ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ

ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್, ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆ, ಚೈಲ್ಡ್ ರೈಟ್ಸ್ ಟ್ರಸ್ಟ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರೋಜಿಪುರ ಇವರುಗಳ ಸಹಯೋಗದಲ್ಲಿ ಡಿ.4 ರಂದು “ತೆರೆದ ಮನೆ” ಕಾರ್ಯಕ್ರಮವನ್ನು ನಡೆಸಲಾಯಿತು.

ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಚಿದಾನಂದ ಮೂರ್ತಿ ಮಾತನಾಡಿ “ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ಹಾಗೂ ಚೈಲ್ಡ್ ರೈಟ್ಸ್ ಟ್ರಸ್ಟ್ ಇವರುಗಳ ಸಹಯೋಗದಲ್ಲಿ ನಡೆಯುತ್ತಿರುವ “ಎಲ್ಲಾ ಮಕ್ಕಳಿಗೂ, ಎಲ್ಲಾ ಹಕ್ಕುಗಳು (ಹಕ್ಕಿನೊಂದಿಗೆ ಜವಾಬ್ದಾರಿ)” ಅಭಿಯಾನದಡಿ  ಮಕ್ಕಳ ಬದುಕು, ರಕ್ಷಣೆ, ಅಭಿವೃದ್ಧಿ ಹಾಗೂ ಭಾಗವಹಿಸುವಿಕೆಯ ಹಕ್ಕುಗಳನ್ನು ಎಲ್ಲರಿಗೂ ತಲುಪಿಸಲು ಹಾಗೂ ಮಕ್ಕಳಿಗಾಗಿ ಇರುವ ಕಾರ್ಯಕ್ರಮಗಳು ಮತ್ತು ಯೋಜನೆಗಳು ತಲುಪುವಂತೆ ಮಾಡುವುದು ಮತ್ತು ಮಕ್ಕಳ ಹಕ್ಕುಗಳ ಜಾಗೃತಿ ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದಡಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪೊಲೀಸ್ ಠಾಣೆಯನ್ನು ಮಕ್ಕಳ ಸ್ನೇಹಿ ಪೊಲೀಸ್ ಠಾಣೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ನಡೆಯುತ್ತಿರುವ “ತೆರೆದ ಮನೆ” ಕಾರ್ಯಕ್ರಮವನ್ನು ನಮ್ಮ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರೋಜಿಪುರ ಇವರುಗಳೊಂದಿಗೆ ಮಾತನಾಡಿ ಕಾರ್ಯಕ್ರಮವನ್ನು ಎಲ್ಲರ ಸಹಯೋಗದಲ್ಲಿ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

ಮಕ್ಕಳನ್ನು ಬಸ್ ನಲ್ಲಿ ಠಾಣೆಗೆ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಗಿತ್ತು. ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಅಮರೇಶ್ ಗೌಡ ಎ ರವರು ಈ ವ್ಯವಸ್ಥೆಯನ್ನು ಮಕ್ಕಳಿಗಾಗಿ ಮಾಡಿದ್ದರು. ಠಾಣೆಯ ತನಿಖಾ ಸಹಾಯಕರಾದ ಮುನಿರಾಜುರವರು ಮಕ್ಕಳಿಗೆ ಠಾಣೆಯ ಬೇರೆ ಬೇರೆ ವಿಭಾಗಗಳು, ಎಫ್ ಐ ಆರ್ ನೋಂದಣಿ ಪ್ರಕ್ರಿಯೆ, ಮಹಿಳಾ ಸಹಾಯವಾಣಿ, ಉಪಯೋಗಿಸುವ ಶಸ್ತ್ರಗಳು ಇತ್ಯಾದಿ ಮಾಹಿತಿಯನ್ನು ಸಂಪೂರ್ಣವಾಗಿ ಮಕ್ಕಳಿಗೆ ನೀಡಿದರು.

ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳು ಮಕ್ಕಳಿಗೆ ಬಾಲ್ಯ ವಿವಾಹ, ಬಾಲಕಾರ್ಮಿಕತೆ ಹಾಗೂ ಮಾದಕ ವಸ್ತುಗಳ ಬಗ್ಗೆ ಜಾಗೃತಿ ನೀಡಿ ನೇರ ಸಂವಾದ ಹಾಗೂ ಪ್ರಶ್ನೆಗಳನ್ನು ಕೇಳಲು ಅವಕಾಶ ನೀಡಿದರು.

ಕಾರ್ಯಕ್ರಮದಲ್ಲಿ ರೋಜಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 58 ಮಕ್ಕಳು ಹಾಗೂ ಶಿಕ್ಷಕರು, ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣೆಯ ಎಲ್ಲಾ ಆರಕ್ಷಕರು ಸಿಬ್ಬಂದಿ ವರ್ಗದವರು, ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಸಂಚಾಲಕರಾದ ನವೀನ್ ಹಾಗೂ ಸ್ವಯಂಸೇವಕರಾದ ರತ್ನ, ಕೀರ್ತಿ ಮತ್ತು ಲಾವಣ್ಯ ಇವರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

7 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

8 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago