40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ ದಿಟ್ಟ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಈ ಹಿನ್ನೆಲೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಜಿಲ್ಲಾಧಿಕಾರಿಗಳನ್ನ ಅಭಿನಂದಿಸುವ ಮೂಲಕ ಭೂಗಳ್ಳರಿಗೆ ಎಚ್ಚರಿಕೆ ನೀಡುವಂತೆ ಮನವಿ ಮಾಡಿದರು.

ದೊಡ್ಡಬಳ್ಳಾಪುರ ನಗರದಂಚಿನ ಅರೇಹಳ್ಳಿಗುಡ್ಡದಹಳ್ಳಿ ಸರ್ವೆ ನಂಬರ್ 57ರ ಸರ್ಕಾರಿ ಗೋಮಾಳದಲ್ಲಿ 6 ಎಕರೆ ಜಾಗವನ್ನ ಅಕ್ರಮವಾಗಿ ಮಂಜೂರು ಮಾಡಲಾಗಿತ್ತು. ಕಾನೂನುಬಾಹಿರವಾಗಿ ಮಂಜೂರಾತಿಯನ್ನ ವಜಾ ಮಾಡುವಂತೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಹೋರಾಟ ಮಾಡಿತ್ತು. ಹೋರಾಟದ ಫಲ ಕಾನೂನುಬಾಹಿರ ಮಂಜೂರಾತಿ ವಜಾ ಆಗಿದೆ, ಜಿಲ್ಲಾಧಿಕಾರಿಗಳಾದ ಬಸವರಾಜು ಸೆಪ್ಟೆಂಬರ್ 2ರಂದು ಹೊರಡಿಸಿದ ಆದೇಶದಲ್ಲಿ  ಸುಮಾರು 40 ಕೋಟಿ ಮೌಲ್ಯದ 6 ಎಕರೆ ಜಾಗವನ್ನ ಸರ್ಕಾರಿ ವಶಕ್ಕೆ ಪಡೆದಿದ್ದಾರೆ.

ಜಿಲ್ಲಾಧಿಕಾರಿಗಳ ದಿಟ್ಟ ಕ್ರಮ, ಭೂಗಳ್ಳರಿಗೆ ಎಚ್ಚರಿಕೆ ಸಂದೇಶವನ್ನ ರವಾನೆ ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಕಾನೂನುಬಾಹಿರ ಮಂಜೂರಾತಿ ವಜಾ ಮಾಡುವಂತೆ ಹೋರಾಟ ಮಾಡಿದ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಯು.ಮುನಿರಾಜು ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳನ್ನ ಅಭಿನಂದಿಸಿದರು.

ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಯು.ಮುನಿರಾಜು, ಸರ್ಕಾರಿ ಗೋಮಾಳ ಜಾಗವನ್ನ ಕಾನೂನುಬಾಹಿರವಾಗಿ ನಾಲ್ಕು ಮಂದಿಗೆ ಮಂಜೂರಾತಿ ಮಾಡಲಾಗಿತ್ತು, ಇದರ ವಿರುದ್ಧ ನಮ್ಮ ಸಂಘಟನೆ ಬೀದಿಗಿಳಿದು ಹೋರಾಟ ಮಾಡಿತ್ತು, ಮಂಜೂರಾತಿಯನ್ನ ವಜಾ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಜಿಲ್ಲಾಧಿಕಾರಿಗಳು ಯಾವುದಕ್ಕೂ ಅಂಜದೆ ಬಗ್ಗದೆ ಜಾಗವನ್ನ ಸರ್ಕಾರಿ ವಶಕ್ಕೆ ಪಡೆದಿದ್ದಾರೆ, ಅವರಿಗೆ ನಾವು ಅಭಿನಂದನೆ ಸಲ್ಲಿಸಿದ್ದೇವೆ.

ಇದೇ ವೇಳೆ ನಾವು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದು, ಕಾನೂನುಬಾಹಿರವಾಗಿ ಭೂ ಮಂಜೂರಾತಿ ಮಾಡಿಸಿಕೊಂಡ ನಾಲ್ವರ ವಿರುದ್ಧ ಕಾನೂನು ಕ್ರಮ ಜರುಗಿಸ ಬೇಕು, ಯಾವ ಆಧಾರ ಮೇಲೆ ಅಧಿಕಾರಿಗಳು ಭೂ ಮಂಜೂರಾತಿ ಮಾಡಿದರು, ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳ ಬೇಕೆಂಕು. ತಾಲೂಕಿನಲ್ಲಿ ರಾಜಕಾಲುವೆ, ನೀರುಗಾಲುವೆ, ಸ್ಮಶಾನ, ಸರ್ಕಾರಿ ಗೋಮಾಳವನ್ನ ಒತ್ತುವರಿ ಮಾಡಲಾಗಿದೆ ಇವರು ವಿರುದ್ಧ ಕ್ರಮ ತೆಗೆದುಕೊಳ್ಳ ಬೇಕೆಂದು ಆಗ್ರಹಿಸಿದರು.

ನಮ್ಮ ಹೋರಾಟಕ್ಕೆ ಬೆಂಬಲ ನೀಡಿದ ಪ್ರಜಾ ವಿಮೋಚನ ಚಳವಳಿ, ಜನಧ್ವನಿ ವೇದಿಕೆ,  ಭೂಮಿ ವಸತಿ ವಂಚಿತರ ಹೋರಾಟ ಸಮಿತಿ, ರೈತಪರ ಸಂಘಟನೆ, ಕನ್ನಡಪರ ಸಂಘಟನೆಗಳು, ವಕೀಲರು ಮತ್ತು ಮಾಧ್ಯಮದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

9 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

10 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

16 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago