉಪಯೋಗಿಸುವ ಶಸ್ತ್ರಗಳು ಇತ್ಯಾದಿ ಮಾಹಿತಿಯನ್ನು ಸಂಪೂರ್ಣವಾಗಿ ಮಕ್ಕಳಿಗೆ ನೀಡಿದರು.

ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳು ಮಕ್ಕಳಿಗೆ ಬಾಲ್ಯ ವಿವಾಹ, ಬಾಲಕಾರ್ಮಿಕತೆ ಹಾಗೂ ಮಾದಕ ವಸ್ತುಗಳ ಬಗ್ಗೆ ಜಾಗೃತಿ ನೀಡಿ ನೇರ ಸಂವಾದ ಹಾಗೂ ಪ್ರಶ್ನೆಗಳನ್ನು ಕೇಳಲು ಅವಕಾಶ ನೀಡಿದರು.

ಕಾರ್ಯಕ್ರಮದಲ್ಲಿ ರೋಜಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 58 ಮಕ್ಕಳು ಹಾಗೂ ಶಿಕ್ಷಕರು, ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆಯ ಎಲ್ಲಾ ಆರಕ್ಷಕರು ಸಿಬ್ಬಂದಿ ವರ್ಗದವರು, ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಸಂಚಾಲಕರಾದ ನವೀನ್ ಹಾಗೂ ಸ್ವಯಂಸೇವಕರಾದ ರತ್ನ, ಕೀರ್ತಿ ಮತ್ತು ಲಾವಣ್ಯ ಇವರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 days ago