40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ ದಿಟ್ಟ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಈ ಹಿನ್ನೆಲೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಜಿಲ್ಲಾಧಿಕಾರಿಗಳನ್ನ ಅಭಿನಂದಿಸುವ ಮೂಲಕ ಭೂಗಳ್ಳರಿಗೆ ಎಚ್ಚರಿಕೆ ನೀಡುವಂತೆ ಮನವಿ ಮಾಡಿದರು.

ದೊಡ್ಡಬಳ್ಳಾಪುರ ನಗರದಂಚಿನ ಅರೇಹಳ್ಳಿಗುಡ್ಡದಹಳ್ಳಿ ಸರ್ವೆ ನಂಬರ್ 57ರ ಸರ್ಕಾರಿ ಗೋಮಾಳದಲ್ಲಿ 6 ಎಕರೆ ಜಾಗವನ್ನ ಅಕ್ರಮವಾಗಿ ಮಂಜೂರು ಮಾಡಲಾಗಿತ್ತು. ಕಾನೂನುಬಾಹಿರವಾಗಿ ಮಂಜೂರಾತಿಯನ್ನ ವಜಾ ಮಾಡುವಂತೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಹೋರಾಟ ಮಾಡಿತ್ತು. ಹೋರಾಟದ ಫಲ ಕಾನೂನುಬಾಹಿರ ಮಂಜೂರಾತಿ ವಜಾ ಆಗಿದೆ, ಜಿಲ್ಲಾಧಿಕಾರಿಗಳಾದ ಬಸವರಾಜು ಸೆಪ್ಟೆಂಬರ್ 2ರಂದು ಹೊರಡಿಸಿದ ಆದೇಶದಲ್ಲಿ  ಸುಮಾರು 40 ಕೋಟಿ ಮೌಲ್ಯದ 6 ಎಕರೆ ಜಾಗವನ್ನ ಸರ್ಕಾರಿ ವಶಕ್ಕೆ ಪಡೆದಿದ್ದಾರೆ.

ಜಿಲ್ಲಾಧಿಕಾರಿಗಳ ದಿಟ್ಟ ಕ್ರಮ, ಭೂಗಳ್ಳರಿಗೆ ಎಚ್ಚರಿಕೆ ಸಂದೇಶವನ್ನ ರವಾನೆ ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಕಾನೂನುಬಾಹಿರ ಮಂಜೂರಾತಿ ವಜಾ ಮಾಡುವಂತೆ ಹೋರಾಟ ಮಾಡಿದ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಯು.ಮುನಿರಾಜು ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳನ್ನ ಅಭಿನಂದಿಸಿದರು.

ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಯು.ಮುನಿರಾಜು, ಸರ್ಕಾರಿ ಗೋಮಾಳ ಜಾಗವನ್ನ ಕಾನೂನುಬಾಹಿರವಾಗಿ ನಾಲ್ಕು ಮಂದಿಗೆ ಮಂಜೂರಾತಿ ಮಾಡಲಾಗಿತ್ತು, ಇದರ ವಿರುದ್ಧ ನಮ್ಮ ಸಂಘಟನೆ ಬೀದಿಗಿಳಿದು ಹೋರಾಟ ಮಾಡಿತ್ತು, ಮಂಜೂರಾತಿಯನ್ನ ವಜಾ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಜಿಲ್ಲಾಧಿಕಾರಿಗಳು ಯಾವುದಕ್ಕೂ ಅಂಜದೆ ಬಗ್ಗದೆ ಜಾಗವನ್ನ ಸರ್ಕಾರಿ ವಶಕ್ಕೆ ಪಡೆದಿದ್ದಾರೆ, ಅವರಿಗೆ ನಾವು ಅಭಿನಂದನೆ ಸಲ್ಲಿಸಿದ್ದೇವೆ.

ಇದೇ ವೇಳೆ ನಾವು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದು, ಕಾನೂನುಬಾಹಿರವಾಗಿ ಭೂ ಮಂಜೂರಾತಿ ಮಾಡಿಸಿಕೊಂಡ ನಾಲ್ವರ ವಿರುದ್ಧ ಕಾನೂನು ಕ್ರಮ ಜರುಗಿಸ ಬೇಕು, ಯಾವ ಆಧಾರ ಮೇಲೆ ಅಧಿಕಾರಿಗಳು ಭೂ ಮಂಜೂರಾತಿ ಮಾಡಿದರು, ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳ ಬೇಕೆಂಕು. ತಾಲೂಕಿನಲ್ಲಿ ರಾಜಕಾಲುವೆ, ನೀರುಗಾಲುವೆ, ಸ್ಮಶಾನ, ಸರ್ಕಾರಿ ಗೋಮಾಳವನ್ನ ಒತ್ತುವರಿ ಮಾಡಲಾಗಿದೆ ಇವರು ವಿರುದ್ಧ ಕ್ರಮ ತೆಗೆದುಕೊಳ್ಳ ಬೇಕೆಂದು ಆಗ್ರಹಿಸಿದರು.

ನಮ್ಮ ಹೋರಾಟಕ್ಕೆ ಬೆಂಬಲ ನೀಡಿದ ಪ್ರಜಾ ವಿಮೋಚನ ಚಳವಳಿ, ಜನಧ್ವನಿ ವೇದಿಕೆ,  ಭೂಮಿ ವಸತಿ ವಂಚಿತರ ಹೋರಾಟ ಸಮಿತಿ, ರೈತಪರ ಸಂಘಟನೆ, ಕನ್ನಡಪರ ಸಂಘಟನೆಗಳು, ವಕೀಲರು ಮತ್ತು ಮಾಧ್ಯಮದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

12 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago