390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ: 9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು- ಸಚಿವ ಎಂ ಬಿ ಪಾಟೀಲ

ದೇವನಹಳ್ಳಿ: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು.

ಮಹಾನಗರ ಗ್ಯಾಸ್ ಲಿಮಿಟೆಡ್ ಜತೆ ಸೇರಿ ಐಬಿಸಿ ಈ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, `ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ ಮಾಡಲಿದ್ದು, 300 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇಲ್ಲಿ ಉತ್ಪಾದಿಸಲಾಗುವ ಬ್ಯಾಟರಿಗಳ ಪೈಕಿ ಶೇಕಡ 20ರಷ್ಟನ್ನು ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು ಮಾಡಲಾಗುವುದು’ ಎಂದಿದ್ದಾರೆ.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಐಬಿಸಿ ಘಟಕಕ್ಕೆ 10 ಎಕರೆ ಜಾಗ ಕೊಟ್ಟಿದ್ದು, ಫಾಕ್ಸ್-ಕಾನ್ ಸಂಸ್ಥೆಯ ಸಮೀಪದಲ್ಲೇ ಇದು ಅಸ್ತಿತ್ವಕ್ಕೆ ಬರಲಿದೆ. ಮುಂದಿನ ಒಂಬತ್ತು ತಿಂಗಳಲ್ಲಿ ಈ ಘಟಕವು ಕಾರ್ಯಾಚರಣೆ ಆರಂಭಿಸಲಿದ್ದು, ಇಲ್ಲೇ ಬ್ಯಾಟರಿಗಳನ್ನು ತಯಾರಿಸಿ, ಇಲ್ಲಿಂದಲೇ ದೇಶ-ವಿದೇಶಗಳಿಗೂ ಕಳಿಸಿ ಕೊಡಲಿದೆ ಎಂದು ಅವರು ಮಾಹಿತಿ ನೀಡಿದರು.

ಸದ್ಯಕ್ಕೆ ಐಬಿಸಿ ಕಂಪನಿಯು ದಕ್ಷಿಣ ಕೊರಿಯಾದಲ್ಲಿ ಸೆಲ್ಸ್ ಉತ್ಪಾದಿಸಿ, ಅವುಗಳನ್ನು ಇಲ್ಲಿಗೆ ತಂದು ಪೂರ್ಣ ಪ್ರಮಾಣದ ಬ್ಯಾಟರಿಗಳನ್ನು ತಯಾರಿಸುತ್ತಿದೆ. ಈ ಘಟಕ ಕಾರ್ಯಾರಂಭ ಆದ ನಂತರ ಇಲ್ಲೇ ಸೆಲ್ ಗಳ ಉತ್ಪಾದನೆ ಕೂಡ ಆಗಲಿದೆ. ಇದು ದೇಶದಲ್ಲೇ ಮೊದಲ ಸೆಲ್ ಉತ್ಪಾದನಾ ಘಟಕವಾಗಲಿದೆ. ಮುಂಬರುವ ದಿನಗಳಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ಜತೆಗೆ ಉಳಿದ ವಾಹನಗಳಿಗೂ ಇದು ಬ್ಯಾಟರಿ ಪೂರೈಸಲಿದೆ ಎಂದು ಅವರು ವಿವರಿಸಿದರು.

ಭಾರತದಲ್ಲಿ ಶಿಕ್ಷಣ ಹಾಗೂ ಅಮೆರಿಕದ ಸಿಲಿಕಾನ್ ವ್ಯಾಲಿಯಲ್ಲಿ ತರಬೇತಿ ಪಡೆದ ಯುವ ಉದ್ಯಮಿಗಳು ಐಬಿಸಿ ಕಂಪನಿ ಸ್ಥಾಪಿಸಿ, ಬ್ಯಾಟರಿಗಳ ವಿನ್ಯಾಸ, ಉತ್ಪಾದನೆಗೆ ಆದ್ಯತೆ ಕೊಟ್ಟಿದ್ದಾರೆ. ಹಾಗೆಯೇ ಭಾರತದ ಅಗತ್ಯಕ್ಕೆ ಹೊಂದುವ ಹಾಗೆ ವಿನ್ಯಾಸ ಮಾಡಿರುವುದು ಮೆಚ್ಚುವಂತಹದ್ದು ಎಂದು ಸಚಿವರು ಶ್ಲಾಘಿಸಿದರು

ಇದು ಭಾರತದಲ್ಲಿ ಇಂತಹ ಪ್ರಪ್ರಥಮ ಯೋಜನೆಯಾಗಿದೆ. ಇಲ್ಲಿ ರೆಟ್ರೋಫಿಟ್ ಬ್ಯಾಟರಿಗಳನ್ನು ಕೂಡ ತಯಾರಿಸಲಾಗುವುದು. ಇದರಿಂದ ರಾಜ್ಯದ ಆರ್ಥಿಕತೆಗೆ ಹೊಸ ಬಲ ಬರಲಿದ್ದು, ಚೀನಾದ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಎಂದು ಅವರು ವಿವರಿಸಿದ್ದಾರೆ.

ನಾವು ಸುಸ್ಥಿರ, ತಂತ್ರಜ್ಞಾನಾಧಾರಿತ ಮತ್ತು ಎಲ್ಲರನ್ನೂ ಒಳಗೊಳ್ಳುವಂತಹ ಆರ್ಥಿಕತೆಯನ್ನು ಕಟ್ಟುವ ಗುರಿ ಇಟ್ಟುಕೊಂಡಿದ್ದೇವೆ. ಇನ್ನೊಂದೆಡೆಯಲ್ಲಿ, ಹಸಿರು ಇಂಧನ ಬಳಕೆಗೆ ಉತ್ತೇಜನ ಕೊಡುತ್ತಿದ್ದೇವೆ. ಐಬಿಸಿ ಗಿಗಾ ಫ್ಯಾಕ್ಟರಿಯು ಈ ಪರಿವರ್ತನೆಯ ಮೈಲುಗಲ್ಲಾಗಿದೆ. ಇದರಿಂದಾಗಿ ರಾಜ್ಯವು ಇಂಧನ ಕ್ಷೇತ್ರದ ಸಂಶೋಧನೆಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಐಬಿಸಿ ಸಿಇಒ ಪ್ರಿಯದರ್ಶಿ ಪಾಂಡಾ, ಸಿಎಸ್ಒ ಸುಂದರ್ ರಾಮಮೂರ್ತಿ, ಕುನಾಲ್ ಜೈನ್, ಜಾಸ್ ಟೆಕ್ ಅಧ್ಯಕ್ಷ ಜೇಸನ್ ಚುಂಗ್, ಉಪಾಧ್ಯಕ್ಷ ಡ್ಯಾನಿ ಚುಂಗ್, ಮಹಾನಗರ್ ಗ್ಯಾಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಆಶು ಸಿಂಘಾಲ್, ಡೆಪ್ಯುಟಿ ಎಂಡಿ ಸಂಜಯ್ ಶೇಂದೆ ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

4 hours ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

5 hours ago

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

21 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

22 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

1 day ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

1 day ago