390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ: 9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು- ಸಚಿವ ಎಂ ಬಿ ಪಾಟೀಲ

ದೇವನಹಳ್ಳಿ: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು.

ಮಹಾನಗರ ಗ್ಯಾಸ್ ಲಿಮಿಟೆಡ್ ಜತೆ ಸೇರಿ ಐಬಿಸಿ ಈ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, `ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ ಮಾಡಲಿದ್ದು, 300 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇಲ್ಲಿ ಉತ್ಪಾದಿಸಲಾಗುವ ಬ್ಯಾಟರಿಗಳ ಪೈಕಿ ಶೇಕಡ 20ರಷ್ಟನ್ನು ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು ಮಾಡಲಾಗುವುದು’ ಎಂದಿದ್ದಾರೆ.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಐಬಿಸಿ ಘಟಕಕ್ಕೆ 10 ಎಕರೆ ಜಾಗ ಕೊಟ್ಟಿದ್ದು, ಫಾಕ್ಸ್-ಕಾನ್ ಸಂಸ್ಥೆಯ ಸಮೀಪದಲ್ಲೇ ಇದು ಅಸ್ತಿತ್ವಕ್ಕೆ ಬರಲಿದೆ. ಮುಂದಿನ ಒಂಬತ್ತು ತಿಂಗಳಲ್ಲಿ ಈ ಘಟಕವು ಕಾರ್ಯಾಚರಣೆ ಆರಂಭಿಸಲಿದ್ದು, ಇಲ್ಲೇ ಬ್ಯಾಟರಿಗಳನ್ನು ತಯಾರಿಸಿ, ಇಲ್ಲಿಂದಲೇ ದೇಶ-ವಿದೇಶಗಳಿಗೂ ಕಳಿಸಿ ಕೊಡಲಿದೆ ಎಂದು ಅವರು ಮಾಹಿತಿ ನೀಡಿದರು.

ಸದ್ಯಕ್ಕೆ ಐಬಿಸಿ ಕಂಪನಿಯು ದಕ್ಷಿಣ ಕೊರಿಯಾದಲ್ಲಿ ಸೆಲ್ಸ್ ಉತ್ಪಾದಿಸಿ, ಅವುಗಳನ್ನು ಇಲ್ಲಿಗೆ ತಂದು ಪೂರ್ಣ ಪ್ರಮಾಣದ ಬ್ಯಾಟರಿಗಳನ್ನು ತಯಾರಿಸುತ್ತಿದೆ. ಈ ಘಟಕ ಕಾರ್ಯಾರಂಭ ಆದ ನಂತರ ಇಲ್ಲೇ ಸೆಲ್ ಗಳ ಉತ್ಪಾದನೆ ಕೂಡ ಆಗಲಿದೆ. ಇದು ದೇಶದಲ್ಲೇ ಮೊದಲ ಸೆಲ್ ಉತ್ಪಾದನಾ ಘಟಕವಾಗಲಿದೆ. ಮುಂಬರುವ ದಿನಗಳಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ಜತೆಗೆ ಉಳಿದ ವಾಹನಗಳಿಗೂ ಇದು ಬ್ಯಾಟರಿ ಪೂರೈಸಲಿದೆ ಎಂದು ಅವರು ವಿವರಿಸಿದರು.

ಭಾರತದಲ್ಲಿ ಶಿಕ್ಷಣ ಹಾಗೂ ಅಮೆರಿಕದ ಸಿಲಿಕಾನ್ ವ್ಯಾಲಿಯಲ್ಲಿ ತರಬೇತಿ ಪಡೆದ ಯುವ ಉದ್ಯಮಿಗಳು ಐಬಿಸಿ ಕಂಪನಿ ಸ್ಥಾಪಿಸಿ, ಬ್ಯಾಟರಿಗಳ ವಿನ್ಯಾಸ, ಉತ್ಪಾದನೆಗೆ ಆದ್ಯತೆ ಕೊಟ್ಟಿದ್ದಾರೆ. ಹಾಗೆಯೇ ಭಾರತದ ಅಗತ್ಯಕ್ಕೆ ಹೊಂದುವ ಹಾಗೆ ವಿನ್ಯಾಸ ಮಾಡಿರುವುದು ಮೆಚ್ಚುವಂತಹದ್ದು ಎಂದು ಸಚಿವರು ಶ್ಲಾಘಿಸಿದರು

ಇದು ಭಾರತದಲ್ಲಿ ಇಂತಹ ಪ್ರಪ್ರಥಮ ಯೋಜನೆಯಾಗಿದೆ. ಇಲ್ಲಿ ರೆಟ್ರೋಫಿಟ್ ಬ್ಯಾಟರಿಗಳನ್ನು ಕೂಡ ತಯಾರಿಸಲಾಗುವುದು. ಇದರಿಂದ ರಾಜ್ಯದ ಆರ್ಥಿಕತೆಗೆ ಹೊಸ ಬಲ ಬರಲಿದ್ದು, ಚೀನಾದ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಎಂದು ಅವರು ವಿವರಿಸಿದ್ದಾರೆ.

ನಾವು ಸುಸ್ಥಿರ, ತಂತ್ರಜ್ಞಾನಾಧಾರಿತ ಮತ್ತು ಎಲ್ಲರನ್ನೂ ಒಳಗೊಳ್ಳುವಂತಹ ಆರ್ಥಿಕತೆಯನ್ನು ಕಟ್ಟುವ ಗುರಿ ಇಟ್ಟುಕೊಂಡಿದ್ದೇವೆ. ಇನ್ನೊಂದೆಡೆಯಲ್ಲಿ, ಹಸಿರು ಇಂಧನ ಬಳಕೆಗೆ ಉತ್ತೇಜನ ಕೊಡುತ್ತಿದ್ದೇವೆ. ಐಬಿಸಿ ಗಿಗಾ ಫ್ಯಾಕ್ಟರಿಯು ಈ ಪರಿವರ್ತನೆಯ ಮೈಲುಗಲ್ಲಾಗಿದೆ. ಇದರಿಂದಾಗಿ ರಾಜ್ಯವು ಇಂಧನ ಕ್ಷೇತ್ರದ ಸಂಶೋಧನೆಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಐಬಿಸಿ ಸಿಇಒ ಪ್ರಿಯದರ್ಶಿ ಪಾಂಡಾ, ಸಿಎಸ್ಒ ಸುಂದರ್ ರಾಮಮೂರ್ತಿ, ಕುನಾಲ್ ಜೈನ್, ಜಾಸ್ ಟೆಕ್ ಅಧ್ಯಕ್ಷ ಜೇಸನ್ ಚುಂಗ್, ಉಪಾಧ್ಯಕ್ಷ ಡ್ಯಾನಿ ಚುಂಗ್, ಮಹಾನಗರ್ ಗ್ಯಾಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಆಶು ಸಿಂಘಾಲ್, ಡೆಪ್ಯುಟಿ ಎಂಡಿ ಸಂಜಯ್ ಶೇಂದೆ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

13 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

16 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

1 day ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

1 day ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

1 day ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

1 day ago