40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ ದಿಟ್ಟ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಈ ಹಿನ್ನೆಲೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಜಿಲ್ಲಾಧಿಕಾರಿಗಳನ್ನ ಅಭಿನಂದಿಸುವ ಮೂಲಕ ಭೂಗಳ್ಳರಿಗೆ ಎಚ್ಚರಿಕೆ ನೀಡುವಂತೆ ಮನವಿ ಮಾಡಿದರು.

ದೊಡ್ಡಬಳ್ಳಾಪುರ ನಗರದಂಚಿನ ಅರೇಹಳ್ಳಿಗುಡ್ಡದಹಳ್ಳಿ ಸರ್ವೆ ನಂಬರ್ 57ರ ಸರ್ಕಾರಿ ಗೋಮಾಳದಲ್ಲಿ 6 ಎಕರೆ ಜಾಗವನ್ನ ಅಕ್ರಮವಾಗಿ ಮಂಜೂರು ಮಾಡಲಾಗಿತ್ತು. ಕಾನೂನುಬಾಹಿರವಾಗಿ ಮಂಜೂರಾತಿಯನ್ನ ವಜಾ ಮಾಡುವಂತೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಹೋರಾಟ ಮಾಡಿತ್ತು. ಹೋರಾಟದ ಫಲ ಕಾನೂನುಬಾಹಿರ ಮಂಜೂರಾತಿ ವಜಾ ಆಗಿದೆ, ಜಿಲ್ಲಾಧಿಕಾರಿಗಳಾದ ಬಸವರಾಜು ಸೆಪ್ಟೆಂಬರ್ 2ರಂದು ಹೊರಡಿಸಿದ ಆದೇಶದಲ್ಲಿ  ಸುಮಾರು 40 ಕೋಟಿ ಮೌಲ್ಯದ 6 ಎಕರೆ ಜಾಗವನ್ನ ಸರ್ಕಾರಿ ವಶಕ್ಕೆ ಪಡೆದಿದ್ದಾರೆ.

ಜಿಲ್ಲಾಧಿಕಾರಿಗಳ ದಿಟ್ಟ ಕ್ರಮ, ಭೂಗಳ್ಳರಿಗೆ ಎಚ್ಚರಿಕೆ ಸಂದೇಶವನ್ನ ರವಾನೆ ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಕಾನೂನುಬಾಹಿರ ಮಂಜೂರಾತಿ ವಜಾ ಮಾಡುವಂತೆ ಹೋರಾಟ ಮಾಡಿದ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಯು.ಮುನಿರಾಜು ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳನ್ನ ಅಭಿನಂದಿಸಿದರು.

ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಯು.ಮುನಿರಾಜು, ಸರ್ಕಾರಿ ಗೋಮಾಳ ಜಾಗವನ್ನ ಕಾನೂನುಬಾಹಿರವಾಗಿ ನಾಲ್ಕು ಮಂದಿಗೆ ಮಂಜೂರಾತಿ ಮಾಡಲಾಗಿತ್ತು, ಇದರ ವಿರುದ್ಧ ನಮ್ಮ ಸಂಘಟನೆ ಬೀದಿಗಿಳಿದು ಹೋರಾಟ ಮಾಡಿತ್ತು, ಮಂಜೂರಾತಿಯನ್ನ ವಜಾ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಜಿಲ್ಲಾಧಿಕಾರಿಗಳು ಯಾವುದಕ್ಕೂ ಅಂಜದೆ ಬಗ್ಗದೆ ಜಾಗವನ್ನ ಸರ್ಕಾರಿ ವಶಕ್ಕೆ ಪಡೆದಿದ್ದಾರೆ, ಅವರಿಗೆ ನಾವು ಅಭಿನಂದನೆ ಸಲ್ಲಿಸಿದ್ದೇವೆ.

ಇದೇ ವೇಳೆ ನಾವು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದು, ಕಾನೂನುಬಾಹಿರವಾಗಿ ಭೂ ಮಂಜೂರಾತಿ ಮಾಡಿಸಿಕೊಂಡ ನಾಲ್ವರ ವಿರುದ್ಧ ಕಾನೂನು ಕ್ರಮ ಜರುಗಿಸ ಬೇಕು, ಯಾವ ಆಧಾರ ಮೇಲೆ ಅಧಿಕಾರಿಗಳು ಭೂ ಮಂಜೂರಾತಿ ಮಾಡಿದರು, ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳ ಬೇಕೆಂಕು. ತಾಲೂಕಿನಲ್ಲಿ ರಾಜಕಾಲುವೆ, ನೀರುಗಾಲುವೆ, ಸ್ಮಶಾನ, ಸರ್ಕಾರಿ ಗೋಮಾಳವನ್ನ ಒತ್ತುವರಿ ಮಾಡಲಾಗಿದೆ ಇವರು ವಿರುದ್ಧ ಕ್ರಮ ತೆಗೆದುಕೊಳ್ಳ ಬೇಕೆಂದು ಆಗ್ರಹಿಸಿದರು.

ನಮ್ಮ ಹೋರಾಟಕ್ಕೆ ಬೆಂಬಲ ನೀಡಿದ ಪ್ರಜಾ ವಿಮೋಚನ ಚಳವಳಿ, ಜನಧ್ವನಿ ವೇದಿಕೆ,  ಭೂಮಿ ವಸತಿ ವಂಚಿತರ ಹೋರಾಟ ಸಮಿತಿ, ರೈತಪರ ಸಂಘಟನೆ, ಕನ್ನಡಪರ ಸಂಘಟನೆಗಳು, ವಕೀಲರು ಮತ್ತು ಮಾಧ್ಯಮದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

4 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

6 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

11 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

12 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

13 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

14 hours ago